ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಬಿಜೆಪಿಯವರಿಂದಲೇ ಘೋಷಣೆ
Team Udayavani, Mar 26, 2019, 3:40 PM IST
ಪಟ್ನಾ : ಬಾಲಿವುಡ್ ಹಿರಿಯ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರಿಂದು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರ ಒಂದು ಗುಂಪು ಪ್ರಸಾದ್ ವಿರುದ್ಧ ಘೋಷಣೆ ಕೂಗಿ ಪಕ್ಷದ ಹೈಕಮಾಂಡ್ ಗೆ ಬಹಿರಂಗವಾಗಿ ತೀವ್ರ ಇರಿಸು ಮುರಿಸು ಉಂಟುಮಾಡಿತು.
ಪಟ್ನಾ ಸಾಹಿಬ್ ಕ್ಷೇತ್ರಕ್ಕೆ ಆರ್ ಕೆ ಸಿನ್ಹಾ ಅವರು ಬಿಜೆಪಿ ಅಭ್ಯರ್ಥಿ ಆಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಬೆಂಬಲಿಗರಿಗೆ ಈ ಸೀಟು ಈಗ ರವಿ ಶಂಕರ್ ಪ್ರಸಾದ್ ಪಾಲಾಗಿರುವುದು ತೀವ್ರ ನಿರಾಶೆ, ಹತಾಶೆಗೆ ಕಾರಣವಾಗಿದೆ.
ಅಂತೆಯೇ ಇಲ್ಲಿನ ವಿಮಾನ ನಿಲ್ದಾಣದಲ್ಲಿ ರವಿಶಂಕರ್ ಪ್ರಸಾದ್ ಅವರು ಬಂದಿಳಿಯುತ್ತಿದ್ದಂತೆಯೇ ಸಿನ್ಹಾ ಅವರ ಬೆಂಬಲಿಗರು ಪ್ರಸಾದ್ ವಿರುದ್ಧ ಘೋಷಣೆ ಕೂಗಿದರು.
ಪಟ್ನಾ ಸಾಹಿಬ್ ಕ್ಷೇತ್ರವನ್ನು ಹಿಂದಿನಿಂದಲೂ ಪ್ರತಿನಿಧಿಸಿಕೊಂಡು ಬಂದಿದ್ದ ಬಾಲಿವುಡ್ ಹಿರಿಯ ನಟ ಶತ್ರುಘ್ನ ಸಿನ್ಹಾ ಅವರು ಪಕ್ಷದಲ್ಲಿ ತನಗೆ ಸೂಕ್ತ ಉನ್ನತ ಸ್ಥಾನಮಾನ ದೊರಕದಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗಿಸುತ್ತಲೇ ಬಂದು ಪಕ್ಷಕ್ಕೆ ತೀವ್ರ ವಿವಾದ, ಮುಜುಗರ, ಇರಿಸು ಮುರಿಸಿಗೆ ಕಾರಣವಾಗಿದ್ದರು.
ಹಾಗಾಗಿ ಅವರಿಗೆ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು