ರಾಷ್ಟ್ರ ರಾಜಧಾನಿಯಲ್ಲಿ ಏಕಾಏಕಿ ಕನಿಷ್ಠ ತಾಪಮಾನ ದಾಖಲು
ದೇಶದ ವಿವಿಧೆಡೆ ಅತ್ಯಂತ ದಟ್ಟವಾದ ಮಂಜು ಕವಿದ ವಾತಾವರಣ
Team Udayavani, Jan 1, 2023, 6:22 PM IST
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರದಂದು ಕನಿಷ್ಠ ತಾಪಮಾನ 5.5 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ, ಇದು ಋತುವಿನ ಸರಾಸರಿಗಿಂತ ಎರಡು ಹಂತಗಳಿಗಿಂತ ಕಡಿಮೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ.
ಶುಕ್ರವಾರ ಮತ್ತು ಶನಿವಾರ ನಗರದಲ್ಲಿ ಕನಿಷ್ಠ ತಾಪಮಾನ 10.7 ಮತ್ತು 10.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ದೇಶದ ಹಲವಾರು ಭಾಗಗಳಲ್ಲಿ ದಾಖಲೆಯ ತಾಪಮಾನ ಕುಸಿತ ದಾಖಲಾಗಿದೆ.
ಅಂಬಾಲಾ, ಡೆಹ್ರಾಡೂನ್, ಬರೇಲಿ ಮತ್ತು ವಾರಾಣಸಿಯಲ್ಲಿ ದಟ್ಟವಾದ ಮಂಜು ಕವಿದಿದ್ದು ಗೋಚರತೆ ಬೆಳಗ್ಗೆ 5.30 ಕ್ಕೆ 25 ಮೀಟರ್ನಷ್ಟು ದಾಖಲಾಗಿದೆ. ಚಂಡೀಗಢ, ಪಟಿಯಾಲ, ಬಹರೆಚ್, ಗಯಾ, ಪೂರ್ಣಿಯಾ, ಕೈಲಾಶಹರ್ ಮತ್ತು ಅಗರ್ತಲಾದಲ್ಲಿ 50 ಮೀಟರ್ಗಳಷ್ಟು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ಇಲಾಖೆ ಪ್ರಕಾರ, ಗೋಚರತೆಯು 0 ಮತ್ತು 50 ಮೀಟರ್ಗಳ ನಡುವೆ ‘ಅತ್ಯಂತ ದಟ್ಟವಾದ ಮಂಜು. 51 ಮತ್ತು 200 ಮೀಟರ್ಗಳು ‘ದಟ್ಟ ಮಂಜು’, 201 ಮತ್ತು 500 ಮೀಟರ್ಗಳು- ಮಧ್ಯಮ ಮಂಜು ಮತ್ತು 501 ಮತ್ತು 1,000 ಮೀಟರ್ಗಳು ಆಗಿದ್ದರೆ ತೀರ ಕಡಿಮೆಯಾದ ಮಂಜು ಕವಿದಿರುತ್ತದೆ.
ಹವಾಮಾನ ತಜ್ಞರು ಭಾನುವಾರದಂದು ಮುಖ್ಯವಾಗಿ ಸ್ಪಷ್ಟವಾದ ಆಕಾಶವನ್ನು ಮುನ್ಸೂಚಿಸಿದ್ದಾರೆ, ಗರಿಷ್ಠ ತಾಪಮಾನವು ಸುಮಾರು 19 ಡಿಗ್ರಿ ಸೆಲ್ಸಿಯಸ್ನಲ್ಲಿ ನೆಲೆಗೊಳ್ಳುವ ಸಾಧ್ಯತೆಯಿದೆ. ರಾಷ್ಟ್ರ ರಾಜಧಾನಿಯಲ್ಲಿ ಬೆಳಗ್ಗೆ 8.30ಕ್ಕೆ ಶೇ.97ರಷ್ಟು ಆರ್ದ್ರತೆ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್