ಸರಕಾರ ಅದೇಶ ಕೊಟ್ಟಲ್ಲಿ ಪಿ.ಒ.ಕೆ. ಮೇಲೆ ದಾಳಿಮಾಡಲು ಸೇನೆ ಸನ್ನದ್ಧ: ಸೇನಾ ಮುಖ್ಯಸ್ಥ ನರವಣೆ
Team Udayavani, Jan 2, 2020, 10:38 PM IST
ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ವಿಚಾರದಲ್ಲಿ ಕಾರ್ಯಾಚರಣೆ ಕೈಗೊಳ್ಳಲು ಭಾರತೀಯ ಸೇನೆ ಹಲವಾರು ‘ಪ್ಲ್ಯಾನ್’ಗಳನ್ನು ಸಿದ್ಧಪಡಿಸಿಟ್ಟುಕೊಂಡಿದೆ ಮತ್ತು ‘ಯಾವುದೇ ರೀತಿಯ ‘ಟಾಸ್ಕ್’ಗೂ ನಾವು ಸಿದ್ಧರಾಗಿದ್ದೇವೆ ಎಂದು ಭಾರತೀಯ ಭೂಸೇನೆಯ ಮುಖ್ಯಸ್ಥರಾಗಿ ಅಧಿಕಾರವಹಿಸಿಕೊಂಡ ಜನರಲ್ ಎಂ.ಎಂ. ನರವಣೆ ಅವರು ಎನ್.ಡಿ.ಟಿ.ವಿ.ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.
ಪಿಒಕೆ ವಿಚಾರದಲ್ಲಿ ನೈಜ ಫಲಿತಾಂಶವನ್ನು ತಂದುಕೊಡಬಲ್ಲ ಯಾವುದಾದರೂ ಯೋಜನೆಯನ್ನು ಕಾರ್ಯಗತಗೊಳಿಸುವ ಇರಾದೆ ಸೇನೆಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ನರವಣೆ ಅವರು, ‘ ಜಮ್ಮು ಕಾಶ್ಮೀರ ಸೇರಿದಂತೆ ಭಾರತ – ಪಾಕ್ ಗಡಿಯುದ್ದಕ್ಕೂ ನಾವು ಸೇನೆಯನ್ನು ಜಮಾವಣೆ ಮಾಡಿದ್ದೇವೆ ಮತ್ತು ಹಲವಾರು ಯೋಜನೆಗಳನ್ನು ನಾವು ಈಗಾಗಲೇ ಹಾಕಿಕೊಂಡಿದ್ದೇವೆ ಮತ್ತು ಒಂದುವೇಳೆ ಅಗತ್ಯ ಬಿದ್ದಲ್ಲಿ ಈ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುವುದು ಮತ್ತು ನಾವು ಕೈಗೊಳ್ಳುವ ಕಾರ್ಯದಲ್ಲಿ ನಾವು ನೂರು ಪ್ರತಿಶತ ಯಶಸ್ಸನ್ನು ಸಾಧಿಸುವ ವಿಶ್ವಾಸ ನಮಗಿದೆ’ ಎಂದು ಅವರು ಹೇಳಿದರು.
ಒಂದು ವೇಳೆ ಭಾರತವು ಪಿ.ಒ.ಕೆ. ಮೇಲೆ ದಾಳಿ ಮಾಡಿದ್ದೇ ಆದಲ್ಲಿ ಅದು ದೊಡ್ಡ ಮಟ್ಟದ ದಾಳಿಯೇ ಆಗಿರುತ್ತದೆ ಎಂಬ ಸುಳಿವನ್ನೂ ಸಹ ನೂತನ ಸೇನಾ ಮುಖ್ಯಸ್ಥರು ಇದೇ ಸಂದರ್ಭದಲ್ಲಿ ಹೊರಗೆಡಹಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ