ರಾಜ್ಯಸಭೆ ಟಿಕೆಟ್‌: ಕಾಂಗ್ರೆಸ್‌ಗೆ ಅಸಮಾಧಾನದ ಬಿಸಿ

ಆಯ್ಕೆ ನಿರ್ಧಾರ ಪ್ರಶ್ನಿಸಿದ ನಗ್ಮಾ, ಖೇರಾ

Team Udayavani, May 30, 2022, 11:01 PM IST

ರಾಜ್ಯಸಭೆ ಟಿಕೆಟ್‌: ಕಾಂಗ್ರೆಸ್‌ಗೆ ಅಸಮಾಧಾನದ ಬಿಸಿ

ನವದೆಹಲಿ/ಪಾಟ್ನಾ: ಮುಂದಿನ ತಿಂಗಳ ಹತ್ತನೇ ತಾರೀಕಿನಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಟಿಕೆಟ್‌ ನೀಡಿಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಚಿತ್ರ ನಟಿ ನಗ್ಮಾ, ಕಾಂಗ್ರೆಸ್‌ನ ವಕ್ತಾರ ಪವನ್‌ ಖೇರಾ ಸೇರಿದಂತೆ ಪ್ರಮುಖರು ಟ್ವೀಟ್‌ ಮಾಡಿ, “ನಮ್ಮನ್ನೇಕೆ ಆಯ್ಕೆ ಮಾಡಿಲ್ಲ. ನಮ್ಮಲ್ಲಿ ಇರುವ ಕೊರತೆ ಏನು’ ಎಂದು ಬಹಿರಂಗವಾಗಿಯೇ ಪ್ರಶ್ನೆ ಮಾಡಿದ್ದಾರೆ.

ಚಿತ್ರನಟಿ ನಗ್ಮಾ ಟ್ವೀಟ್‌ ಮಾಡಿ 2003ರಲ್ಲಿ ಕಾಂಗ್ರೆಸ್‌ ಸೇರುವ ಸಂದರ್ಭದಲ್ಲಿ ಸೋನಿಯಾ ಜಿ ಅವರೇ ರಾಜ್ಯಸಭೆ ಟಿಕೆಟ್‌ ನೀಡುವ ವಾಗ್ಧಾನ ಮಾಡಿದ್ದರು. ನಂತರ ನಾವು ಅಧಿಕಾರ ಕಳೆದುಕೊಂಡೆವು. 18 ವರ್ಷ ಕಳೆದರೂ ಅವಕಾಶ ಸಿಗಲಿಲ್ಲ. ನನಗೇನು ಅರ್ಹತೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರದಿಂದ ಸ್ಪರ್ಧಿಸಿರುವ ಇಮ್ರಾನ್‌ ಪ್ರತಾಪ್‌ಗ್ಡ ಅವರ ಮುಂದೆ ನಮ್ಮ ಪ್ರಯತ್ನ ವಿಫ‌ಲವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮತ್ತೊಬ್ಬ ಮುಖಂಡ ಪವನ್‌ ಖೇರಾ ಕೂಡ “ನಮ್ಮ ತಪಸ್ಸು ವಿಫ‌ಲವಾಗಿದೆ’ ಎಂದು ಬರೆದುಕೊಂಡಿದ್ದಾರೆ. ರಾಜಸ್ಥಾನದಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸನ್ಯಾಮ್‌ ಲೋಧ ಅವರು ಕೂಡ ಪಕ್ಷದ ಅಭ್ಯರ್ಥಿಗಳ ಯಾದಿಯನ್ನು ಮರು ಪರಿಶೀಲಿಸಬೇಕೆಂದು ಕೋರಿದ್ದಾರೆ.

ಪ್ರಮುಖರ ನಾಮಪತ್ರ:
ಅತೃಪ್ತಿ ಸ್ಫೋಟದ ನಡುವೆಯೇ ಚೆನ್ನೈನಲ್ಲಿ ಚಿದಂಬರಂ, ಭೋಪಾಲದಲ್ಲಿ ಗೋವಿಂದ ಸಿಂಗ್‌, ರಂಜೀತ್‌ ರಂಜನ್‌ ಸೇರಿದಂತೆ ಪ್ರಮುಖರು ನಾಮಪತ್ರ ಸಲ್ಲಿಸಿದ್ದಾರೆ.

ಬೇಡಿಕೆಗೆ ಸಮ್ಮತಿಸದ ಜೆಎಂಎಂ:
ರಾಜ್ಯಸಭೆ ಚುನಾವಣೆ ನಿಮಿತ್ತ ಜಾರ್ಖಂಡ್‌ನ‌ಲ್ಲಿ ಕೂಡ ಕಾಂಗ್ರೆಸ್‌ ಮತ್ತು ಜಾರ್ಖಂಡ್‌ ಮುಕ್ತಿ ಮೋರ್ಚಾ ನಡುವೆ ಕೊಂಚ ಅತೃಪ್ತಿಯ ಹೊಗೆ ಕಾಣಿಸಿಕೊಂಡಿದೆ. ರಾಜ್ಯಸಭೆಯ ಅಭ್ಯರ್ಥಿಯನ್ನಾಗಿ ಮಹುವಾ ಮಜಿ ಅವರನ್ನೇ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಆಯ್ಕೆ ಮಾಡಿದ್ದಾರೆ. ಈ ಸ್ಥಾನವನ್ನು ತನಗೆ ನೀಡಬೇಕು ಎಂದು ಕಾಂಗ್ರೆಸ್‌ ಕೋರಿತ್ತು. ಆದರೆ, ಈ ಬೇಡಿಕೆಗೆ ಸೊರೇನ್‌ ಸಮ್ಮತಿ ನೀಡಿರಲಿಲ್ಲ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೇನ್‌ ಜತೆಗೆ ಚರ್ಚೆ ನಡೆಸಿಯೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಹೇಳಿಕೊಂಡಿದ್ದಾರೆ. ಆದರೆ, ಈ ಆಯ್ಕೆಗೆ ಜಾರ್ಖಂಡ್‌ ಪ್ರದೇಶ ಕಾಂಗ್ರೆಸ್‌ ಸಮಿತಿಯಲ್ಲಿ ಅತೃಪ್ತಿ ಇದೆ ಎಂದು ಹೇಳಲಾಗುತ್ತಿದೆ.

ಆರ್‌.ಸಿ.ಪಿ.ಸಿಂಗ್‌ಗೆ ಅವಕಾಶ ಕೊಡಲಾಗಿದೆ: ನಿತೀಶ್‌
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಜೆಡಿಯುನ ಏಕೈಕ ಸಚಿವರಾಗಿರುವ ಆರ್‌.ಸಿ.ಪಿ. ಸಿಂಗ್‌ ಅವರಿಗೆ ರಾಜ್ಯಸಭೆ ಟಿಕೆಟ್‌ ನಿರಾಕರಿಸಲಾಗಿದೆ. ಆದರೆ, ಸದ್ಯಕ್ಕೆ ಅವರ ಸದಸ್ಯದ ಅವಧಿ ಇನ್ನೂ ಇರುವುದರಿಂದ ಅವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಬೇಕಾಗಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ. ಸಿಂಗ್‌ ಅವರಿಗೆ ಸಾಕಷ್ಟು ಅವಕಾಶಗಳನ್ನು ಕೊಡಲಾಗಿದೆ.

ಅವರು ಐಎಎಸ್‌ ಅಧಿಕಾರಿಯಾಗಿದ್ದಾಗಿನಿಂದಲೂ ಗೌರವಗಳು ಪ್ರಾಪ್ತಿಯಾಗುತ್ತಿವೆ ಎಂದು ಹೇಳಿದ್ದಾರೆ. ಜೆಡಿಯು ಅಭ್ಯರ್ಥಿಯನ್ನಾಗಿ ಜಾರ್ಖಂಡ್‌ನ‌ ಖೀರು ಮಹಾತೋ ಅವರನ್ನು ಕಣಕ್ಕೆ ಇಳಿಸಲಾಗಿದೆ. ನಿತೀಶ್‌ ಅವರು ಈ ಮಾತುಗಳನ್ನು ಹೇಳುವಾಗ ಬಿಹಾರದ ಬಿಜೆಪಿ ಮುಖಂಡರೂ ಉಪಸ್ಥಿತರಿದ್ದರು.

ಬಿಜೆಪಿಯಲ್ಲಿ ಪ್ರಮುಖರಿಗೆ ಇಲ್ಲ ಅವಕಾಶ
ಬಿಜೆಪಿಯಲ್ಲಿ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಕೇಂದ್ರ ಮಾಜಿ ಸಚಿವ ಪ್ರಕಾಶ್‌ ಜಾವಡೇಕರ್‌, ಹಿರಿಯ ಮುಖಂಡರಾಗಿರುವ ಓ.ಪಿ.ಮಾಥುರ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿ ದುಷ್ಯಂತ್‌ ಗೌತಮ್‌, ವಿನಯ ಸಹಸ್ರ ಬುದ್ಧೆ, ಶಿವಪ್ರತಾಪ್‌ ಶುಕ್ಲಾ, ಸಯ್ಯದ್‌ ಝಫ‌ರ್‌ ಇಸ್ಲಾಂ ಅವರ ಹೆಸರನ್ನು ರಾಜ್ಯಸಭೆ ಚುನಾವಣೆಗೆ ಪರಿಗಣಿಸಲಾಗಿಲ್ಲ,

 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.