ರಾಜೀವ್‌ಗಾಂಧಿ ಹಂತಕ ಪೆರಾರಿವೇಲನ್‌ ಬಿಡು­ಗಡೆ : ಕಾಂಗ್ರೆಸ್‌ ತೀವ್ರ ಆಕ್ಷೇಪ

ಎಲ್ಲರನ್ನೂ ಹೀಗೇ ಬಿಡುಗಡೆ ಮಾಡುತ್ತೀರಾ?

Team Udayavani, May 19, 2022, 12:12 AM IST

ರಾಜೀವ್‌ಗಾಂಧಿ ಹಂತಕ ಪೆರಾರಿವೇಲನ್‌ ಬಿಡು­ಗಡೆ : ಕಾಂಗ್ರೆಸ್‌ ತೀವ್ರ ಆಕ್ಷೇಪ

ಜೋಲಾರ್‌ಪೆಟ್ಟಾಯಿ: ರಾಜೀವ್‌ಗಾಂಧಿ ಹಂತಕ ಪೆರಾರಿವೇಲನ್‌ ಬಿಡು­ಗಡೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿರು­ವುದನ್ನು ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಸ್ವಾಗತಿಸಿದರೆ, ಕಾಂಗ್ರೆಸ್‌ ಮಾತ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಹಂತಕನ ಬಿಡುಗಡೆ ಅತ್ಯಂತ ನೋವು ಮತ್ತು ನಿರಾಸೆ ಉಂಟುಮಾಡಿದೆ ಎಂದು ಕಾಂಗ್ರೆಸ್‌ ಹೇಳಿದೆ. “ಒಬ್ಬ ಭಯೋತ್ಪಾದಕನೆಂದರೆ ಆತ ಭಯೋತ್ಪಾ­ದ­ಕನೇ. ಅವನನ್ನು ಅದೇ ರೀತಿ ನಡೆಸಿ­ಕೊಳ್ಳ­ಬೇಕು.

ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ವ್ಯಕ್ತಿಯ ಆತ್ಮಸಾಕ್ಷಿಗೂ ಇಂದು ನೋವಾ­ಗಿದೆ. ಇಂದು ಇಡೀ ದೇಶಕ್ಕೆ ನೋವಿನ ದಿನ ಎಂದೂ ಹೇಳಿರುವ ಸುಜೇìವಾಲ, “ಜೀವಾ­ವಧಿ ಶಿಕ್ಷೆ ಎದುರಿಸುತ್ತಿರುವ ಇತರ ಲಕ್ಷಾಂತರ ಮಂದಿಯನ್ನೂ ಇದೇ ರೀತಿ ಬಿಡುಗಡೆ ಮಾಡುತ್ತೀರಾ’ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೆವಾಲಾ ಪ್ರಶ್ನಿಸಿದ್ದಾರೆ.

ರಾಜೀವ್‌ ಹತ್ಯೆ ಪ್ರಕರಣದಲ್ಲಿ ಒಟ್ಟು 7 ಮಂದಿಯನ್ನು ಕೋರ್ಟ್‌ ಅಪರಾಧಿಗಳೆಂದು ಘೋಷಿಸಿ, ಗಲ್ಲುಶಿಕ್ಷೆ ವಿಧಿಸಿತ್ತು. 2014ರಲ್ಲಿ ಸುಪ್ರೀಂ ಕೋರ್ಟ್‌ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು. ಈ ಪೈಕಿ ನಳಿನಿಗೆ ನೀಡಿದ್ದ ಮರಣದಂಡನೆ ಯನ್ನು 2000­ದಲ್ಲೇ ಜೀವಾವಧಿ ಶಿಕ್ಷೆಗೆ ಇಳಿಸಲಾಗಿತ್ತು. ಆಕೆ ಜೈಲಲ್ಲೇ ಮಗುವಿಗೆ ಜನ್ಮ ನೀಡಿದ್ದ ಕಾರಣ, ಸೋನಿಯಾ ಗಾಂಧಿ ಅವರೇ ಮಧ್ಯಪ್ರವೇಶಿಸಿ ಶಿಕ್ಷೆ ತಗ್ಗಿಸುವಂತೆ ಮನವಿ ಮಾಡಿದ್ದರು.

ಅರುಪುತ್ತಮ್ಮಾಳ್‌ ಎಂಬ ಮಾತೃ ಸ್ವರೂಪಿ ಶಕ್ತಿ!
ಪೆರಾರಿವಾಲನ್‌ ಬಿಡುಗಡೆಯ ಹಿಂದೆ ಅವರ ತಾಯಿ ಅರುಪುತ್ತಮ್ಮಾಳ್‌ರವರ ತ್ಯಾಗಮಯ ಹೋರಾಟವಿದೆ ಎಂದು ಖುದ್ದು ಪೆರಾರಿವಾಲನ್‌ ಹೇಳಿಕೊಂಡಿದ್ದಾರೆ. ತಮಿಳಿನಲ್ಲಿ “ಅರುತ್ತಂ’ ಎಂದರೆ ಪವಾಡ ಎಂದರ್ಥ. ಇನ್ನು, ಅಮ್ಮಾಳ್‌ ಎಂದರೆ “ಮಾತೃ ಸ್ವರೂಪದಲ್ಲಿ­ರುವ ಮಹಾ ಶಕ್ತಿ’ ಎಂದರ್ಥ. ಇವರೆಡೂ ಪದಗಳ ಸಮ್ಮಿಲನವಾದ ಹೆಸರನ್ನಿಟ್ಟುಕೊಂಡ ಈ 74 ವರ್ಷದ ತಾಯಿ, ತನ್ನ ಮಗನ ಬಿಡುಗಡೆಗಾಗಿ ಸತತ ಮೂವತ್ತು ವರ್ಷಗಳ ಕಾಲ ಕಾನೂನು ಹೋರಾಟ ಮಾಡಿ, ಕಡೆಗೂ ಅದನ್ನು ಸಾಧಿಸಿದ್ದಾರೆ.

31 ವರ್ಷಗಳ ಕಾನೂನು ಹೋರಾಟದಲ್ಲಿ ಈಗ ಗೆದ್ದು ಬಂದಿದ್ದೇನೆ. ಈಗ ನಾನು ಸ್ವಲ್ಪ ಉಸಿರಾಡಬೇಕಿದೆ. ನನ್ನ ಪ್ರಕಾರ ಗಲ್ಲುಶಿಕ್ಷೆಯಂಥ ಗರಿಷ್ಠ ಪ್ರಮಾಣದ ಶಿಕ್ಷೆಯ ಅಗತ್ಯವಿಲ್ಲ. ಎಲ್ಲರೂ ಮನುಷ್ಯರೇ ಅಲ್ಲವೇ?
– ಪೆರಾರಿವೇಲನ್‌, ರಾಜೀವ್‌ಗಾಂಧಿ ಹಂತಕ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.