2024ರ ಮಕರ ಸಂಕ್ರಾಂತಿಗೆ ರಾಮನ ಪ್ರಾಣ ಪ್ರತಿಷ್ಠಾಪನೆ; ರಾಮಮಂದಿರಕ್ಕೆ 1,800 ಕೋಟಿ ರೂ.
Team Udayavani, Sep 13, 2022, 7:35 AM IST
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರದ ಕಾಮಗಾರಿ 2023ರ ಡಿಸೆಂಬರ್ನೊಳಗೆ ಪೂರ್ಣಗೊಳ್ಳಲಿದೆ.
2024ರ ಮಕರ ಸಂಕ್ರಾಂತಿ ಸಮಯಕ್ಕೆ ಗರ್ಭಗುಡಿಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡುವ ಸಾಧ್ಯತೆಯಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಗಾಜಿಯಾಬಾದ್ನಲ್ಲಿ ಭಾನುವಾರ ನಡೆದ ಟ್ರಸ್ಟ್ನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಟ್ರಸ್ಟ್ನ ನಿಯಮಗಳು ಹಾಗೂ ಮ್ಯಾನ್ಯುಯಲ್ ಅನ್ನು ಸಭೆಯಲ್ಲಿ ಅಂತಿಮಗೊಳಿಸಲಾಗಿದೆ.
ಮಂದಿರ ನಿರ್ಮಾಣಕ್ಕೆ ಸರಿಸುಮಾರು 1,800 ಕೋಟಿ ರೂ. ವೆಚ್ಚ ತಗುಲಲಿದೆ. ದೇಗುಲದ ಆವರಣದಲ್ಲಿ ಹಿಂದೂ ಧರ್ಮದ ಪ್ರಸಿದ್ಧ ಯೋಗಿ, ಸಾಧು-ಸಂತರ ಮೂರ್ತಿ ಹಾಗೂ ರಾಮಾಯಣ ಕಾಲದ ಪ್ರಮುಖರ ಮೂರ್ತಿಗಳನ್ನು ಸ್ಥಾಪಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದೂ ಚಂಪತ್ ರಾಯ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ