Rama Navami: ಮೋದಿ vs ದೀದಿ ರಾಮನವಮಿ ಸಂಘರ್ಷ… ವಿಪಕ್ಷಗಳ ವಿರುದ್ಧ ಮೋದಿ ವಾಗ್ಧಾಳಿ


Team Udayavani, Apr 17, 2024, 8:45 AM IST

Rama Navami: ಮೋದಿ vs ದೀದಿ ರಾಮನವಮಿ ಸಂಘರ್ಷ… ವಿಪಕ್ಷಗಳ ವಿರುದ್ಧ ಮೋದಿ ವಾಗ್ಧಾಳಿ

ಗಯಾ/ಬಾಲುರ್‌ಘಾಟ್‌: ಪಶ್ಚಿಮ ಬಂಗಾಲದಲ್ಲಿ ರಾಮನವಮಿ ಆಚರಣೆ ನಿಲ್ಲಿಸುವ ಸಂಚನ್ನು ತೃಣಮೂಲ ಕಾಂಗ್ರೆಸ್‌(ಟಿಎಂಸಿ) ರೂಪಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಲದ ಬಾಲೂರ್‌ ಘಾಟ್‌ನ ಚುನಾ ವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರತಿಷ್ಠಾಪನೆಯ ಬಳಿಕ ಈಗ ಮೊದಲ ಬಾರಿಗೆ ರಾಮನವಿ ಆಚರಿಸಲಾಗುತ್ತಿದೆ. ಆದರೆ ಪಶ್ಚಿಮ ಬಂಗಾಲದಲ್ಲಿ ರಾಮನವಮಿ ಆಚರಣೆ ಯನ್ನು ಟಿಎಂಸಿ ಯಾವಾಗಲೂ ತಡೆಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ಸಾಕಷ್ಟು ಸಂಚು ರೂಪಿ ಸುತ್ತಾ ಬಂದಿದೆ. ಆದರೆ ಯಾವಾಗಲೂ ಸತ್ಯಕ್ಕೆ ಗೆಲುವು ಸಿಗುತ್ತದೆ ಎಂದು ಹೇಳಿದರು. ಟಿಎಂಸಿಯ ಪ್ರಯತ್ನಕ್ಕೆ ಸೋಲಾಗಿದ್ದು, ಬುಧವಾರ ಪಶ್ಚಿಮ ಬಂಗಾಲದಲ್ಲಿ ರಾಮನವಮಿ ಆಚರಣೆಯ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯ ಮೂಲಕ ನಡೆಯಲಿದೆ‌. ರಾಮನವಮಿ ಆಚರಣೆಗೆ ಕೋರ್ಟ್‌ ಅನುಮತಿ ನೀಡಿದೆ. ಇದಕ್ಕಾಗಿ ನಾನು ಪಶ್ಚಿಮ ಬಂಗಾಲದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಇದರ ಜತೆಗೆ ಟಿಎಂಸಿ ನಾಯಕರು ಭ್ರಷ್ಟಾ ಚಾರದಲ್ಲಿ ತೊಡಗಿದ್ದಾರೆ ಎಂದೂ ಪ್ರಧಾನಿ ಆರೋಪಿಸಿದ್ದಾರೆ.

ಪ್ರಧಾನಿಗೆ ತಿರುಗೇಟು ನೀಡಲು ರಾಮನವಮಿ ಉತ್ಸವ
ಜಲಪಾಯ್‌ಗಾರಿ: ಪಶ್ಚಿಮ ಬಂಗಾಲದ ಹೌರಾದಲ್ಲಿ ಬುಧವಾರ ರಾಮ ನವಮಿ ಮತ್ತು ಬೃಹತ್‌ ಶೋಭಾಯಾತ್ರೆ ನಡೆಸಲು ಟಿಎಂಸಿ ತೀರ್ಮಾನಿಸಿದೆ. ಈ ಬಗ್ಗೆ ಹೌರಾದ ಸಂಸದ ಪ್ರಸೂನ್‌ ಬ್ಯಾನರ್ಜಿ ಘೋಷಣೆ ಮಾಡಿದ್ದಾರೆ. ಬಾಲುರ್‌ಘಾಟ್‌ನಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಪಶ್ಚಿಮ ಬಂಗಾಲದಲ್ಲಿ ರಾಮ ನವಮಿಗೆ ತಡೆಯೊಡ್ಡಲು ಟಿಎಂಸಿ ಯೋಜಿಸುತ್ತಿದೆ ಎಂದಿದ್ದರು. ಜತೆಗೆ ಕಲ್ಕತ್ತಾ ಹೈಕೋರ್ಟ್‌ ಕೂಡ ರಾಮ ನವಮಿ ಆಚರಣೆಗಳಿಗೆ ಅಡ್ಡಿ ಮಾಡಕೂಡದು ಎಂದು ತೀರ್ಪು ನೀಡಿದ್ದ ಬೆನ್ನಲ್ಲಿಯೇ ಪಕ್ಷ ಈ ತೀರ್ಮಾನ ಕೈಗೊಂಡು ಘೋಷಣೆ ಮಾಡಿದೆ. ಪಕ್ಷದ ನಾಯಕ ಮತ್ತು ತಾರಾ ಪ್ರಚಾರಕ ಸಯೋನಿ ಘೋಷ್‌, ಅರೂಪ್‌ ರಾಯ್‌, ಸಚಿವ ಮನೋಜ್‌ ತಿವಾರಿ ಉಪಸ್ಥಿತರಿರಲಿದ್ದಾರೆ ಎಂದು ಸಂಸದ ಪ್ರಸೂನ್‌ ಬ್ಯಾನರ್ಜಿ ಘೋಷಣೆ ಮಾಡಿದ್ದಾರೆ.

ಸನಾತನಿಗಳ ಸಂವಿಧಾನ
ಸಂವಿಧಾನ ಸಭೆಯಲ್ಲಿದ್ದ ಶೇ.80ರಿಂದ 90ರಷ್ಟು ಸನಾತನಿಗಳೇ ಸಂವಿಧಾನ ರೂಪಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು, ಸನಾತನ ಧರ್ಮ ವಿರೋಧಿಗಳಿಗೆ ತಿರುಗೇಟು ನೀಡಿದರು. ಡಾ| ರಾಜೇಂದ್ರ ಪ್ರಸಾದ್‌ ಅವರು ಸಂವಿಧಾನ ರಚನೆಯ ಪ್ರಮುಖ ವ್ಯಕ್ತಿಯಾಗಿದ್ದರೆ, ಡಾ.| ಬಾಬಾಸಾಹೇಬ್‌ ಅಂಬೇಡ್ಕರ್‌ ಸಂವಿಧಾನ ಕರಡು ರೂಪಿಸಿದರು ಎಂದು ತಿಳಿಸಿದರು.

ಅಪಪ್ರಚಾರ ಬೇಡ : ಪಿಎಂ
3 ದಶಕದಿಂದಲೂ ಆರೆಸ್ಸೆಸ್‌-ಬಿಜೆಪಿ ಸಂವಿ ಧಾನ ವನ್ನು ಬದಲಿಸಲಿವೆ ಎಂದು ವಿಪಕ್ಷಗಳು ಅಪಪ್ರ ಚಾರ ಮಾಡುತ್ತಿವೆ. ಸಂವಿಧಾನವನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಡಿ. ನಮ್ಮ ಸಂವಿಧಾನವು ಪರಿಶು ದ್ಧವಾಗಿದೆ. ಸಂವಿಧಾನ ರಚನಕಾರರು ಸಮೃದ್ಧ ಭಾರತದ ಕನಸು ಕಂಡಿದ್ದರು. ಆದರೆ ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಆ ಅವಕಾಶ ವನ್ನು ಹಾಳು ಮಾಡಿತು ಎಂದರು ಮೋದಿ.

ಜಂಗಲ್‌ರಾಜ್‌ ಆರ್‌ಜೆಡಿ
ಬಿಹಾರದಲ್ಲಿ ಆರ್‌ಜೆಡಿ ಜಂಗಲ್‌ ರಾಜ್‌ನ ಅತೀ ದೊಡ್ಡ ಮುಖವಾಗಿದೆ. ಭ್ರಷ್ಟಾಚಾರ ಮತ್ತು ಜಂಗಲ್‌ರಾಜ್‌ಗೆ ಆರ್‌ಜೆಡಿ ಸಂಕೇತವಾಗಿದೆ. ಘಮಂಡಿಯಾ ಕೂಟಕ್ಕೆ ಯಾವುದೇ ದೂರ ದೃಷ್ಟಿ ಯಾಗಲಿ, ನಂಬಿಕೆಯಾಗಲಿ ಇಲ್ಲ. ಬಿಹಾರ ಮುಖ್ಯ ಮಂತ್ರಿ ನಿತೀಶ್‌ಕುಮಾರ್‌ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿವೆ ಎಂದು ಮೋದಿ ಆರೋಪಿಸಿದರು.

ಅಕ್ರಮ ವಲಸೆ ತಡೆ
ನೇಪಾಲ, ಬಾಂಗ್ಲಾದೇಶದೊಂದಿಗೆ ಗಡಿ ಹಂಚಿ ಕೊಂಡಿರುವ ಪೂರ್ಣಿಯಾದಲ್ಲಿ ಅಕ್ರಮ ವಲಸೆ ಯನ್ನು ತಡೆಯುತ್ತೇವೆ. ಓಟ್‌ ಬ್ಯಾಂಕ್‌ ರಾಜಕಾರ ಣದಿಂದಾಗಿ ಅಕ್ರಮ ವಲಸೆ ಯಾವುದೇ ಅಡೆತಡೆ ಇಲ್ಲದೇ ನಡೆಯುತ್ತಿದೆ. ಇದರಿಂದ ಭದ್ರತೆಗೆ ಸವಾಲಾಗಿದೆ. ಅಲ್ಲದೇ ಸೀಮಾಂಚಲ ಪ್ರದೇ ಶದಲ್ಲಿ ಸಾಕಷ್ಟು ತೊಂದರೆಗೆ ಕಾರಣವಾಗಿದೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.