Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು


Team Udayavani, Jun 6, 2023, 11:37 AM IST

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

ಮುಂಬಯಿ: ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತದ ಬಗ್ಗೆ ರಿಲಯನ್ಸ್ ಫೌಂಡೇಷನ್ ನಿಂದ ತೀವ್ರವಾದ ಸಂತಾಪ ವ್ಯಕ್ತಪಡಿಸಲಾಗಿದೆ. ಅಷ್ಟೇ ಅಲ್ಲ, ಫೌಂಡೇಷನ್ ನ ವಿಶೇಷ ವಿಪತ್ತು ನಿರ್ವಹಣಾ ತಂಡವನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದ್ದು, ತಂಡವು ದಿನದ ಇಪ್ಪತ್ನಾಲ್ಕು ಗಂಟೆಯೂ ಗಾಯಾಳುಗಳಿಗೆ ಅಗತ್ಯ ಇರುವಂಥ ನೆರವು ಹಾಗೂ ಸಹಾಯವನ್ನು ಒದಗಿಸುತ್ತಿದೆ.

ಇಂಥ ಘೋರ ದುರಂತದ ಸಂತ್ರಸ್ತರ ನೋವನ್ನು ಸಂಪೂರ್ಣವಾಗಿ ಇಲ್ಲದಂತೆ ಮಾಡುವ ಶಕ್ತಿ ನಮಗಿಲ್ಲ. ಆದರೆ ದುಃಖಿತ ಕುಟುಂಬಗಳ ಭವಿಷ್ಯಕ್ಕಾಗಿ ಅಗತ್ಯವಾದದ್ದನ್ನು ಮಾಡುವುದಕ್ಕೆ ಬದ್ಧರಾಗಿದ್ದೇವೆ. ಇದಕ್ಕಾಗಿಯೇ ಹತ್ತು ಅಂಶದ ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ಇಂಥ ದುರಿತ ಕಾಲದಲ್ಲಿ ಅವರೊಂದಿಗೆ ರಿಲಯನ್ಸ್ ಫೌಂಡೇಷನ್ ಗಟ್ಟಿಯಾಗಿ ನಿಂತಿದೆ ಎಂದು ಫೌಂಡೇಷನ್ ನ ಸಂಸ್ಥಾಪಕಿ ಹಾಗೂ ಅಧ್ಯಕ್ಷೆ ನೀತಾ ಅಂಬಾನಿ ತಿಳಿಸಿದ್ದಾರೆ.

ಅಂದ ಹಾಗೆ, ರಿಲಯನ್ಸ್ ಫೌಂಡೇಷನ್ ನಿಂದ ನೀಡುತ್ತಿರುವ ಆ ಹತ್ತು ಅಂಶಗಳ ಪರಿಹಾರ ಹೀಗಿವೆ:

  1. ‌ವಿಪತ್ತನ್ನು ನಿಭಾಯಿಸುವ ಆಂಬ್ಯುಲೆನ್ಸ್‌ಗಳಿಗೆ ಜಿಯೋ-ಬ್ರಿಟಿಷ್ ಪೆಟ್ರೋಲಿಯಂ ಜಾಲದ ಮೂಲಕ ಉಚಿತ ಇಂಧನ.
  2. ರಿಲಯನ್ಸ್ ಸ್ಟೋರ್‌ಗಳ ಮೂಲಕ ಸಂತ್ರಸ್ತ ಕುಟುಂಬಗಳಿಗೆ ಮುಂದಿನ ಆರು ತಿಂಗಳವರೆಗೆ ಹಿಟ್ಟು, ಸಕ್ಕರೆ, ಬೇಳೆ, ಅಕ್ಕಿ, ಉಪ್ಪು ಮತ್ತು ಅಡುಗೆ ಎಣ್ಣೆ ಸೇರಿದಂತೆ ಉಚಿತ ಪಡಿತರ ಸರಬರಾಜು.
  3. ಗಾಯಗೊಂಡವರಿಗೆ ಅವರ ತಕ್ಷಣದ ಚೇತರಿಕೆ ಅಗತ್ಯಗಳನ್ನು ಬೆಂಬಲಿಸಲು ಉಚಿತ ಔಷಧಗಳು; ಆಸ್ಪತ್ರೆಯ ಅಗತ್ಯವಿರುವವರಿಗೆ ವೈದ್ಯಕೀಯ ಚಿಕಿತ್ಸೆ.
  4. ಭಾವನಾತ್ಮಕ ಮತ್ತು ಮಾನಸಿಕ ಬೆಂಬಲಕ್ಕಾಗಿ ಸಮಾಲೋಚನೆ ಸೇವೆಗಳು.
  5. ಅಗತ್ಯದ ಆಧಾರದ ಮೇಲೆ ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಜಿಯೋ ಮತ್ತು ರಿಲಯನ್ಸ್ ರೀಟೇಲ್ ಮೂಲಕ ಉದ್ಯೋಗಾವಕಾಶ
  6. ಗಾಲಿಕುರ್ಚಿಗಳು, ಕೃತಕ ಅಂಗಗಳು ಸೇರಿದಂತೆ ಅಂಗವೈಕಲ್ಯಕ್ಕೆ ತುತ್ತಾದವರಿಗೆ ಬೆಂಬಲ, ಸಹಾಯ
  7. ಹೊಸ ಉದ್ಯೋಗಾವಕಾಶಗಳನ್ನು ಹುಡುಕಲು ವಿಶೇಷ ಕೌಶಲ ತರಬೇತಿ
  8. ಕುಟುಂಬದಲ್ಲಿ ದುಡಿಯುತ್ತಿದ್ದ ಒಬ್ಬರೇ ಸದಸ್ಯರನ್ನು ಕಳೆದುಕೊಂಡವರಿದ್ದಲ್ಲಿ ಮಹಿಳೆಯರಿಗೆ ಕಿರುಬಂಡವಾಳ ಮತ್ತು ತರಬೇತಿ ಅವಕಾಶಗಳು
  9. ಅಪಘಾತಕ್ಕೆ ಈಡಾದ ಗ್ರಾಮೀಣ ಕುಟುಂಬಗಳಿಗೆ ಪರ್ಯಾಯ ಜೀವನೋಪಾಯಕ್ಕಾಗಿ ಹಸು, ಎಮ್ಮೆ, ಮೇಕೆ, ಕೋಳಿ ಮುಂತಾದ ಜಾನುವಾರುಗಳನ್ನು ಒದಗಿಸುವುದು
  10. ವಿಪತ್ತಿಗೆ ಗುರಿಯಾದವರ ಜೀವನೋಪಾಯ ಮತ್ತೆ ಸಾಗುವುದಕ್ಕೆ ಒಂದು ವರ್ಷದವರೆಗೆ ದುಃಖಿತರ ಕುಟುಂಬದ ಸದಸ್ಯರಿಗೆ ಉಚಿತ ಮೊಬೈಲ್ ಸಂಪರ್ಕ.

ಅಪಘಾತ ಸಂಭವಿಸಿದಾಗಿನಿಂದ ಬಾಲಸೋರ್‌ನಲ್ಲಿ ರಿಲಯನ್ಸ್ ಫೌಂಡೇಷನ್‌ನ ವಿಶೇಷ ವಿಪತ್ತು ನಿರ್ವಹಣಾ ತಂಡವು ತುರ್ತು ವಿಭಾಗ, ಕಲೆಕ್ಟರೇಟ್, ಬಾಲಸೋರ್ ಮತ್ತು ರಾಷ್ಟ್ರೀಯ ವಿಪತ್ತು ಪಡೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಪ್ರಯಾಣಿಕರಿಗೆ ಎಲ್ಲ ಬಗೆಯಲ್ಲೂ ನೆರವಾಗುತ್ತಿದೆ.

ರಕ್ಷಣಾ ಪ್ರಯತ್ನಗಳು ಅಡೆತಡೆಯಿಲ್ಲದೆ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ರಿಲಯನ್ಸ್ ಫೌಂಡೇಷನ್ ಸುಮಾರು 1,200 ಜನರಿಗೆ ಶೀಘ್ರವಾಗಿ ಆಹಾರವನ್ನು ತಯಾರಿಸಲು ಪ್ರದೇಶದ ಯುವ ಸ್ವಯಂಸೇವಕರನ್ನು ಗುರುತಿಸಿದೆ ಮತ್ತು ಜಾಲವನ್ನು ರೂಪಿಸಿದೆ. ಅಪಘಾತದ ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿಗೆ ಮತ್ತು ಇತರ ಸಿಬ್ಬಂದಿಗೆ ಅಗತ್ಯವಿರುವ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಊಟವನ್ನು ಒದಗಿಸಲಾಯಿತು. ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಟಾಪ್ ನ್ಯೂಸ್

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.