ರಾಮ ಮಂದಿರ : ಪ್ರಧಾನಿ ಮೋದಿ ಹೇಳಿಕೆಗೆ ಶಿವ ಸೇನೆ ಖಂಡನೆ
Team Udayavani, Jan 2, 2019, 11:00 AM IST
ಹೊಸದಿಲ್ಲಿ : ‘2014ರಲ್ಲಿ ರಾಮ ಮಂದಿರ ನಿರ್ಮಾಣ ವಿಷಯವನ್ನು ಮುಂದಿಟ್ಟುಕೊಂಡೇ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದಿತ್ತು; ಈಗ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ವಿಷಯ ಕೋರ್ಟಿನಲ್ಲಿದೆ; ಅದು ಇತ್ಯರ್ಥವಾಗುವ ತನಕ ಏನೂ ಮಾಡಲಾಗದು ಅಂತಿದ್ದಾರೆ. ಇದು ಸರಿಯಾ ?’ ಎಂದು ಶಿವ ಸೇನೆ ಟೀಕಿಸಿದೆ.
‘ರಾಮಮಂದಿರದ ವಿಷಯದಲ್ಲಿ ಈಗ ಏನೂ ಮಾಡಲಾಗದು ಎನ್ನುವುದಾದರೆ ರಾಮ ಮಂದಿರ ವಿಷಯದಲ್ಲಿ ಅಷ್ಟೆಲ್ಲ ರಕ್ತಪಾತ ಮಾಡುವ ಅಗತ್ಯ ಇತ್ತಾ ? ರಾಮ ಮಂದಿರ ವಿಷಯ ಕೋರ್ಟಿನಲ್ಲಿದೆ ಎಂದು ಹೇಳಿ ಕೈತೊಳೆದುಕೊಳ್ಳುವ ಪ್ರಧಾನ ಮಂತ್ರಿ ನಮಗೆ ಬೇಡ’ ಎಂದು ಹಿರಿಯ ಶಿವ ಸೇನೆ ನಾಯಕ, ಸಂಸದ ಸಂಜಯ್ ರಾವತ್ ಹೇಳಿದರು.
‘ಪ್ರಧಾನಿ ಮೋದಿ ಅವರು ಇಷ್ಟನ್ನೇ ಹೇಳುವುದಿದ್ದರೆ ರಾಮ ಮಂದಿರ ನಿರ್ಮಾಣ ಆಂದೋಲನ ನಡೆಸುವ ಅಗತ್ಯವೇ ಇರಲಿಲ್ಲ’ ಎಂದು ರಾವತ್, ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಖಂಡಿಸುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ