ಸದ್ಗುರು ರಾಮ್ ಪಾಲ್ 2 ಪ್ರಕರಣಗಳಲ್ಲಿ ಖುಲಾಸೆ, ಜೈಲುವಾಸ ಮುಂದುವರಿಕೆ
Team Udayavani, Aug 29, 2017, 3:12 PM IST
ಚಂಡೀಗಢ್: ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷ ಜೈಲುಶಿಕ್ಷೆಗೆ ಗುರಿಯಾಗಿರುವ ರಾಮ್ ರಹೀಮ್ ಸಿಂಗ್ ದೋಷಿ ಎಂದು ತೀರ್ಪು ಪ್ರಕಟವಾದ ಬೆನ್ನಲ್ಲೇ 2 ಕ್ರಿಮಿನಲ್ ಪ್ರಕರಣಗಳಲ್ಲಿ ಮಾತ್ರ ಸ್ವಘೋಷಿತ ದೇವಮಾನವ ರಾಮ್ ಪಾಲ್ ನಿರ್ದೋಷಿ ಎಂದು ಹಿಸ್ಸಾರ್ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಹರ್ಯಾಣ ಸ್ಥಳೀಯ ವಿಶೇಷ ನ್ಯಾಯಾಲಯದ ಜಡ್ಜ್ ಮುಖೇಶ್ ಕುಮಾರ್ ಅವರು ತೀರ್ಪು ನೀಡಿದ್ದಾರೆ. 2 ಕ್ರಿಮಿನಲ್ ಕೇಸ್ ಗಳಲ್ಲಿ ಸತ್ ಲೋಕ್ ಆಶ್ರಮದ ಸ್ಥಾಪಕ ಸದ್ಗುರು ರಾಮ್ ಪಾಲ್ ಖುಲಾಸೆಗೊಂಡಿರುವುದಾಗಿ ರಾಮ್ ಪಾಲ್ ಪರ ವಕೀಲರು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ರಾಮ್ ಪಾಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 426 ಮತ್ತು 427ರ ಅಡಿ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣಗಳಲ್ಲಿ ರಾಮ್ ಪಾಲ್ ಖುಲಾಸೆಗೊಂಡಿರುವುದಾಗಿ ವಕೀಲ ಎಪಿ ಸಿಂಗ್ ಹೇಳಿದರು. ಆದರೆ ರಾಮ್ ಪಾಲ್ ಬೇರೆ ಪ್ರಕರಣಗಳ ವಿಚಾರಣೆ ಬಾಕಿ ಇರುವುದರಿಂದ ಜೈಲುವಾಸ ಮುಂದುವರಿಯಲಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ