ರಿಲಯನ್ಸ್‌ನಿಂದಲೂ ವೇತನ ಕಡಿತ


Team Udayavani, May 1, 2020, 10:29 AM IST

ರಿಲಯನ್ಸ್‌ನಿಂದಲೂ ವೇತನ ಕಡಿತ

ಮುಂಬೈ: ಮಾ.25ರಿಂದ ದೇಶಾದ್ಯಂತ ಹೇರಲಾಗಿರುವ ದಿಗ್ಬಂಧನದ ಪರಿಣಾಮ ಎಲ್ಲ ಕಂಪನಿಗಳು ನಷ್ಟದ ಸುಳಿಯಲ್ಲಿವೆ. ಒಂದೊಂದೇ ಕಂಪನಿಗಳು ನೌಕರರ ವೇತನ ಕಡಿತ ಮಾಡುವ ನಿರ್ಧಾರ ಮಾಡುತ್ತಿವೆ. ಇದೀಗ ದೇಶದ ಬೃಹತ್‌ ಕಂಪನಿ, ಮುಕೇಶ್‌ ಅಂಬಾನಿ ಮಾಲಿಕತ್ವದ ರಿಲಯನ್ಸ್‌ ಕೂಡಾ, ಬಹುತೇಕ ನೌಕರರ ವೇತನ ಕಡಿತ ಮಾಡುವುದಾಗಿ ಪ್ರಕಟಿಸಿದೆ. ಕಂಪನಿಯ ಮುಖ್ಯಸ್ಥ ಮುಕೇಶ್‌ ತಮ್ಮ ಸಂಪೂರ್ಣ ವೇತನ ಬಿಟ್ಟುಕೊಡಲು ತೀರ್ಮಾನಿಸಿದ್ದಾರೆ. ಅವರಿಗೆ ಸತತ 11 ವರ್ಷದಿಂದ 15 ಕೋ.ರೂ. ಸಂಭಾವನೆ ಬರುತ್ತಿದೆ.ವಾರ್ಷಿಕವಾಗಿ 15 ಲಕ್ಷ ರೂ. ವೇತನ ಪಡೆಯುವವರಿಗೆ ರಿಲಯನ್ಸ್‌ ವೇತನ ಕಡಿತ ಮಾಡುವುದಿಲ್ಲ. ಅದಕ್ಕಿಂತ ಹೆಚ್ಚು ಸಂಭಾವನೆ ಇದ್ದವರಿಗೆ, ಶೇ.10ರಿಂದ 50ರವರೆಗೆ ಕತ್ತರಿಯಾಗಲಿದೆ. ಇನ್ನು ಕಂಪನಿಯ ನಿರ್ದೇಶಕರು, ಕಾರ್ಯಕಾರಿ ಸಮಿತಿ ಸದಸ್ಯರು, ಹಿರಿಯ ನಾಯಕರು ಶೇ.30ರಿಂದ 50ರಷ್ಟು ವೇತನ ಬಿಟ್ಟುಕೊಡಲಿದ್ದಾರೆ.

ತ್ತೈಮಾಸಿಕ ಫ‌ಲಿತಾಂಶ: ಲಾಭ ಶೇ.39ರಷ್ಟು ಕುಸಿತ 
ರಿಲಯನ್ಸ್‌ನ ಬಹು ನಿರೀಕ್ಷಿತ ಮೊದಲ ತ್ತೈಮಾಸಿಕ ಫ‌ಲಿತಾಂಶ ಪ್ರಕಟವಾಗಿದೆ. 2020ರ ಜನವರಿಯಿಂದ ಮಾರ್ಚ್‌ವರೆಗಿನ ಮೊದಲ ತ್ತೈಮಾಸಿಕ ಫ‌ಲಿತಾಂಶದಲ್ಲಿ ನಷ್ಟವೇ ಪ್ರಮುಖ ಸಂಗತಿಯಾಗಿದೆ. ತೈಲ ಬೆಲೆ ಕುಸಿದಿರುವುದರಿಂದ, ಅದರ ತೈಲ ಸಂಸ್ಕರಣ ಘಟಕಗಳು ಭಾರೀ ನಷ್ಟ ದಾಖಲಿಸಿವೆ. ನಿವ್ವಳ ಲಾಭ ಶೇ.39ರಷ್ಟು ಕುಸಿದು, 6348 ಕೋಟಿ ರೂ.ಗೆ ಮುಟ್ಟಿದೆ. ಕಳೆದವರ್ಷ ಇದೇ ಅವಧಿಯಲ್ಲಿ ಕಂಪನಿ, 10,362 ಕೋಟಿ ರೂ. ಲಾಭ ದಾಖಲಿಸಿತ್ತು. ದೂರಸಂಪರ್ಕದಿಂದ ಹಿಡಿದು ತೈಲದವರೆಗೆ ರಿಲಯನ್ಸ್‌ ಒಟ್ಟಾರೆ ಆದಾಯ, 1,39,283 ಕೋಟಿ ರೂ.ಗೆ ಇಳಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,42,565 ಕೋಟಿ ರೂ. ಆದಾಯವಿತ್ತು. ಇದೇ ವೇಳೆ ಕಂಪನಿ 53,125 ಕೋಟಿ ರೂ. ಹಣ ಸಂಗ್ರಹಿಸುವ ಮಹತ್ವದ ಯೋಜನೆಗೆ ಒಪ್ಪಿಗೆ ನೀಡಿದೆ.

ವಾರಂಟಿ ಅವಧಿ ವಿಸ್ತರಿಸಿದ ಮೊಬೈಲ್‌ ಕಂಪನಿಗಳು
ಮುಂಬೈ: ಕೋವಿಡ್ ಪರಿಣಾಮ ಗ್ರಾಹಕರು ಒತ್ತಡಕ್ಕೊಳಗಾಗಿದ್ದಾರೆ. ಅವರಿಗೆ ವಿವಿಧ ಕಂಪನಿಗಳು ಬೇರೆ ಬೇರೆ ರೀತಿಯಲ್ಲಿ ನೆರವಿಗೆ ಬರುತ್ತಿವೆ. ಈ ಪೈಕಿ ಮೊಬೈಲ್‌ ಕಂಪನಿಗಳು ಗ್ರಾಹಕರಿಗೆ ವಾರಂಟಿ ಅವಧಿಯನ್ನು ಉಚಿತವಾಗಿ ಹೆಚ್ಚಿಸಿ ಬೆಂಬಲಕ್ಕೆ ನಿಂತಿವೆ. ಮಾರ್ಚ್‌ 20ರಿಂದ ಏ.30ರ ನಡುವೆ ಯಾರ್ಯಾರ ವಾರಂಟಿ ಅವಧಿ ಮುಗಿಯುತ್ತದೋ, ಅದು ತನ್ನಷ್ಟಕ್ಕೆ ತಾನೇ ಮೇ 31ರವರೆಗೆ ವಿಸ್ತೃತಗೊಳ್ಳಲಿದೆ. ಸ್ಯಾಮ್ಸಂಗ್‌, ಎಲ್‌ಜಿ, ರಿಯಲ್‌ ಮಿ, ಒಪ್ಪೊ, ವಿವೊ, ಒನ್‌ಪ್ಲಸ್‌ನಂತಹ ಕಂಪನಿಗಳು ವಾರಂಟಿ ವಿಸ್ತರಿಸಿವೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.