ರಾವಿ ನದಿ ಅಣೆಕಟ್ಟಿಗೆ ಅಸ್ತು
Team Udayavani, Dec 8, 2018, 6:00 AM IST
ನವದೆಹಲಿ: ಪಂಜಾಬ್ನಲ್ಲಿ ರಾವಿ ನದಿಗೆ ಶಾಹಪುರ ಕಂಡಿ ಅಣೆಕಟ್ಟೆ ನಿರ್ಮಾಣ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಇದರಿಂದಾಗಿ ಪಾಕಿಸ್ತಾನಕ್ಕೆ ಹರಿ ಯುವ ನೀರಿನ ಪ್ರಮಾಣ ಕಡಿಮೆಯಾಗಲಿದೆ. ಭಾರತದ ವಿರುದ್ಧ ಭಯೋತ್ಪಾದಕರನ್ನು ಛೂ ಬಿಡುವ ಪಾಕಿಸ್ತಾನಕ್ಕೆ ಭಾರತ ಈ ಮೂಲಕ ತಕ್ಕ ಪಾಠ ಕಲಿಸಲಿದ್ದು, 2022 ಕ್ಕೆ ಈ ಯೋಜನೆ ಪೂರ್ಣಗೊಳ್ಳಲಿದೆ. ಇದ ರಿಂದಾಗಿ ಜಮ್ಮು ಕಾಶ್ಮೀರ ಹಾಗೂ ಪಂಜಾಬ್ ಪ್ರಾಂತ್ಯದಲ್ಲಿನ ರೈತರಿಗೆ ಭಾರಿ ಅನುಕೂಲವಾಗಲಿದೆ.
ಈ ಯೋಜನೆ ತುಂಬಾ ಹಳೆಯದಾಗಿದ್ದರೂ, ಕಳೆದ 17 ವರ್ಷಗಳಿಂದಲೂ ನನೆ ಗುದಿಗೆ ಬಿದ್ದಿತ್ತು. 2000ನೇ ಇಸ್ವಿಯಲ್ಲಿ 2,285 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಗಿತ್ತಾದರೂ, ಅನುದಾನದ ಕೊರತೆಯಿಂದ ನನೆ ಗುದಿಗೆ ಬಿದ್ದಿತ್ತು. ಈಗ ಕೇಂದ್ರ ಸರ್ಕಾರ ಈ ಯೋಜನೆಯ ಅಡಿಯಲ್ಲಿ ನೀರಾವರಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ 485 ಕೋಟಿ ರೂ. ಒದಗಿಸಲಿದೆ.
1960ರ ಸಿಂಧೂ ನದಿ ನೀರು ಒಪ್ಪಂದ ವನ್ನು ಭಾರತ ಮತ್ತು ಪಾಕಿಸ್ತಾನ ಮಾಡಿ ಕೊಂಡಿದ್ದು, ಇದರ ಅಡಿಯಲ್ಲಿ ರಾವಿ, ಬಿಯಾಸ್ ಮತ್ತು ಸಟ್ಲೆಜ್ ನದಿಯ ನೀರನ್ನು ಭಾರತ ಬಳಕೆ ಮಾಡಿಕೊಳ್ಳಲು ಸಂಪೂರ್ಣ ಹಕ್ಕನ್ನು ಹೊಂದಿದೆ. ಹೀಗಾಗಿ ರಾವಿ ನದಿಗೆ ಅಣೆಕಟ್ಟೆ ನಿರ್ಮಾಣ ಮಾಡಲು ಪಾಕಿಸ್ತಾನ ಯಾವ ಆಕ್ಷೇಪವನ್ನೂ ವ್ಯಕ್ತಪಡಿಸುವಂತಿಲ್ಲ.
ಈ ಯೋಜನೆಯಿಂದ ಜಮ್ಮು ಕಾಶ್ಮೀರದ ಸುಮಾರು 5 ಸಾವಿರ ಹೆಕ್ಟೇರುಗಳಿಗೆ ಹೆಚ್ಚು ವರಿ ನೀರಾವರಿ ಸೌಲಭ್ಯ ಸಿಗಲಿದೆ. ಅಷ್ಟೇ ಅಲ್ಲ, ಪಂಜಾಬ್ಗ ಈ ಯೋಜನೆಯಿಂದ 206 ಮೆ.ವ್ಯಾ ವಿದ್ಯುತ್ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ