![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ನಟಿ ರಮ್ಯಾ ಗೇಲಿಗೆ ಆಕ್ರೋಶದ ತಿರುಗೇಟು
Team Udayavani, Nov 2, 2018, 8:15 AM IST
![ramya-600.jpg](https://www.udayavani.com/wp-content/uploads/2018/11/2/ramya-600.jpg)
ಹೊಸದಿಲ್ಲಿ: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಗೇಲಿ ಮಾಡಿರುವ ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ರಮ್ಯಾ ದಿವ್ಯಸ್ಪಂದನ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ರಮ್ಯಾ ನಡೆ ದುರಹಂಕಾರದ ಪರಮಾವಧಿ ಎಂದು ಬಣ್ಣಿಸಿದೆ. ಟ್ವೀಟಿಗರಿಂದಲೂ ರಮ್ಯಾ ಟೀಕೆಗೊಳಗಾಗಿದ್ದಾರೆ. ಬುಧವಾರ ಲೋಕಾರ್ಪಣೆಯಾದ ವಲ್ಲಭಭಾಯಿಯವರ ಬೃಹತ್ ಪ್ರತಿಮೆಯ ಪಾದದ ಬಳಿ ನಿಂತಿರುವ ಹಿನ್ನೆಲೆಯಲ್ಲಿ ಚಿಕ್ಕದಾಗಿ ಕಾಣುವ ಮೋದಿಯವರನ್ನು ಉದ್ದೇಶಿಸಿ ರಮ್ಯಾ ಅವರು ‘ಇದೇನು ಹಕ್ಕಿಯ ಹಿಕ್ಕೆಯಾ?’ ಎಂದು ಗೇಲಿ ಮಾಡಿದ್ದರು.
ಇದನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, “ಇದು ಕಾಂಗ್ರೆಸ್ನ ನಿಜವಾದ ಸಂಸ್ಕೃತಿ. ಪ್ರಧಾನಿಯಾದರೂ ಸರಿ, ತನಗಾಗದ ವ್ಯಕ್ತಿಯನ್ನು ಹೀನಾಯವಾಗಿ ಗೇಲಿ ಮಾಡುವ ಯಾವುದೇ ಅವಕಾಶವನ್ನು ಆ ಪಕ್ಷ ಬಿಟ್ಟುಕೊಡುವುದಿಲ್ಲ” ಎಂದಿದ್ದಾರೆ. ಇದೇ ಪಕ್ಷದವರು ಹಿಂದೆ ಮೋದಿಯವರನ್ನು ನೀಚ ಎಂದಿದ್ದರು. ಪ್ರಧಾನಿಯನ್ನು ತರೂರ್ ಚೇಳಿಗೆ ಹೋಲಿಸಿದ್ದರು. ಈಗ, ರಮ್ಯಾ ಹಕ್ಕಿಯ ಹಿಕ್ಕೆಗೆ ಹೋಲಿಸಿದ್ದಾರೆ. ಪರಿಶ್ರಮದಿಂದ ಪ್ರಧಾನಿಯಾದವರು ಅವರಿಗೆ ಹಿಕ್ಕೆಯಾಗಿ ಕಾಣುತ್ತಾರೆ, ರಾಜಮನೆತನದ ದುರಹಂಕಾರ ಭಾರತದ ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದೆ” ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.