ದೇಶದಲ್ಲಿ ಚಿಲ್ಲರೆ ಸಮಸ್ಯೆ ಇಲ್ಲ: ಜೇಟ್ಲಿ


Team Udayavani, Feb 17, 2017, 3:45 AM IST

PTI2_16_2017_000158B.jpg

ರಾಂಚಿ/ ನವದೆಹಲಿ: “ದೇಶದಲ್ಲಿ ಚಿಲ್ಲರೆ ಸಮಸ್ಯೆ ನೀಗಿದ್ದು, ಆರ್ಥಿಕ ವಹಿವಾಟು ಸಹಜ ಸ್ಥಿತಿಗೆ ಮರಳಿದೆ’. 500 ಹಾಗೂ 1000 ಮುಖ ಬೆಲೆಯ ನೋಟು ನಿಷೇಧಗೊಂಡು 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ದೇಶದ ಆರ್ಥಿಕತೆಯನ್ನು ಹೀಗೆ ಸಮರ್ಥಿಸಿಕೊಂಡರು.

ಜಾರ್ಖಂಡ್‌ನ‌ಲ್ಲಿ ಹೂಡಿಕೆದಾರರ ಸಮ್ಮೇಳನದಲ್ಲಿ  ಅವರು, “ಆರ್‌ಬಿಐ ಈಗ ದೈನಂದಿನ ವಹಿವಾಟಿಗೆ ಅಗತ್ಯವಿರುವಷ್ಟು ಹಣವನ್ನು ನಿಯಂತ್ರಿ ಸಲು ಶಕ್ತವಾಗಿದೆ. ದೇಶದ ಯಾವ ಎಟಿಎಂನಲ್ಲೂ ಹಣಕಾಸಿನ ಸಮಸ್ಯೆ ಎದುರಾಗಿಲ್ಲ. ಅಕಸ್ಮಾತ್‌ ಕೊರತೆ ಆಗಿದ್ದರೆ, ಗುತ್ತಿಗೆ ಏಜೆನ್ಸಿಗಳು ಅವರಿಗೆ ತಡವಾಗಿ ಹಣ ಪೂರೈಸಿರುವ ಸಾಧ್ಯತೆ ಇರುತ್ತದೆ. ಫೆ.20ರಿಂದ ಎಟಿಎಂಗಳಿಂದ 50 ಸಾವಿರದ ವರೆಗೆ ಹಣ ತೆಗೆಯಬಹುದು. ಮಾರ್ಚ್‌ 13ರ ನಂತರ ಹಣ ಪಡೆಯುವ ಮಿತಿ ಮೇಲಿನ ನಿರ್ಬಂಧವನ್ನು ತೆಗೆದುಹಾಕಲಾಗುವುದು’ ಎಂದಿದ್ದಾರೆ.

18 ತಿಂಗಳು ಬೇಕು!: ಇನ್ನೊಂದೆಡೆ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸಂದರ್ಶನವೊಂದರಲ್ಲಿ, “ನೋಟು ಅಮಾನ್ಯದಿಂದ ದೇಶದ ಆರ್ಥಿಕತೆ ಸುಧಾರಿಸಿಕೊಳ್ಳಲು ಇನ್ನೂ 18 ತಿಂಗಳು ಬೇಕು. ಈ ವರ್ಷದ ಪೂರ್ತಿ ಇದರ ಸಂಕಟದಿಂದ ಹೊರಗೆ ಬರಲು ಸಾಧ್ಯವಿಲ್ಲ. ಮುಂದಿನ ವರ್ಷ ನಾವು ಚೇತರಿಸಿಕೊಳ್ಳಬಹುದು’ ಎಂದಿ ದ್ದಾರೆ. “ಹಣವನ್ನು ಯಾರೂ ಬಚ್ಚಿಡಲಾಗದು. ಅದು ಎಲ್ಲಿಗೆ ಹೋದರೂ ಭಾರತಕ್ಕೆ ಬಂದೇ ಬರುತ್ತೆ. ನೇಪಾಳ, ಭೂತಾನ್‌ ಅಲ್ಲದೆ, ಎನ್‌ಆರ್‌ಐಗಳ ವಿದೇಶಿ ವಿನಿಮಯದ ಹಣವೂ ವಾಪಸು ಬರಬೇಕು. ಮೋದಿ ಇದನ್ನು ನೋಟು ಅಪಮೌಲ್ಯ ಎಂದರು, ಈಗ ಆರ್ಥಿಕ ಸುಧಾರಣೆ ಎನ್ನುತ್ತಿದ್ದಾರೆ’ ಎಂದರು.

9 ಲಕ್ಷ ಖಾತೆಗಳು!: ಅಪನಗದೀಕರಣದ ಬಳಿಕದ 50 ದಿನಗಳ ಅವಧಿಯಲ್ಲಿ  ಅಕ್ರಮವಾಗಿ ಹಣ ತುಂಬಿದ 9 ಲಕ್ಷ ಖಾತೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಈಗ ಹದ್ದುಗಣ್ಣಿಟ್ಟಿದೆ. ಒಟ್ಟಾರೆ 18 ಲಕ್ಷ ಖಾತೆಯನ್ನು ಐಟಿ ಪರೀಕ್ಷೆಗೊಳಪಡಿಸಿದ್ದು, ಅದರಲ್ಲಿ 9 ಲಕ್ಷ ಖಾತೆಗಳನ್ನು ಅನುಮಾನದ ಪಟ್ಟಿಗೆ ಸೇರಿಸಲಾಗಿದೆ. “ಆಪರೇಶನ್‌ ಕ್ಲೀನ್‌ ಮನಿ’ ಯೋಜನೆ ಅಡಿಯಲ್ಲಿ ಇಲಾಖೆ ಈಗಾಗಲೇ 18 ಲಕ್ಷ ಮಂದಿಗೆ ಠೇವಣಿಗೆ ಸೂಕ್ತ ದಾಖಲೆ ಸಲ್ಲಿಸುವಂತೆ ಎಸ್‌ಎಂಎಸ್‌,  ಇಮೇಲ್‌ಗ‌ಳನ್ನು ಕಳುಹಿಸಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆಗೆ ಗಡುವು ನೀಡಲಾಗಿತ್ತು. ಇದರಲ್ಲಿ ಅರ್ಧದಷ್ಟು ಮಂದಿ ಸೂಕ್ತ ಪ್ರತಿಕ್ರಿಯೆ ನೀಡದ ಕಾರಣ, ಈ ಖಾತೆಗಳನ್ನು ಅನುಮಾನದ ಪಟ್ಟಿಗೆ ಸೇರಿಸಲಾಗಿದೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.