ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ


Team Udayavani, Oct 30, 2020, 6:30 AM IST

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

ಹೊಸದಿಲ್ಲಿ: ಭಾರತವು 2024ರ ವೇಳೆಗೆ 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆಯಾಗಲಿದೆ… -ಇದು ಪ್ರಧಾನಿ ಮೋದಿ ಅವರ ಖಚಿತ ವಿಶ್ವಾಸ. ಆಂಗ್ಲ ದಿನಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ಕೊರೊನಾ ಪೂರ್ವ, ಪ್ರಸ್ತುತ ಮತ್ತು ಕೊರೊನೋತ್ತರ ವಿಚಾರಗಳ ಬಗ್ಗೆ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ.

2024ರ ವೇಳೆಗೆ ಭಾರತ 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆಯಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ನೇತ್ಯಾತ್ಮಕ ಚಿಂತನೆ ಇರಿಸಿಕೊಂಡಿರುವವರಿಗೆ ಮಾತ್ರ ಇಂಥ ಅನುಮಾನಗಳು ಬರುತ್ತವೆ ಎಂದರು. ಆದರೆ ನಮ್ಮ ಸರಕಾರವು ಹಾಕಿಕೊಂಡಿರುವ ಗುರಿ ಗಳನ್ನು ಸಾಧಿಸುವಲ್ಲಿ ಯಶಸ್ಸು ಕಂಡಿದೆ. ಮುಂದಿನ ವರ್ಷದಿಂದಲೇ ನಾವು ತ್ವರಿತಗತಿಯಲ್ಲಿ ಕೆಲಸ ಮಾಡಿ ನಮ್ಮ ಗುರಿ ಸಾಧಿಸುತ್ತೇವೆ ಎಂದಿದ್ದಾರೆ.

ಆರೋಗ್ಯ ಕಾರ್ಯಕರ್ತರ ಕೆಲಸವನ್ನು ಉದಾಹರಣೆಯಾಗಿ ನೀಡಿದ ಅವರು, ಕೊರೊನಾ ಸೇನಾನಿಗಳು ದಿನಕ್ಕೆ 18-20 ತಾಸು ಕೆಲಸ ಮಾಡುತ್ತಿದ್ದಾರೆ. ಇವರನ್ನೇ ಮಾದರಿಯಾಗಿ ಇರಿಸಿಕೊಂಡು ನಾವೂ ಕೆಲಸ ಮಾಡಿದರೆ ಗುರಿ ಸಾಧಿಸುವುದು ಕಷ್ಟವೇನಲ್ಲ ಎಂದರು.

ಭಾರತೀಯರು ಸ್ವ-ಕೇಂದ್ರಿತರಲ್ಲ
ಆತ್ಮನಿರ್ಭರ ಭಾರತ ಯೋಜನೆ ಬಗ್ಗೆ ಮಾತನಾಡಿದ ಮೋದಿ, ಇದು ನಾವು ಸ್ವಾವಲಂಬಿಗಳಾಗಬೇಕು ಎಂದು ರೂಪಿಸಿದ ಯೋಜನೆ. ಇದಕ್ಕೆ ಉದಾಹರಣೆ ಔಷಧ ಕ್ಷೇತ್ರ. ಹೆಚ್ಚಿನ ಹಣ ವೆಚ್ಚ ಮಾಡದೆ ಕೊರೊನಾಕ್ಕೆ ಔಷಧ ಉತ್ಪಾದನೆ ಮತ್ತು ಲಸಿಕೆಯ ಸಂಶೋಧನೆ ನಡೆಸುತ್ತಿದ್ದೇವೆ. ನಮ್ಮ ವೈದ್ಯರೂ ಜಗತ್ತಿನ ಉಳಿದ ದೇಶಗಳಿಗೆ ಅರಿವು ಮೂಡಿಸುತ್ತಿದ್ದಾರೆ. ಇದು ನಿಜವಾದ ಆತ್ಮ ನಿರ್ಭರ ಕಲ್ಪನೆ ಎಂದರು.

ಜನ ಚೇತನ, ಜನ ಭಾಗೀದಾರಿ
ಜನರ ಪಾಲ್ಗೊಳ್ಳುವಿಕೆ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಅದನ್ನು ಕೊರೊನಾ ತೋರಿಸಿಕೊಟ್ಟಿದೆ. ಜನತಾ ಕರ್ಫ್ಯೂ, ದೀಪ ಹಚ್ಚುವುದು ಇದಕ್ಕೆ ಉದಾಹರಣೆಗಳು. ಈ ಮೂಲಕ ಕೊರೊನಾ ನಿಯಂತ್ರಣದ ವಿಚಾರದಲ್ಲಿ ಇಡೀ ದೇಶದ ಜನತೆ ಒಟ್ಟಾಗಿ ನಿಂತರು. ಅತ್ಯಂತ ಕಡಿಮೆ ಅವಧಿಯಲ್ಲೇ ಜನರಲ್ಲಿ ಅರಿವು ಮೂಡಿಸುವುದಕ್ಕೂ ಸಾಧ್ಯವಾಯಿತು ಎಂದಿದ್ದಾರೆ.

ಲಾಕ್‌ಡೌನ್‌ ಸಮಯೋಚಿತ
ದೇಶಾದ್ಯಂತ ಸೋಂಕು ಹರಡುವ ಮುನ್ನವೇ ಲಾಕ್‌ಡೌನ್‌ ಘೋಷಿಸಿದೆವು. ಆಗ ನಮ್ಮಲ್ಲಿ ನೂರರ ಲೆಕ್ಕದಲ್ಲಿ ಸೋಂಕು ಪ್ರಕರಣಗಳಿದ್ದವು. ಆದರೆ ಬೇರೆ ದೇಶಗಳು ಪರಿಸ್ಥಿತಿ ಕೈಮೀರಿದಾಗ ಲಾಕ್‌ಡೌನ್‌ ಘೋಷಿಸಿದವು. ಹಾಗಾಗಿ ಅದು ಪರಿಣಾಮಕಾರಿಯಾಗಲಿಲ್ಲ ಎಂದು ಮೋದಿ ಹೇಳಿದರು.

ಅನ್‌ಲಾಕ್‌ ಜಾರಿ ಮಾಡಿದ್ದು ಕೂಡ ಸಮರ್ಪಕ ವಾಗಿದೆ. ಹಂತ ಹಂತವಾಗಿ ಅನ್‌ಲಾಕ್‌ ಮಾಡಿದ್ದರಿಂದಾಗಿ ಆರ್ಥಿಕತೆಯೂ ಹಳಿಗೆ ಬರುತ್ತಿದೆ. ಇದಕ್ಕೆ ಆಗಸ್ಟ್‌ ಮತ್ತು ಸೆಪ್ಟಂಬರ್‌ ತಿಂಗಳ ಪ್ರಗತಿ ಸಾಕ್ಷಿ. ಲಾಕ್‌ಡೌನ್‌ ವೇಳೆ ದೇಶ ಹಲವು ಪಾಠಗಳನ್ನು ಕಲಿತಿದೆ. ಜನ ಸ್ವಯಂಪ್ರೇರಿತರಾಗಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮಾಡಿದರು. ಕೇಂದ್ರ – ರಾಜ್ಯ ಸರಕಾರಗಳೂ ಈ ವಿಷಯದಲ್ಲಿ ಜತೆಗೂಡಿ ಕೆಲಸ ಮಾಡುತ್ತಿವೆ ಎಂದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.