ರಾಜ್ಯಸಭೆಯಲ್ಲಿ ಎನ್ಆರ್ಸಿ ಗದ್ದಲ
Team Udayavani, Jul 31, 2018, 6:00 AM IST
ಹೊಸದಿಲ್ಲಿ: ಅಸ್ಸಾಂನಲ್ಲಿ ಬಿಡುಗಡೆಯಾದ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್ಆರ್ಸಿ) ಅಂತಿಮ ಕರಡು ವರದಿಯು ಸೋಮವಾರ ರಾಜ್ಯಸಭೆ ಕಲಾಪವನ್ನು ನುಂಗಿಹಾಕಿತು. ಎನ್ಆರ್ಸಿ ವಿಚಾರದಲ್ಲಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದ ಕಾರಣ, ಕಲಾಪವನ್ನು ಮುಂದೂಡಬೇಕಾಯಿತು.
ರಾಜ್ಯಸಭೆಯಲ್ಲಿ ಕಲಾಪ ಆರಂಭವಾದೊಡನೆ ಎಸ್ಪಿ ಮತ್ತು ತೃಣಮೂಲ ಕಾಂಗ್ರೆಸ್ ಸದಸ್ಯರು ಎನ್ಆರ್ಸಿ ಕುರಿತು ಚರ್ಚೆಗೆ ಆಗ್ರಹಿಸಿ ಕೋಲಾಹಲ ಎಬ್ಬಿಸಿದರು. ಸತತ ಮೂರು ಬಾರಿ ಕಲಾಪ ಮುಂದೂಡಲ್ಪಟ್ಟರೂ, ಗದ್ದಲ ನಿಲ್ಲಲೇ ಇಲ್ಲ. ಟಿಎಂಸಿ ನಾಯಕ ಡೆರೆಕ್ ಒಬ್ರಿಯಾನ್ ಅವರು, ಎನ್ಆರ್ಸಿ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಆದರೆ, ಇದಕ್ಕೆ ಒಪ್ಪದ ಸಭಾಪತಿ ವೆಂಕಯ್ಯ ನಾಯ್ಡು ಅವರು, ನಾನು ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ರನ್ನು ಇಲ್ಲಿಗೆ ಬಂದು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದೇನೆ ಎಂದರು. ಸಚಿವರು ಆಗಮಿಸಿದ ಬಳಿಕವೂ, ಪ್ರತಿಪಕ್ಷ ಸದಸ್ಯರು ಗದ್ದಲ ಮುಂದುವರಿಸಿದ ಕಾರಣ, ಒಂದು ಹಂತದಲ್ಲಿ ಆಕ್ರೋಶಗೊಂಡ ಸಭಾಪತಿ ನಾಯ್ಡು, “ನೀವೂ ಏನನ್ನೂ ಮಾತನಾಡುತ್ತಿಲ್ಲ, ಸಚಿವರಿಗೂ ಮಾತನಾಡಲು ಬಿಡುತ್ತಿಲ್ಲ ಎಂದರೆ ಹೇಗೆ’ ಎಂದು ಪ್ರಶ್ನಿಸಿ, ಕಲಾಪವನ್ನು 10 ನಿಮಿಷ ಮುಂದೂಡಿದರು.
ಮತ್ತೆ ಕಲಾಪ ಆರಂಭವಾದಾಗ ಒಬ್ರಿಯಾನ್ ಅವರು ಮಾತನಾಡಿ, ಎನ್ಆರ್ಸಿ ವಿಚಾರವು ರಾಜಕೀಯ ವಿಷಯವಲ್ಲ. ಅದು ಮಾನವ ಹಕ್ಕುಗಳು, ಮಾನವತೆ ಮತ್ತು ರಾಷ್ಟ್ರೀಯ ವಿಚಾರ. ಹೀಗಾಗಿ ಮಾತನಾಡಲು ಅವಕಾಶ ನೀಡಬೇಕು ಎಂದರು. ಇದಕ್ಕೆ ನಾಯ್ಡು ಅವರು, ಮಂಗಳವಾರ ಬೆಳಗ್ಗೆ ಮಾತ ನಾಡಲು ಅವಕಾಶ ನೀಡುತ್ತೇನೆ ಎಂದರು. ತೃಪ್ತರಾಗದ ಟಿಎಂಸಿ ಸದಸ್ಯರು ಗದ್ದಲ ನಡೆಸಿದ್ದರಿಂದ ಕಲಾಪ ಮುಂದೂಡಲಾಯಿತು.
ತನಿಖೆಯಾಗಲಿ: ಕೈಗಾರಿಕೋದ್ಯಮಿಗಳ ಅನುಕೂಲಕ್ಕಾಗಿ ಯುಪಿಎ ಅವಧಿಯಲ್ಲಿ 80:20 ಚಿನ್ನ ಆಮದು ಯೋಜನೆ ಜಾರಿ ಮಾಡಲಾಗಿತ್ತು. ಇದರಿಂದ ಒಂದು ಲಕ್ಷ ಕೋಟಿ ರೂ. ನಷ್ಟವಾಗಿದೆ. ಹೀಗಾಗಿ, ಈ ಕುರಿತು ಅಂದಿನ ಹಣಕಾಸು ಸಚಿವರು, ಆರ್ಬಿಐ ಗವರ್ನರ್ ವಿರುದ್ಧ ಸಿಬಿಐ ಅಥವಾ ಇ.ಡಿ.ತನಿಖೆ ನಡೆಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!