Rekha Patra: ಬಿಜೆಪಿ ಟಿಕೆಟ್‌ ಪಡೆದ ಸಂದೇಶ್‌ಖಾಲಿ ಸಂತ್ರಸ್ತೆ ಜತೆ ಮೋದಿ ಮಾತು

ರೇಖಾ ಪಾತ್ರ ಅವರನ್ನು "ಶಕ್ತಿ ಸ್ವರೂಪ' ಎಂದು ಶ್ಲಾಘಿಸಿದ ಪ್ರಧಾನಿ

Team Udayavani, Mar 26, 2024, 9:12 PM IST

Rekha Patra: ಬಿಜೆಪಿ ಟಿಕೆಟ್‌ ಪಡೆದ ಸಂದೇಶ್‌ಖಾಲಿ ಸಂತ್ರಸ್ತೆ ಜತೆ ಮೋದಿ ಮಾತು

ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರಕರಣದಲ್ಲಿ ಲೈಂಗಿಕ ಕಿರುಕುಳಕ್ಕೊಳಗಾದ ಸಂತ್ರಸ್ತೆಯೂ ಆಗಿರುವ ಬಸೀರ್‌ಹಾತ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ನಲ್ಲಿ ಸ್ಪರ್ಧಿಸುತ್ತಿರುವ ರೇಖಾ ಪಾತ್ರ ಅವರೊಂದಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದು ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿಜೆಪಿಯು ಅಚ್ಚರಿಯೆಂಬಂತೆ, ದೇಶಾದ್ಯಂತ ಸುದ್ದಿ ಮಾಡಿದ್ದ ಸಂದೇಶ್‌ಖಾಲಿ ಪ್ರಕರಣದ ಸಂತ್ರಸ್ತೆ ರೇಖಾ ಅವರಿಗೆ ಬಸೀರ್‌ಹಾತ್‌ ಕ್ಷೇತ್ರದ ಟಿಕೆಟ್‌ ಘೋಷಿಸಿತ್ತು. ಇದರ ಬೆನ್ನಲ್ಲೇ, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಭ್ಯರ್ಥಿ ರೇಖಾ ಪಾತ್ರ ಅವರಿಗೆ ಕರೆ ಮಾಡಿ, ಚುನಾವಣಾ ಪ್ರಚಾರಕ್ಕೆ ನಡೆಸಲಾದ ಸಿದ್ಧತೆಗಳ ಕುರಿತು ವಿಚಾರಿಸಿದರು. ಜತೆಗೆ, ಸಂದೇಶಖಾಲಿ ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡಿದ ಅವರನ್ನು ‘ಶಕ್ತಿ ಸ್ವರೂಪ’ ಎಂದು ಶ್ಲಾಘಿಸಿದರು.

ಸಂದೇಶ್‌ಖಾಲಿಯಲ್ಲಿ ಟಿಎಂಸಿ ಸ್ಥಳೀಯ ನಾಯಕ ಶಹಜಹಾನ್‌ ಶೇಖ್‌ ಮತ್ತು ಆತನ ಸಹಚರರಿಂದ ಮಹಿಳೆಯರ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತುವ ಮೂಲಕ ರೇಖಾ ಅವರು ಭಾರೀ ಸುದ್ದಿಯಾಗಿದ್ದರು. ಅವರೊಂದಿಗೆ ಮಾತನಾಡುವ ವೇಳೆ ಮೋದಿಯವರು, ಪ್ರಚಾರದ ಸಿದ್ಧತೆಗಳ ಬಗ್ಗೆ, ಸ್ಥಳೀಯವಾಗಿ ಬಿಜೆಪಿಗಿರುವ ಬೆಂಬಲದ ಬಗ್ಗೆ ಹಾಗೂ ಸಂದೇಶ್‌ಖಾಲಿ ಮಹಿಳೆಯರ ಸ್ಥಿತಿಗತಿ ಬಗ್ಗೆಯೂ ವಿಚಾರಿಸಿದರು. ಜತೆಗೆ, ರೇಖಾ ಅವರಿಗೆ ಪ್ರಧಾನಿ ಮೋದಿ ಧೈರ್ಯ ತುಂಬಿದರು.

ಯಾರ ಮೇಲೂ ದ್ವೇಷವಿಲ್ಲ

ಆರಂಭದಲ್ಲಿ ಬಿಜೆಪಿ ನನಗೆ ಟಿಕೆಟ್‌ ನೀಡುತ್ತಿದ್ದಂತೆ, ನಮ್ಮ ಸುತ್ತಮುತ್ತಲಿರುವ ಟಿಎಂಸಿ ಕಾರ್ಯಕರ್ತರು ವಿರೋಧ ಮಾಡಿದರು. ನಂತರದಲ್ಲಿ ಅವರೂ ನನಗೆ ಬೆಂಬಲ ನೀಡುತ್ತಿದ್ದಾರೆ. ನನಗೆ ಯಾರ ಮೇಲೂ ದ್ವೇಷವಿಲ್ಲ ಎಂದೂ ರೇಖಾ ಹೇಳಿದರು.

2011ರಿಂದ ಮತದಾನವನ್ನೇ ಮಾಡಿಲ್ಲ: ರೇಖಾ

ಸಂದೇಶ್‌ಖಾಲಿಯಲ್ಲಿ ನಡೆಯುತ್ತಿದ್ದ ಅನಾಚಾರಗಳ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಿಸಿದ ರೇಖಾ ಅವರು, “ಇಲ್ಲಿನ ಪರಿಸ್ಥಿತಿಯಿಂದಾಗಿ 2011ರಿಂದ ನನಗೆ ಮತ ಹಾಕಲು ಕೂಡ ಸಾಧ್ಯವಾಗಲಿಲ್ಲ. ಇಲ್ಲಿನ ಜನರು ಉದ್ಯೋಗ ಅರಸಿಕೊಂಡು ಬೇರೆ ರಾಜ್ಯಗಳಿಗೆ ಹೋಗುತ್ತಾರೆ. ನನ್ನ ಪತಿ ಕೂಡ ತಮಿಳುನಾಡು ಮತ್ತು ಕೇರಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಜನರಿಗೆ ಇಲ್ಲಿಯೇ ಉದ್ಯೋಗ ಕಲ್ಪಿಸಬೇಕೆಂಬುದು ಬಡ ಕುಟುಂಬದಿಂದ ಬಂದ ನನ್ನ ಆಶಯವಾಗಿದೆ’ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ನಮ್ಮೊಂದಿಗೆ ನಿಂತಿರುವುದು ನಮಗೆ ಶಕ್ತಿ ತಂದಿದೆ. ಸ್ವತಃ ಶ್ರೀರಾಮನೇ ನಮ್ಮೊಂದಿಗಿದ್ದಾನೆ ಎಂಬಂಥ ಭಾವನೆ ಮೂಡಿದೆ ಎಂದು ರೇಖಾ ಪಾತ್ರ ಹೇಳಿದರು.

ಸಂತ್ರಸ್ತೆಗೆ ಮೋದಿ ಹೇಳಿದ್ದೇನು?

– ನೀವು ದಿಟ್ಟವಾಗಿ ಸಂದೇಶ್‌ಖಾಲಿ ಹೋರಾಟ ಮಾಡಿದ್ದೀರಿ. ನೀವು ಶಕ್ತಿ ಸ್ವರೂಪ.

– ತೃಣಮೂಲ ಕಾಂಗ್ರೆಸ್‌ ಸರ್ಕಾರವು ರಾಜ್ಯದ ಜನರ ವಿರುದ್ಧ ಹೇಗೆ ಕೆಲಸ ಮಾಡುತ್ತಿದೆ ಎಂಬುದನ್ನು ನೀವೇ ಜನರಿಗೆ ತಿಳಿಸಬೇಕು.

– ಟಿಎಂಸಿ ಸರ್ಕಾರವು ಕೇಂದ್ರದ ಬಿಜೆಪಿ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿ ಮಾಡಲು ಬಿಡುತ್ತಿಲ್ಲ.

– ತೃಣಮೂಲ ಕಾಂಗ್ರೆಸ್‌ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೇಂದ್ರದ ಯೋಜನೆಗಳ ಹೆಸರನ್ನು ಬದಲಿಸುತ್ತಿದೆ

– ಜನರ ಮಧ್ಯೆ ಇದ್ದು, ಈ ಎಲ್ಲ ವಿಚಾರಗಳನ್ನೂ ಅವರಿಗೆ ತಲುಪಿಸುವ ಕೆಲಸ ಮಾಡಿ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.