ಅಯೋಧ್ಯೆಯಲ್ಲಿ ರಾಮ ಮಂದಿರ 2025ರಲ್ಲಿ ಆದೀತು: ಜೋಶಿ ವ್ಯಂಗ್ಯ
Team Udayavani, Jan 18, 2019, 6:56 AM IST
ಪ್ರಯಾಗ್ರಾಜ್ : 2019ರ ಲೋಕಸಭಾ ಚುನಾವಣೆಯನ್ನು ಒಂದೊಮ್ಮೆ ಗೆದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲಾರರು ಎಂದು ವ್ಯಂಗ್ಯವಾಡುವ ಮೂಲಕ ಆರ್ಎಸ್ಎಸ್ , ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಮೇಲೆ ನೇರ ವಾಕ್ ದಾಳಿ ನಡೆಸಿದೆ.
ರಾಮ ಮಂದಿರ ವಿಷಯವನ್ನು ಉಲ್ಲೇಖೀಸಿದ ಆರ್ಎಸ್ಎಸ್ ನಂಬರ್ 2 ಮತ್ತು ಅದರ ಪ್ರಧಾನ ಕಾರ್ಯದರ್ಶಿ Bhaiyyaji ಜೋಷಿ ಅವರು “ಇನ್ನೇನಿದ್ದರೂ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು 2025ರಲ್ಲಿ ನಿರ್ಮಿಸಲಾಗುವುದು’ ಎಂದು ವ್ಯಂಗ್ಯವಾಡಿದರು.
ಪ್ರಯಾಗ್ರಾಜ್ ನಲ್ಲೀಗ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸುತ್ತಿರುವ ಜೋಷಿ ಅವರು “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಳಿಕ ದೇಶದ ಆರ್ಥಿಕಾಭಿವೃದ್ಧಿ ನಾಗಾಲೋಟದಲ್ಲಿ ಸಾಗಲಿದೆ; ಹೇಗೆ 1952ರಲ್ಲಿ ಗುಜರಾತ್ ನಲ್ಲಿ ಸೋಮನಾಥ ದೇವಸ್ಥಾನದ ನಿರ್ಮಾಣವಾದ ಬಳಿಕ ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಿತೋ ಹಾಗೆಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದರೆ ದೇಶದ ಅಭಿವೃದ್ಧಿ ಮಿಂಚಿನ ಗತಿಯಲ್ಲಿ ನಡೆಯುವುದು ನಿಶ್ಚಿತ ಎಂದು ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಲವಾರು ಸವಾಲುಗಳಿರಬಹುದು; ಆದರೂ ಅವುಗಳನ್ನು ಬಗೆಹರಿಸಿ ಮುನ್ನಡೆಯುವುದು ಅಗತ್ಯ. ಏಕೆಂದರೆ ರಾಮ ಮಂದಿರ ಕೇವಲ ಒಂದು ದೇವಸ್ಥಾನ ಅಲ್ಲ; ಅದು ದೇಶದ ಕೋಟ್ಯಂತರ ಹಿಂದುಗಳ ನಂಬಿಕೆ, ವಿಶ್ವಾಸದ ಪ್ರತೀಕ ಎಂದು ಜೋಷಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ