ಅಚ್ಚರಿ ಮೂಡಿಸಿದ ರವಿಶಂಕರ್‌, ಜಾಬ್ಡೇಕರ್‌ ನಿರ್ಗಮನ


Team Udayavani, Jul 8, 2021, 7:20 AM IST

ಅಚ್ಚರಿ ಮೂಡಿಸಿದ ರವಿಶಂಕರ್‌, ಜಾಬ್ಡೇಕರ್‌ ನಿರ್ಗಮನ

ಹೊಸದಿಲ್ಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆಯ ನಡುವೆಯೇ ಅಚ್ಚರಿಗೀಡು ಮಾಡಿದ ವಿಚಾರವೆಂದರೆ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌, ಕೇಂದ್ರ ವಾರ್ತಾ ಮತ್ತು ಪ್ರಚಾರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ನಿರ್ಗಮನ. ದೂರಸಂಪರ್ಕ, ಮಾಹಿತಿ ತಂತ್ರಜ್ಞಾನ, ಕಾನೂನು ಮತ್ತು ನ್ಯಾಯ ಖಾತೆ ಸಚಿವರಾಗಿದ್ದ ರವಿಶಂಕರ್‌ ಪ್ರಸಾದ್‌, ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌ ಕೇಂದ್ರ ಸರಕಾರ ಜಾರಿಗೊಳಿಸಿದ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಖಡಕ್‌ ಆಗಿ ಹೇಳಿದ್ದರು. ವಾರ್ತಾ ಮತ್ತು ಪ್ರಚಾರ, ಅರಣ್ಯ ಮತ್ತು ಪರಿಸರ, ಹವಾಮಾನ ಬದಲಾವಣೆ, ಸಾರ್ವಜನಿಕ ಉದ್ದಿಮೆ ಮತ್ತು ಭಾರಿ ಕೈಗಾರಿಕೆಗಳ ಸಚಿವರಾಗಿದ್ದ ಪ್ರಕಾಶ್‌ ಜಾಬ್ಡೇಕರ್‌ ನಿರ್ಗಮನ ಅಚ್ಚರಿ ತಂದಿದೆ. ಸಂಪುಟ ಸಭೆಯ ಬಳಿಕ, ಅಲ್ಲಿ ಕೈಗೊಂಡ ನಿರ್ಧಾರಗಳನ್ನು ಅವರೇ ಹೆಚ್ಚಿನ ಸಂದರ್ಭದಲ್ಲಿ ಪ್ರಕಟಿಸಿದ್ದರು. ನಾಲ್ಕು ವರ್ಷಗಳಿಂದ, ಕೇಂದ್ರದ ಅನೇಕ ಮಹತ್ವದ ನಿರ್ಧಾರಗಳು, ಯೋಜನೆಗಳನ್ನು ಪ್ರಕಟಿಸಿದ ಅನುಭವ ಅವರದ್ದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಹರ್ಷವರ್ಧನ್‌, ಕೊರೊನಾ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಎಡವಿದರೆಂಬ ಟೀಕೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಹಾಗೂ ಆರೋಗ್ಯ ಇಲಾಖೆಯ ಸಹಾಯಕ ಸಚಿವ ಅಶ್ವನಿ ಚೌಬೆ ರಾಜೀನಾಮೆ ಕೊಡಬೇಕಾಗಿ ಬಂದಿದೆ ಯೆಂದು ಹೇಳಲಾಗಿದೆ.

ಕೇಂದ್ರ ಸಾಮಾಜಿಕ ನ್ಯಾಯ ಇಲಾಖೆಯ ಸಚಿವರಾಗಿದ್ದ ತಾವರ್‌ಚಂದ್‌ ಗೆಹಲೋಟ್ ಅವರನ್ನು ಬುಧವಾರದಂದು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಸದಸ್ಯ ಡಿ.ವಿ. ಸದಾನಂದ ಗೌಡ, ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌, ಶಿಕ್ಷಣ ಖಾತೆ ಸಹಾಯಕ ಸಚಿವ (ಸ್ವತಂತ್ರ ಹೊಣೆಗಾರಿಕೆ) ಸಂಜಯ್‌ ಶಾಮರಾವ್‌ ಧೋತ್ರೆ, ಕಾರ್ಮಿಕ ಖಾತೆ ಸಹಾಯ ಸಚಿವ ಸಂತೋಷ್‌ ಕುಮಾರ್‌ ಗಂಗ್ವಾರ್‌, ಪರಿಸರ ಖಾತೆ ಸಹಾಯಕ ಸಚಿವ ಬಾಬುಲಾಲ್‌ ಸುಪ್ರಿಯೊ, ಜಲ ಶಕ್ತಿ ಇಲಾಖೆಯ ಸಹಾಯಕ ಸಚಿವ, ಹೈನುಗಾರಿಕೆ ಹಾಗೂ ಎಂಎಸ್‌ಎಂಇ ಇಲಾಖೆಗಳ ಸಹಾಯಕ ಸಚಿವ ಪ್ರತಾಪ್‌ ಚಂದ್ರ ಸಾರಂಗಿ ಕೂಡ ಪುನಾರಚನೆ ವೇಳೆ ತಮ್ಮ ಸ್ಥಾನಗಳನ್ನು ತ್ಯಜಿಸಿದ್ದಾರೆ.

ಕೊರೊನಾ 2ನೇ ಅಲೆ ಸಂದರ್ಭದಲ್ಲಿ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ವಿರುದ್ಧ ಹಲವಾರು ಟೀಕೆಗಳು ಬಂದಿದ್ದವು. ಇನ್ನು, ಹಾಗೂ ಸಂತೋಷ್‌ ಕುಮಾರ್‌ ಗಂಗ್ವಾರ್‌ ಅವರ ವಿರುದ್ಧ ಲಾಕ್‌ಡೌನ್‌ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಸೂಕ್ತ ಸೌಕರ್ಯ, ಪರ್ಯಾಣ ಉದ್ಯೋಗ ವ್ಯವಸ್ಥೆ ಕೈಗೊಳ್ಳದ ಕಾರಣಕ್ಕೆ ಟೀಕೆಗೊಳಗಾಗಿದ್ದರು. ರಾಜೀನಾಮೆ ನೀಡಿದ ಸಚಿವರ ರಾಜೀನಾಮೆಗಳನ್ನು ಕೇಂದ್ರ ಸರಕಾರದ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.