ನಾನು ಗಲ್ಲಿಗೇರಲು ಸಿದ್ಧ: ಸುಕೇಶ್ ಚಂದ್ರಶೇಖರ್
ನೀವು ರಾಜೀನಾಮೆ ನೀಡುತ್ತೀರಾ?: ಕೇಜ್ರಿವಾಲ್ಗೆ ಸವಾಲು
Team Udayavani, Nov 9, 2022, 6:50 AM IST
ನವದೆಹಲಿ: ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಸರಣಿ ಪತ್ರಗಳ ಮೂಲಕ ಆರೋಪ ಹೊರಿಸುತ್ತಿರುವ ಬಹುಕೋಟಿ ವಂಚಕ ಸುಕೇಶ್ ಚಂದ್ರಶೇಖರ್ ಮಂಗಳವಾರ ಮತ್ತೊಂದು ಪತ್ರವನ್ನು ಬಿಡುಗಡೆ ಮಾಡಿದ್ದಾರೆ.
ಅದರಲ್ಲಿ ಅವರು, “ನಾನು ಆಮ್ ಆದ್ಮಿ ಪಕ್ಷದ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪ ಸುಳ್ಳಾಗಿದ್ದರೆ, ಗಲ್ಲುಶಿಕ್ಷೆಯನ್ನು ಎದುರಿಸಲೂ ಸಿದ್ಧನಿದ್ದೇನೆ’ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲ, ನಾನು ಹೇಳಿರುವುದು ಸುಳ್ಳೆಂದಾದರೆ, ಅದನ್ನು ಸಾಬೀತುಪಡಿಸಿ. ಇಲ್ಲದಿದ್ದರೆ, ಕೂಡಲೇ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಪಡೆಯಿರಿ ಎಂದು ಕೇಜ್ರಿವಾಲ್ರಿಗೆ ಸವಾಲನ್ನೂ ಹಾಕಿದ್ದಾರೆ.
ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ ಸುಕೇಶ್, “ದೆಹಲಿ ಲೆಫ್ಟಿನೆಂಟ್ ಜನರಲ್ಗೆ ನಾನು ಬರೆದಿರುವ ದೂರನ್ನು ವಾಪಸ್ ಪಡೆಯುವಂತೆ ನನಗೆ ಆಪ್ನಿಂದ ನಿರಂತರವಾಗಿ ಬೆದರಿಕೆಗಳು ಹಾಗೂ ಒತ್ತಡಗಳು ಬರುತ್ತಿವೆ. ನಾನು ಈವರೆಗೆ ಸುಮ್ಮನೆ ಕುಳಿತಿದ್ದೆ. ಎಲ್ಲವನ್ನೂ ನಿರ್ಲಕ್ಷಿಸುತ್ತಿದ್ದೆ’ ಎಂದೂ ಹೇಳಿದ್ದಾರೆ.
ಕಳೆದ ತಿಂಗಳಷ್ಟೇ ಜೈಲಿನಿಂದಲೇ ಲೆ.ಗವರ್ನರ್ಗೆ ಪತ್ರ ಬರೆದಿದ್ದ ಸುಕೇಶ್, ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರು ನನ್ನಿಂದ 10 ಕೋಟಿ ರೂ. ವಸೂಲಿ ಮಾಡಿದ್ದಾರೆ. ಕೇಜ್ರಿವಾಲ್ ಅವರು ನನ್ನನ್ನು ರಾಜ್ಯಸಭೆ ಸದಸ್ಯನನ್ನಾಗಿ ಮಾಡಲು 50 ಕೋಟಿ ರೂ. ಗಳನ್ನು ಕೇಳಿದ್ದರು ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್