ಅಮೃತ ಉದ್ಯಾನ ಉದ್ಘಾಟಿಸಿದ ರಾಷ್ಟ್ರಪತಿ ಮುರ್ಮು
ಅಮೃತ್ ಉದ್ಯಾನ ಸಾರ್ವಜನಿಕರಿಗೆ ಮುಕ್ತ
Team Udayavani, Jan 29, 2023, 9:24 PM IST
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿ ಭಾನುವಾರ “ಉದ್ಯಾನ ಮಹೋತ್ಸವ’ ಉದ್ಘಾಟಿಸಿದ್ದಾರೆ.
ಈ ಮೂಲಕ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದ ಉದ್ಯಾನಗಳ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಇದರ ಜತೆಗೆ “ಅಮೃತ ಉದ್ಯಾನ’ ಎಂದು ಮರು ನಾಮಕರಣಗೊಂಡಿರುವ ಐತಿಹಾಸಿಕ ಮೊಘಲ್ ಗಾರ್ಡನ್ ಅನ್ನೂ ಉದ್ಘಾಟಿಸಲಾಗಿದೆ.
ರಾಷ್ಟ್ರಪತಿ ಅವರು ಉದ್ಯಾನದ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜ.31ರಿಂದ ಮಾ.26ರ ವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ “ಅಮೃತ ಉದ್ಯಾನ’ವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಇದೆ.
ಮಾ.28ರಿಂದ 31ರ ವರೆಗೆ ವಿಶೇಷ ವರ್ಗದವರಿಗಾಗಿ ಉದ್ಯಾನವನ ತೆರೆದಿರಲಿದೆ. ರೈತರಿಗಾಗಿ ಮಾ.28, ದಿವ್ಯಾಂಗರಿಗೆ ಮಾ.29, ಪೊಲೀಸ್, ಸೇನಾಪಡೆ, ಅರೆಸೇನಾಪಡೆಯ ಸಿಬ್ಬಂದಿಗಾಗಿ ಮಾ.30, ಬಡುಕಟ್ಟು ಸಮುದಾಯದ ಮಹಿಳೆಯರು, ಮಹಿಳೆಯರಿಗಾಗಿ ಮಾ.31ರಂದು ಉದ್ಯಾನವನಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.
ಪ್ರಸಕ್ತ ವರ್ಷ ವಿಶೇಷವಾಗಿ ಬೆಳೆಸಲಾದ 12 ವಿಧದ ಟ್ಯುಲಿಪ್ ಗಳನ್ನು ವೀಕ್ಷಿಸಲು ಸಾಧ್ಯವಾಗಲಿದೆ. ಜತೆಗೆ ಹರ್ಬಲ್ ಗಾರ್ಡನ್, ಬೊನ್ಸಾಯ್ ಗಾರ್ಡನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸಕ್ಯುìಲಾರ್ ಗಾರ್ಡನ್ಗಳನ್ನು ಸಾರ್ವಜನಿಕರ ವೀಕ್ಷಣೆಗೆ ಮುಂದಿನ 2 ತಿಂಗಳ ಕಾಲ ತೆರೆದು ಇರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ