ಚಳಿಗೆ ತತ್ತರಿಸಿದ ಉತ್ತರ: ರೆಡ್ ಅಲರ್ಟ್ ಹಲವು ರಾಜ್ಯಗಳಿಗೆ ವಿಸ್ತರಣೆ
Team Udayavani, Dec 29, 2019, 7:20 PM IST
ನವದೆಹಲಿ: ಉತ್ತರ ಭಾರತದಾದ್ಯಂತ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲಿ ಘೋಷಿಸಲಾಗಿದ್ದ ರೆಡ್ ಅಲರ್ಟ್ ಅನ್ನು ಭಾನುವಾರ ಇತರೆ ರಾಜ್ಯಗಳಿಗೂ ವಿಸ್ತರಿಸಲಾಗಿದೆ.
ದೆಹಲಿ, ಉತ್ತರಪ್ರದೇಶ, ಪಂಜಾಬ್, ಹರ್ಯಾಣ, ರಾಜಸ್ಥಾನ ಮತ್ತು ಬಿಹಾರದಲ್ಲೂ ರೆಡ್ ಕಲರ್ ವಾರ್ನಿಂಗ್ ನೀಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಹೇಳಿದೆ. ದೆಹಲಿಯಲ್ಲಿ ಭಾನುವಾರ ಮೈನಸ್ 3.2 ಡಿ.ಸೆ. ತಾಪಮಾನ ದಾಖಲಾಗಿದೆ. ಮಂಗಳವಾರದವರೆಗೂ ಇದೇ ಸ್ಥಿತಿ ಮುಂದುವರಿಯಲಿದ್ದು, ಡಿ.31ರ ರಾತ್ರಿ ಮಳೆಯಾಗುವ ಸಾಧ್ಯತೆಯಿದ್ದು, ಅದರಿಂದಾಗಿ ಚಳಿ ಇಳಿಮುಖವಾಗಬಹುದು ಎಂದೂ ಇಲಾಖೆ ತಿಳಿಸಿದೆ.
ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ಮೈನಸ್ 6.2 ಡಿ.ಸೆ. ತಾಪಮಾನ ದಾಖಲಾಗಿದ್ದು, ಪ್ರಸಿದ್ಧ ದಾಲ್ ಸರೋವರದ ನೀರು ಮಂಜುಗಡ್ಡೆಯಾಗಿ ಪರಿವರ್ತಿತವಾಗಿದೆ.
ಶಾಲೆಗಳಿಗೆ ರಜೆ:
ನಿರಂತರ ಚಳಿಗಾಳಿಗೆ ತತ್ತರಿಸಿರುವ ಹರ್ಯಾಣದಲ್ಲಿ 2 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅದಾದ ನಂತರ ಜ.1ರಿಂದ 15ರವರೆಗೆ ಎಲ್ಲ ಶಾಲೆಗಳೂ ಚಳಿಗಾಲದ ರಜೆ ಹಿನ್ನೆಲೆಯಲ್ಲಿ ಮುಚ್ಚಲಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ