ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭಕ್ತರಿಗೆ ವೀಕ್ಷಿಸಲು ಸಾಧ್ಯವಿಲ್ಲ, ಯಾಕೆ?
ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದು, ಅಂದಾಜು 75 ದಿನಗಳೊಳಗೆ ಉತ್ಖನನ ಕಾರ್ಯ ಪೂರ್ಣ
Team Udayavani, Feb 4, 2021, 12:05 PM IST
ನವದೆಹಲಿ: ಸುಪ್ರೀಂಕೋರ್ಟ್ ಆದೇಶದಂತೆ ಶ್ರೀರಾಮ್ ಜನ್ಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಆಶ್ರಯದಲ್ಲಿ ಪವಿತ್ರ ನಗರಿ ಅಯೋಧ್ಯೆಯಲ್ಲಿ ಬೃಹತ್ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ರಾಮಮಂದಿರ ನಿರ್ಮಾಣ ಕಾರ್ಯ ವೀಕ್ಷಿಸಲು ಭಕ್ತರಿಗೆ ಸಾಧ್ಯವಿಲ್ಲ ಎಂದು ಟ್ರಸ್ಟ್ ತಿಳಿಸಿದೆ.
ಇದನ್ನೂ ಓದಿ:ತಡರಾತ್ರಿ ವಿಧಾನಸೌಧದ ಕಚೇರಿಯಲ್ಲಿ ಹೋಮ-ಹವನ ಮಾಡಿಸಿದ ಸಚಿವ ಎಸ್.ಅಂಗಾರ
ನಿರ್ಮಾಣ ಕಾರ್ಯ ವೀಕ್ಷಿಸಲು ಯಾಕೆ ಸಾಧ್ಯವಿಲ್ಲ?
ರಾಮ್ ಜನ್ಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಈ ಕುರಿತು ಮಾಹಿತಿ ನೀಡಿದ್ದು, ಭದ್ರತೆಯ ಕಾರಣದಿಂದಾಗಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯವನ್ನು ವೀಕ್ಷಿಸಲು ರಾಮ ಭಕ್ತರಿಗೆ ಸಾಧ್ಯವಾಗುವುದಿಲ್ಲ ಎಂದು ವಿವರಿಸಿದ್ದಾರೆ.
ರಾಮ ಮಂದಿರ ನಿರ್ಮಾಣ ಸ್ಥಳದಲ್ಲಿ ಯಾವುದೇ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಮಂದಿರ ನಿರ್ಮಾಣದಲ್ಲಿ ತೊಡಗಿರುವ ಇಂಜಿನಿಯರ್ ಗಳು ಬೃಹತ್ ಕ್ರೇನ್ಸ್ ಗಳನ್ನು ಉಪಯೋಗಿಸುತ್ತಿರುವುದಾಗಿ ರಾಯ್ ತಿಳಿಸಿದ್ದಾರೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಗುಂಡಿನ ದಾಳಿ; ಯೋಧ ಹುತಾತ್ಮ
ಈ ದೃಷ್ಟಿಕೋನದ ನಿಟ್ಟಿನಲ್ಲಿಯೂ ರಾಮಮಂದಿರ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭಕ್ತರು ಭೇಟಿ ನೀಡಲು ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದ್ದೇವೆ. ಇಂತಹ ಸನ್ನಿವೇಶದಲ್ಲಿ ಭಕ್ತರಿಗೆ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಹೋಗುವುದನ್ನು ನಿರ್ಬಂಧಿಸುವ ಮೂಲಕ ಆಕಸ್ಮಿಕವಾಗಿ ಸಂಭವಿಸುವ ಘಟನೆಗಳನ್ನು ತಡೆಯಬಹುದಾಗಿದೆ ಎಂದು ರಾಯ್ ವಿವರಿಸಿದ್ದಾರೆ.
ಈ ಮೊದಲು ರಾಮಮಂದಿರ ನಿರ್ಮಾಣ ಕಾರ್ಯವನ್ನು ನಿಗದಿತ ಸ್ಥಳದಿಂದ ವೀಕ್ಷಿಸಲು ರಾಮ ಭಕ್ತರಿಗೆ ಅವಕಾಶ ನೀಡಲು ಟ್ರಸ್ಟ್ ಒಪ್ಪಿಗೆ ನೀಡಿತ್ತು. ಆದರೆ ಈಗ ಅದು ಸಾಧ್ಯವಿಲ್ಲ. ಆದರೂ ರಾಮಮಂದಿರ ನಿರ್ಮಾಣ ಕಾರ್ಯದ ವಿವರವನ್ನು ಭಕ್ತರಿಗೆ ಮಾಧ್ಯಮದ ಮೂಲಕ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇವೆಲ್ಲವುಗಳ ನಡುವೆ ಮುಖ್ಯವಾಗಿ ಭದ್ರತಾ ಕಾರಣದಿಂದಾಗಿ ರಾಮಮಂದಿರ ನಿರ್ಮಾಣ ಕಾರ್ಯ ವೀಕ್ಷಣೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದಿರುವ ಟ್ರಸ್ಟ್, ಈಗಾಗಲೇ ಲಾರ್ಸನ್ ಆ್ಯಂಡ್ ಟರ್ಬೊ ಕಂಪನಿ ಮತ್ತು ಇಂಜಿನಿಯರ್ ಗಳು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದು, ಅಂದಾಜು 75 ದಿನಗಳೊಳಗೆ ಉತ್ಖನನ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದೆ.
ರಾಮಮಂದಿರ ಫೌಂಡೇಶನ್ ಕೆಲಸ ಏಪ್ರಿಲ್ ನಿಂದ ಆರಂಭವಾಗಲಿದೆ ಎಂದು ತಿಳಿಸಿರುವ ಕಂಪನಿ, ಮಂದಿರದ ಮೊದಲ ಮಹಡಿ ಕಾರ್ಯ ಮುಂದಿನ ಒಂದೂವರೆ ವರ್ಷದೊಳಗೆ ಆರಂಭಿಸಲಾಗುವುದು ಎಂದು ತಿಳಿಸಿದೆ. ಸಂಪೂರ್ಣ ರಾಮಮಂದಿರ ನಿರ್ಮಾಣ ಕಾರ್ಯ 36-40 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ