ಒಂದು ವೇಳೆ ರಾಹುಲ್ ದಲಿತ ಯುವತಿಯನ್ನು ವಿವಾಹವಾದ್ರೆ…ಸಚಿವ ಅಠಾವಳೆ ಆಫರ್!
ಈ ಮೂಲಕ ಜಾತಿ ನಿರ್ಮೂಲನೆಯ ಮಹಾತ್ಮ ಗಾಂಧಿ ಕನಸನ್ನು ನನಸು ಮಾಡಬೇಕು.
Team Udayavani, Feb 17, 2021, 3:45 PM IST
ನವದೆಹಲಿ: ಒಂದು ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ಹಮ್ ದೋ, ಹಮಾರೇ ದೋ” ಘೋಷಣೆಯನ್ನು ಜಾರಿಗೊಳಿಸುವ ಉದ್ದೇಶವಿದ್ದರೆ ದಲಿತ ಯುವತಿಯನ್ನು ಮದುವೆಯಾಗಲಿ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಬುಧವಾರ(ಫೆ.17, 2021) ತಿರುಗೇಟು ನೀಡಿದ್ದಾರೆ.
ಎಎನ್ ಐ ವರದಿ ಪ್ರಕಾರ, ಈ ಮೊದಲು ಕುಟುಂಬ ಯೋಜನೆಗಾಗಿ ಹಮ್ ದೋ, ಹಮಾರೆ ದೋ (ನಾವಿಬ್ಬರು, ನಮಗಿಬ್ಬರು) ಎಂಬ ಘೋಷಣೆಯನ್ನು ಉಪಯೋಗಿಸಲಾಗುತ್ತಿತ್ತು. ಒಂದು ವೇಳೆ ರಾಹುಲ್ ಗಾಂಧಿ ಈ ಘೋಷಣೆಯನ್ನು ಜಾರಿಗೊಳಿಸುವುದಿದ್ದರೆ, ರಾಹುಲ್ ಮೊದಲು ಮದುವೆಯಾಗಬೇಕು. ಅಷ್ಟೇ ಅಲ್ಲ ರಾಹುಲ್ ದಲಿತ ಯುವತಿಯನ್ನು ವಿವಾಹವಾಗಬೇಕು. ಈ ಮೂಲಕ ಜಾತಿ ನಿರ್ಮೂಲನೆಯ ಮಹಾತ್ಮ ಗಾಂಧಿ ಕನಸನ್ನು ನನಸು ಮಾಡಬೇಕು. ಇದರಿಂದ ಯುವಕರು ಪ್ರೇರಪಣೆ ಪಡೆಯಲಿದ್ದಾರೆ ಎಂದು ತಿಳಿಸಿದ್ದರು.
ರಾಹುಲ್ ಗಾಂಧಿ ಅಂರ್ತಜಾತಿ ವಿವಾಹವಾದರೆ ತಮ್ಮ ಸಚಿವಾಲಯ ಯೋಜನೆಯಡಿ 2.5 ಲಕ್ಷ ರೂಪಾಯಿ ನೀಡಲಿದೆ ಎಂದು ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.
ಕಳೆದವಾರ ಲೋಕಸಭೆಯ ಅಧಿವೇಶನದಲ್ಲಿ ರಾಹುಲ್ ಗಾಂಧಿ ಮಾತನಾಡುತ್ತ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ದೇಶವನ್ನು ನಾವಿಬ್ಬರು, ನಮಗಿಬ್ಬರು ಎಂಬ ಆಶಯದೊಂದಿಗೆ ಕೇವಲ ನಾಲ್ಕು ಜನರಿಗಾಗಿ ಮುನ್ನಡೆಸಲಾಗುತ್ತಿದೆ ಎಂದು ಟೀಕಿಸಿದ್ದರು.
ಇದಕ್ಕೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಕೂಡಾ ಹಮ್ ದೋ, ಹಮಾರೇ ದೋ ಆಶಯದೊಂದಿಗೆ ಮುಂದುವರಿಯುತ್ತಿದೆ, ಕಾಂಗ್ರೆಸ್ ನಲ್ಲಿ ಪ್ರಿಯಾಂಕಾ ಗಾಂಧಿ ಮತ್ತು ರಾಬರ್ಟ್ ವಾದ್ರಾ, ರಾಹುಲ್ ಮತ್ತು ಸೋನಿಯಾ ಗಾಂಧಿ…ಇದು ಮಗಳು ಮತ್ತು ಅಳಿಯನ ವ್ಯವಹಾರ ಎಂದು ತಿರುಗೇಟು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ