ಮುಂಬೈಯಲ್ಲಿ ರೆಡ್ ಅಲರ್ಟ್
Team Udayavani, Jul 29, 2019, 6:05 AM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಜನರನ್ನು ಆತಂ ಕಕ್ಕೆ ನೂಕಿರುವ ವರ್ಷಧಾರೆ ಮುಂದುವ ರಿದಿದ್ದು, ಸೋಮವಾರವೂ ಮುಂಬೈನ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರವಿವಾರ ಹಾಗೂ ಸೋಮವಾರಕ್ಕೆ ಮುಂಬೈನ ಬಹುತೇಕ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ರವಿವಾರ ಮಹಾರಾಷ್ಟ್ರಾದ್ಯಂತ ವ್ಯಾಪಕ ಮಳೆ ಸುರಿದಿದ್ದು, ವಿಶೇಷವೆಂದರೆ, ಪ್ರಸಕ್ತ ಮುಂಗಾರಿನಲ್ಲಿ ಮಳೆ ಕೊರತೆ ಎದುರಿಸಿರುವ ಮರಾಠವಾಡ ಮತ್ತು ವಿದರ್ಭಗಳಲ್ಲೂ ವರುಣನ ಅಬ್ಬರ ಕಂಡುಬಂದಿರುವುದು ಇಲ್ಲಿನ ಜನರಲ್ಲಿ ಮಂದಹಾಸ ಮೂಡಿಸಿದೆ.
ಅಲರ್ಟ್ ಆಗಿರಿ: ಸೋಮವಾರ ಗುಡುಗು ಸಹಿತ ಧಾರಾಕಾರ ಮಳೆಯಾಗುವುದಾಗಿ ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿರುವ ಕಾರಣ, ಎಲ್ಲರೂ ಅಲರ್ಟ್ ಆಗಿರುವಂತೆ ಬೃಹನ್ಮುಂಬೈ ಮಹಾನಗರ ಪಾಲಿಕೆ ಸೂಚಿಸಿದೆ. ಸುಖಾಸುಮ್ಮನೆ ಮನೆಗಳಿಂದ ಹೊರಬರಬೇಡಿ ಎಂದೂ ಹೇಳಿದೆ.
ರವಿವಾರದ ಮಳೆಯಿಂದ ಮುರ್ಬಾದ್ ನಿಂದ ಕಲ್ಯಾಣ್ಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಯು ಭಾಗಶಃ ಕೊಚ್ಚಿ ಹೋಗಿದೆ. ಉಲ್ಹಾಸ್ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ಬದ್ಲಾಪುರ, ತಿತ್ವಾಲಾ ಮತ್ತು ಕಲ್ಯಾಣ್ನಲ್ಲಿ ಪ್ರವಾಹ ಉಂಟಾಗಿದೆ. ಮುರ್ಬಾದ್ನಲ್ಲಿ 370 ಮನೆಗಳು ಜಲಾವೃತ ವಾಗಿವೆ. ಇಲ್ಲಿ ಸಿಲುಕಿರುವವರನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲು ರಕ್ಷಣಾ ಕಾರ್ಯಕರ್ತರು ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿದ್ದಾರೆ.
ರಾಜಸ್ಥಾನ, ಬಿಹಾರ, ಗುಜರಾತ್, ಅಸ್ಸಾಂನಲ್ಲೂ ವರುಣನ ಅಬ್ಬರ ಮುಂದು ವರಿದಿದೆ. ರಾಜಸ್ಥಾನದಲ್ಲಿ ಮಳೆ ಸಂಬಂಧಿ ಘಟನೆಗಳಿಗೆ ಮೃತರ ಸಂಖ್ಯೆ 22ಕ್ಕೇರಿದ್ದರೆ, ಅಸ್ಸಾಂನಲ್ಲಿ 82 ಆಗಿದೆ. ಬಿಹಾರದಲ್ಲಿ 7 ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಒಡಿಶಾ ದಲ್ಲಿ ಮುಂದಿನ ವಾರ ಭಾರೀ ಮಳೆಯಾಗಲಿದೆ.
ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಜಮ್ಮು-ಕಾಶ್ಮೀರದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನ ಹಿನ್ನೆಲೆ ರವಿವಾರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮೂರು ಪ್ರಮುಖ ಬೇಸ್ ಕ್ಯಾಂಪ್ಗ್ಳಿಂದ ಹೊರಡಬೇಕಿದ್ದ ಯಾತ್ರಿಕರು ಕ್ಯಾಂಪ್ನಲ್ಲೇ ಉಳಿದುಕೊಂಡಿದ್ದಾರೆ. ಅಲ್ಲದೆ ಯಾತ್ರೆಯ ಹಾದಿಯಲ್ಲಿ ದಟ್ಟ ಮಂಜಿನ ಮಳೆ ಉಂಟಾಗುವ ಸಾಧ್ಯತೆಯಿದೆ ಎಂದೂ ಎಚ್ಚರಿಕೆ ನೀಡಲಾಗಿದೆ.
ನೇಪಾಳ: ಮೃತರ ಸಂಖ್ಯೆ 113
ಕಳೆದ 2 ವಾರಗಳಿಂದ ನೇಪಾಳದ ಮಧ್ಯ ಹಾಗೂ ದಕ್ಷಿಣ ಭಾಗದಲ್ಲಿ ಸುರಿದ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 113ಕ್ಕೇರಿಕೆಯಾಗಿದೆ. 38 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದ 77 ಜಿಲ್ಲೆಗಳ ಪೈಕಿ 67ರಲ್ಲಿ
ಮಳೆ ಸಂಬಂಧಿ ದುರಂತಗಳು ಸಂಭವಿಸಿವೆ. ಸಂತ್ರಸ್ತರ ಪರಿಹಾರಕ್ಕೆ ನೆರವಾಗುವಂತೆ ಅಂತಾರಾಷ್ಟ್ರೀಯ ಸಂಸ್ಥೆಗಳಿಗೂ ಮನವಿ ಮಾಡಲಾಗಿದೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್