ಹಿರಿಯ ವಕೀಲ ರಾಮ್ ಜೇಠ್ಮಲಾನಿ ವಿಧಿವಶ
Team Udayavani, Sep 8, 2019, 9:07 AM IST
ಹೊಸದಿಲ್ಲಿ: ಮಾಜಿ ಕಾನೂನು ಸಚಿವ, ಹಿರಿಯ ವಕೀಲ ರಾಮ್ ಜೇಠ್ಮಲಾನಿ ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರಾಮ್ ಜೇಠ್ಮಲಾನಿ ಅವರಿಗೆ 96 ವರ್ಷ ವಯಸ್ಸಾಗಿತ್ತು. ಹೊಸದೆಹಲಿಯ ಮನೆಯಲ್ಲಿ ಅವರು ಕೊನೆಯುಸಿರೆಳೆದರು.
ಸಿಂಧ್ ಪ್ರಾಂತ್ಯದ ಶಿಕಾರ್ಪುರದಲ್ಲಿ ಸೆಪ್ಟೆಂಬರ್ 14 1923ರಲ್ಲಿ ರಾಮ್ ಬೂಲ್ ಚಂದ್ ಜೇಠ್ಮಲಾನಿ ಜನಿಸಿದರು. ತನ್ನ 13ನೇ ವಯಸ್ಸಿನಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಅವರು 17ನೇ ವರ್ಷಕ್ಕೆ ಕಾನೂನು ಪದವಿ ಪಡೆದಿದ್ದರು.
ಹಲವು ಮಹತ್ವದ ಪ್ರಕರಣಗಳನ್ನು ಯಶಸ್ವಿಯಾಗಿ ವಾದಿಸಿದ್ದ ಜೇಠ್ಮಲಾನಿ ಒಂದು ಕಾಲದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಸುಪ್ರೀಂ ಕೋರ್ಟ್ ವಕೀಲರಾಗಿದ್ದರು.
ಭಾರತೀಯ ಜನತಾ ಪಕ್ಷದಿಂದ ಮುಂಬೈನಲ್ಲಿ ಚುನಾವಣೆ ಎದುರಿಸಿದ್ದ ರಾಮ್ ಜೇಠ್ಮಲಾನಿ ಎರಡು ಬಾರಿ ಸಂಸದರಾಗಿದ್ದರು. ಕಾನೂನು ಸಚಿವ ಮತ್ತು ನಗರಾಭಿವೃದ್ದಿ ಸಚಿವರಾಗಿ ಕೆಲಸ ಮಾಡಿದ್ದ ಅವರು 2010ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ನನ್ನ ಕೇಸಲ್ಲೂ ಸುಳ್ಳು ಹೇಳಿದ್ದ ಶ್ರೀಕುಮಾರ್: ನಂಬಿ ನಾರಾಯಣನ್
ಮುರುಘರಾಜೇಂದ್ರ ಶ್ರೀ ಗಳ 50ನೇ ಹುಟ್ಟುಹಬ್ಬ :ಬೈನಾ ಕನ್ನಡ ವಿದ್ಯಾರ್ಥಿಗಳಿಗೆ ನೆರವು
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್: ಓಟ ಬೆಳೆಸುವರೇ ಸಿಂಧು?
ಲೀಡ್ಸ್ ಟೆಸ್ಟ್: ಇಂಗ್ಲೆಂಡ್ 3-0 ಪರಾಕ್ರಮ: ಸ್ಟೋಕ್ಸ್ ಬಳಗಕ್ಕೆ 7 ವಿಕೆಟ್ ಜಯ
ರಾಜ್ಯಾದ್ಯಂತ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆ: ಮೊದಲ ದಿನ ಯಶಸ್ವಿ
ಟೆಂಪೋ ಟ್ರಾವೆಲರ್ – ಸರಕಾರಿ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ