ಬಡವರಿಗೆ ಉಚಿತ ಆಹಾರಧಾನ್ಯ : PMGKAYಯಡಿ ಮೇ-ಜೂನ್ ತಿಂಗಳಲ್ಲಿ ವಿತರಣೆ
Team Udayavani, Apr 24, 2021, 7:10 AM IST
ಹೊಸದಿಲ್ಲಿ : ಲಾಕ್ಡೌನ್ ಮಾದರಿಯ ನಿರ್ಬಂಧ ಮತ್ತು ಆರ್ಥಿಕ ಚಟುವಟಿಕೆ ಸ್ಥಗಿತದಿಂದ ಸಂಕಷ್ಟಕ್ಕೀಡಾಗುವ ದೇಶದ ಕಡು ಬಡವರ್ಗಕ್ಕೆ ಉಚಿತ ಆಹಾರ ಧಾನ್ಯ ಒದಗಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಮೇ ಮತ್ತು ಜೂನ್ ತಿಂಗಳುಗಳಲ್ಲಿ ಬಡವರಿಗೆ 5 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ನೀಡುವುದಾಗಿ ಶುಕ್ರವಾರ ಘೋಷಿಸಿದೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ)ಯ ಅನ್ವಯ ಸಾರ್ವಜನಿಕ ವಿತರಣ ವ್ಯವಸ್ಥೆಯ ಫಲಾನುಭವಿಗಳಿಗೆ 2 ತಿಂಗಳ ಕಾಲ ಹೆಚ್ಚುವರಿ 5 ಕೆ.ಜಿ. ಆಹಾರಧಾನ್ಯ ಒದಗಿಸಲಾಗುವುದು. ಆದರೆ ಈ ಬಾರಿ ದ್ವಿದಳ ಧಾನ್ಯಗಳನ್ನು ನೀಡುವುದಿಲ್ಲ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣ ವ್ಯವಸ್ಥೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಗುತ್ತಿರುವ 5 ಕೆ.ಜಿ. ಆಹಾರಧಾನ್ಯದ ಜತೆಗೆ ಹೆಚ್ಚುವರಿಯಾಗಿ ಈ ಆಹಾರಧಾನ್ಯ ದೊರೆಯಲಿದೆ.
80 ಕೋಟಿ ಜನರಿಗೆ ಅನುಕೂಲ
ರಾಷ್ಟ್ರೀಯ ಆಹಾರ ಭದ್ರತ ಕಾಯ್ದೆಯಡಿ ನೋಂದಣಿಯಾದ 80 ಕೋಟಿ ಫಲಾನುಭವಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಕಳೆದ ವರ್ಷ ಲಾಕ್ಡೌನ್ ಅವಧಿಯಲ್ಲಿ ಕೇಂದ್ರ ಸರಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಜಾರಿ ಮಾಡಿತ್ತು. ಆರಂಭದಲ್ಲಿ ಜುಲೈವರೆಗೆ 3 ತಿಂಗಳು ಉಚಿತ ಆಹಾರ ಧಾನ್ಯ ನೀಡಲಾಗಿತ್ತು. ಬಳಿಕ ನವೆಂಬರ್ವರೆಗೆ ವಿಸ್ತರಿಸಲಾಗಿತ್ತು. ಆಗ ಪ್ರತೀ ಕುಟುಂಬಕ್ಕೆ ತಿಂಗಳಿಗೆ 5 ಕೆ.ಜಿ. ಗೋಧಿ, ಅಕ್ಕಿ, 1 ಕೆ.ಜಿ. ದ್ವಿದಳ ಧಾನ್ಯ ವಿತರಿಸಲಾಗುತ್ತಿತ್ತು. ಈ ವರ್ಷ ಕೇವಲ ಆಹಾರಧಾನ್ಯಗಳನ್ನು ಮಾತ್ರ ನೀಡಲಾಗುತ್ತದೆ. 2 ತಿಂಗಳ ಈ ಯೋಜನೆಗೆ 80 ಲಕ್ಷ ಟನ್ ಧಾನ್ಯದ ಅಗತ್ಯವಿದ್ದು, 26 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ಪಾಂಡೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ