ರಾಮನಾಥ್‌ ಕೋವಿಂದ್‌ ರಾಷ್ಟ್ರಪತಿ ಖಚಿತ: ಜು.20 ಫ‌ಲಿತಾಂಶ


Team Udayavani, Jul 18, 2017, 4:00 AM IST

EB.gif

ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆ ಸೋಮವಾರ ಮುಕ್ತಾಯಗೊಂಡಿದೆ. ಜು.20ರಂದು ಮತ ಎಣಿಕೆ ನಡೆಯಲಿದ್ದು, ನಿರೀಕ್ಷೆಯಂತೆ ಎನ್‌ಡಿಎ ಅಭ್ಯರ್ಥಿ ರಾಮನಾಥ್‌ ಕೋವಿಂದ್‌ ಜಯ ಗಳಿಸುವ ಸಾಧ್ಯತೆ ಇದೆ. ಎಲ್ಲ ರಾಜ್ಯಗಳಲ್ಲಿ ಶೇ.100ರಷ್ಟು ಮತದಾನ ನಡೆದಿತ್ತು. ಹೊಸದಿಲ್ಲಿಯಲ್ಲಿರುವ ಸಂಸತ್‌ ಭವನದಲ್ಲಿ ಶೇ.99ರಷ್ಟು ಮತದಾನ ವಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಲೋಕಸಭೆಯ ಸೆಕ್ರೆಟರಿ ಜನರಲ್‌ ಅನೂಪ್‌ ಮಿಶ್ರಾ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿಯ ಹಿರಿಯ ತಲೆಯಾಳು ಎಲ್‌.ಕೆ.ಅಡ್ವಾಣಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ತಮ್ಮ ಹಕ್ಕು ಚಲಾವಣೆ ಮಾಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಗೋವಾ ಮುಖ್ಯಮಂತ್ರಿ ಮನೋಹರ ಪಾರೀಕರ್‌ ಸೇರಿದಂತೆ ಒಟ್ಟು 44 ಮಂದಿ ಆಯಾ ರಾಜ್ಯಗಳ ರಾಜಧಾನಿಯಲ್ಲಿಯೇ ಮತ ಹಾಕಲು ಅನುಮತಿ ಪಡೆದಿದ್ದರು.

ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆ ಮಾತನಾಡಿದ ಬಿಜೆಪಿ ವಕ್ತಾರ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯೇ ಜಯಗಳಿಸಲಿದ್ದಾರೆ ಎಂದು ಹೇಳಿಕೊಂಡರೆ ಸಂವಿಧಾನ ಎತ್ತಿ ಹಿಡಿಯುವಂತೆ ಹಕ್ಕು ಚಲಾವಣೆಯಾಗಿದೆ ಎಂಬ ವಿಶ್ವಾಸವಿದೆ ಎಂದು ಸಿಪಿಎಂ ಹೇಳಿಕೊಂಡಿದೆ.

ಯಾಕೂಬ್‌ ಮೆಮನ್‌ಗೆ ಬೆಂಬಲ ನೀಡಿದ್ದ ಗಾಂಧಿ: ಶಿವಸೇನೆ ಆಕ್ಷೇಪ
ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಮುಂಬೈ ಸರಣಿ ಸ್ಫೋಟದ ಆರೋಪಿ ಯಾಕೂಬ್‌ ಮೆಮನ್‌ಗೆ ಬೆಂಬಲ ನೀಡಿದ್ದರು ಎಂದು ಶಿವಸೇನೆ ಆರೋಪಿಸಿದೆ. ಮೆಮನ್‌ಗೆ ಕ್ಷಮಾದಾನ ನೀಡಬೇಕೆಂದು ಒತ್ತಾಯಿ ಸಿದ್ದವರು ಗಾಂಧಿ ಎಂದು ದೂರಿದ್ದಾರೆ ಶಿವಸೇನೆ ವಕ್ತಾರ ಸಂಜಯ ರಾವುತ್‌. ಮೆಮನ್‌ ರಕ್ಷಣೆ ಎಲ್ಲ ರೀತಿಯ ಪ್ರಯತ್ನ ಮಾಡಿದ್ದರೆಂದು ಆಪಾದಿಸಿದ್ದಾರೆ. ಆ ಸಂದರ್ಭದಲ್ಲಿ ಯುಪಿಎ ಅಭ್ಯರ್ಥಿ ರಾಷ್ಟ್ರಪತಿಗೆ ಪತ್ರ ಬರೆದು ಕ್ಷಮಾದಾನ ನೀಡುವಂತೆ ಒತ್ತಾಯಿಸಿದ್ದರು ಎಂದಿದ್ದಾರೆ. ಗಾಂಧಿ ಬೆಂಬಲಕ್ಕೆ ಬಂದಿರುವ ಕಾಂಗ್ರೆಸ್‌ ವಕ್ತಾರ ಯಾವ ಆಧಾರದಲ್ಲಿ ಶಿವಸೇನೆ ವಿಪಕ್ಷಗಳ ಮೈತ್ರಿಕೂಟದ ಅಭ್ಯರ್ಥಿಯ ವಿರುದ್ಧ ಆರೋಪ ಮಾಡುತ್ತಿದೆ? ನಾಗರಿಕ ಸೇವಾ ಅಧಿಕಾರಿ, ರಾಜ್ಯಪಾಲರಾಗಿ ಹತ್ತು ಹಲವು ಹುದ್ದೆಗಳನ್ನು ನಿರ್ವಹಿಸಿ ಜನಪ್ರಿಯತೆ, ಖ್ಯಾತಿ ಗಳಿಸಿದ್ದಾರೆ. ಅವರಿಗೆ ಯಾರದ್ದೂ ಪ್ರಮಾಣ ಪತ್ರ ಅಗತ್ಯವಿಲ್ಲವೆಂದಿದ್ದಾರೆ ಅವರು.

ಅನಾರೋಗ್ಯ ಕಾರಣ ಹಕ್ಕು ಚಲಾಯಿಸದ ಕರುಣಾನಿಧಿ
ಅನಾರೋಗ್ಯದ ಕಾರಣದಿಂದ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಮತ ಹಾಕಲಿಲ್ಲ. ವೈದ್ಯರ ಸಲಹೆಯಿಂದಾಗಿ ತಮ್ಮ ತಂದೆ ಮತ್ತು ಪಕ್ಷದ ಹಿರಿಯ ನಾಯಕ ಎಂ.ಕರುಣಾನಿಧಿ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲಿಲ್ಲ ಎಂದಿದ್ದಾರೆ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್‌. 2012ರಲ್ಲಿ ಹಾಲಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅಭ್ಯರ್ಥಿಯಾಗಿದ್ದಾಗ ಅವರು ಮತದಾನ ಮಾಡಿದ್ದರು. 

ರೈತನ ಮಗನಾಗಿದ್ದುಕೊಂಡು ಸಾರ್ವಜನಿಕ ಜೀವನದಲ್ಲಿ ನಾಯ್ಡು ಸಾಧನೆ ಅಪಾರ. ಉಪ ರಾಷ್ಟ್ರಪತಿ ಸ್ಥಾನಕ್ಕೆ ಅವರು ಸೂಕ್ತ ವ್ಯಕ್ತಿ. 
– ನರೇಂದ್ರ ಮೋದಿ, ಪ್ರಧಾನಮಂತ್ರಿ

ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ಅವರ ಆದೇಶದಂತೆ ನಾವು  ಎನ್‌ಡಿಎ ಅಭ್ಯರ್ಥಿ ಕೋವಿಂದ್‌ಗೇ ಮತ ಹಾಕಿದ್ದೇವೆ.
ಶಿವಪಾಲ್‌ ಯಾದವ್‌, 
ಉತ್ತರ ಪ್ರದೇಶ ಮಾಜಿ ಸಚಿವ

 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.