ಎಲ್ಜೆಪಿ ಇಬ್ಭಾಗ: ಏಕಾಂಗಿಯಾದ ಅಧ್ಯಕ್ಷ ಚಿರಾಗ್ ಪಾಸ್ವಾನ್
Team Udayavani, Jun 15, 2021, 8:34 AM IST
ಹೊಸದಿಲ್ಲಿ: ಬಿಹಾರ ರಾಜಕೀಯವು ಸೋಮವಾರ ಅಚ್ಚರಿಯ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ಕೇಂದ್ರದ ಮಾಜಿ ಸಚಿವ ದಿವಂಗತ ರಾಮ್ ವಿಲಾಸ್ ಪಾಸ್ವನ್ರಿಂದ ಸ್ಥಾಪಿತವಾಗಿರುವ ಲೋಕಜನಶಕ್ತಿ ಪಕ್ಷ ಏಕಾಏಕಿ ಇಬ್ಭಾಗವಾಗಿದೆ! ಎಲ್ ಜೆಪಿಯ ಆರು ಮಂದಿ ಲೋಕಸಭೆ ಸಂಸದರ ಪೈಕಿ ಐವರು ದಿಢೀರನೆ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ವಿರುದ್ಧ ಬಂಡಾಯ ಎದ್ದಿದ್ದಾರೆ.
ಜತೆಗೆ ಹಾಜಿಪುರ ಕ್ಷೇತ್ರದ ಲೋಕಸಭಾ ಸದಸ್ಯ, ಚಿರಾಗ್ ಅವರ ಬಂಧು ಪಶುಪತಿ ಕುಮಾರ್ ಪರಸ್ ಅವರನ್ನು ಪಕ್ಷದ ನಾಯಕ ಎಂದು ಆಯ್ಕೆ ಮಾಡಿದ್ದಾರೆ. ಅನಿರೀಕ್ಷಿತವಾಗಿ ನಡೆದ ಈ ಬೆಳವಣಿಗೆಯಿಂದ ಚಿರಾಗ್ ಪಾಸ್ವಾನ್ ಕಕ್ಕಾಬಿಕ್ಕಿಯಾಗಿರುವುದು ಮಾತ್ರವಲ್ಲ, ಪಕ್ಷದಲ್ಲಿ ಏಕಾಂಗಿಯಾಗಿದ್ದಾರೆ.
ಈ ಕುರಿತು ಹೊಸದಿಲ್ಲಿಯಲ್ಲಿ ಮಾತನಾಡಿದ ಪಶುಪತಿ ಪರಸ್, “ನಾನು ಪಕ್ಷವನ್ನು ಒಡೆದಿಲ್ಲ. ಬದಲಾಗಿ ಉಳಿಸಿದ್ದೇನೆ. ಹಾಲಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ನಾಯಕತ್ವದ ವಿರುದ್ಧ ಶೇ.99 ಮಂದಿ ಅತೃಪ್ತಿ ಹೊಂದಿದ್ದಾರೆ. ಜತೆಗೆ 2020ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾದ ಹಿನ್ನಡೆಯೂ ಇದಕ್ಕೆ ಕಾರಣವಾಗಿದೆ’ ಎಂದಿದ್ದಾರೆ.
ಇದನ್ನೂ ಓದಿ:ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ
ನಿತೀಶ್ ಪ್ರತೀಕಾರ?: 2020ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿರುದ್ಧ ತಿರುಗಿ ಬಿದ್ದಿದ್ದ ಚಿರಾಗ್ ಪಾಸ್ವಾನ್, ಜೆಡಿಯು ಅಭ್ಯರ್ಥಿಗಳು ಸ್ಪರ್ಧಿಸಿದ್ದ ಎಲ್ಲ ಕ್ಷೇತ್ರಗಳಲ್ಲೂ ಎಲ್ಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಅಲ್ಲದೇ, ನಿತೀಶ್ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿದ್ದ ಅವರು, ನಿತೀಶ್ರನ್ನು ಅಧಿಕಾರದಿಂದ ಕೆಳಕ್ಕಿಳಿಸಬೇಕೆಂದು ಕರೆ ನೀಡಿದ್ದರು.
ಇದರ ಪರಿಣಾಮವೆಂಬಂತೆ, ಚುನಾವಣೆಯಲ್ಲಿ ಜೆಡಿಯು ಬಾಹುಳ್ಯದ ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿತ್ತು. ಈಗ ಎಲ್ಜೆಪಿ ಎರಡು ಹೋಳಾಗಿ, ಚಿರಾಗ್ಗೆ ಮುಖಭಂಗವಾಗಿರುವುದರ ಹಿಂದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕೈವಾಡವಿದೆ ಎಂಬ ಗುಸು ಗುಸು ಕೇಳಿ ಬಂದಿದೆ. ಚಿರಾಗ್ ವಿರುದ್ಧ ಸಂಸದರು ಬಂಡಾಯ ಏಳಲು ಖುದ್ದು ನಿತೀಶ್ ಅವರೇ ಕುಮ್ಮಕ್ಕು ನೀಡುವ ಮೂಲಕ ಪ್ರತೀಕಾರ ತೀರಿಸಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿವೆ.
ಎನ್ಡಿಎ ಜತೆ ಇರುತ್ತೇವೆ: ಹೊಸ ಬೆಳವಣಿಗೆಗಳ ಕುರಿತು ಲೋಕಸಭೆ ಸ್ಪೀಕರ್ ಒಂ ಬಿರ್ಲಾ ಅವರಿಗೆ ಮಾಹಿತಿ ನೀಡಲಾಗಿದೆ. ನಮ್ಮ ಗುಂಪು ಬಿಜೆಪಿ ನೇತೃತ್ವದ ಎನ್ಡಿಎ ಜತೆಗೇ ಇರುತ್ತದೆ. ಚಿರಾಗ್ ಅವರು ಪಕ್ಷದಲ್ಲಿ ಉಳಿಯಲಿದ್ದಾರೆ ಎಂದು ಪಶುಪತಿ ಕುಮಾರ್ ಪರಸ್ ಹೇಳಿದ್ದಾರೆ. ಜತೆಗೆ ಸಿಎಂ ನಿತೀಶ್ ಕುಮಾರ್ ಅವರನ್ನು “ವಿಕಾಸ ಪುರುಷ’ ಎಂದೂ ಅವರು ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?