ರಾಮನವಮಿ ಗಲಾಟೆ: ಸಹಜ ಸ್ಥಿತಿಗೆ ಮರಳಿದ ರಾಜ್ಯಗಳು
Team Udayavani, Apr 2, 2023, 6:25 AM IST
ನವದೆಹಲಿ: ರಾಮನವಮಿಯಂದು ಹಿಂಸಾಚಾರಕ್ಕೆ ಸಾಕ್ಷಿಯಾದ ರಾಜ್ಯಗಳು ಶನಿವಾರ ಸಹಜ ಸ್ಥಿತಿಗೆ ಬಂದಿದ್ದು, ಪರಿಸ್ಥಿತಿ ಶಾಂತವಾಗಿದೆ. ಗಲಭೆ ಪೀಡಿತ ಪಶ್ಚಿಮ ಬಂಗಾಳದ ಹೌರಾದಲ್ಲಿ ಡ್ರೋನ್ಗಳ ಮೂಲಕ ಕಣ್ಗಾವಲು ಇಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬಿಹಾರದ ಸಸಾರಾಂನಲ್ಲಿ ಶನಿವಾರವೂ ನಿಷೇಧಾಜ್ಞೆ ಮುಂದುವರಿದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಕೋಮುಗಲಭೆ ಹಿನ್ನೆಲೆಯಲ್ಲಿ 45 ಮಂದಿಯನ್ನು ಬಂಧಿಸಲಾಗಿದೆ. ಸೆಕ್ಷನ್ 144 ಜಾರಿಯಾಗಿರುವ ಕಾರಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಿಹಾರ ಭೇಟಿ ರದ್ದಾಗಿದೆ.
ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ಇದು ಸಹಜವಾಗಿ ನಡೆದ ಗಲಭೆಯಲ್ಲ. ರಾಜಕೀಯ ಪ್ರೇರಿತ ಹಿಂಸಾಚಾರ ಎಂದು ಹೇಳಿದ್ದಾರೆ.
ಇದೇ ವೇಳೆ, ಉತ್ತರಪ್ರದೇಶದ ಮಥುರಾದಲ್ಲಿ ಜಾಮಾ ಮಸೀದಿಯ ಮುಂಭಾಗದಲ್ಲಿ ಕೇಸರಿ ಬಾವುಟ ಹಾರಿಸಿದ ವಿಡಿಯೋ ಬಹಿರಂಗವಾಗುತ್ತಿದ್ದಂತೆ, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ