JNU ಉಪಕುಲಪತಿ ಕುಮಾರ್ ವಜಾಗೊಳಿಸುವುದು ಸಮಸ್ಯೆಗೆ ಪರಿಹಾರವಲ್ಲ: ಎಚ್ ಆರ್ ಡಿ
ಜನವರಿ 5ರಂದು ಜೆಎನ್ ಯು ಒಳಗೆ ನಡೆದ ಹಿಂಸಾಚಾರ ಅಸಮಾಧಾನ ತಂದಿದೆ.
Team Udayavani, Jan 10, 2020, 3:00 PM IST
ನವದೆಹಲಿ: ಜವಾಹರಲಾಲ್ ನೆಹರೂ ವಿವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್ ಯು ಉಪ ಕುಲಪತಿ ಎಂ.ಜಗದೀಶ್ ಕುಮಾರ್ ಅವರನ್ನು ವಜಾಗೊಳಿಸುವುದು ಸಮಸ್ಯೆಗೆ ಪರಿಹಾರವಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ (ಎಚ್ ಆರ್ ಡಿ) ತಿಳಿಸಿದೆ.
ಜನವರಿ 5ರಂದು ಜೆಎನ್ ಯು ಒಳಗೆ ನಡೆದ ಹಿಂಸಾಚಾರ ಅಸಮಾಧಾನ ತಂದಿದೆ. ಅಲ್ಲದೇ ಎಂಎಚ್ ಆರ್ ಡಿ ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿದೆ ಎಂದು ಎಚ್ ಆರ್ ಡಿ ಕಾರ್ಯದರ್ಶಿ ಅಮಿತ್ ಖಾರೆ ತಿಳಿಸಿದ್ದಾರೆ.
ನಿಯೋಗದ ಜತೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಜೆಎನ್ ಯುನಲ್ಲಿ ನಡೆದ ಘಟನೆ ತುಂಬಾ ವಿಷಾದಕರ. ವಿದ್ಯಾರ್ಥಿಗಳು ಸಮಸ್ಯೆಯ ಪಟ್ಟಿಯನ್ನು ನೀಡಿದ್ದಾರೆ. ಉಪನ್ಯಾಸಕರು ಕೂಡಾ ಆಡಳಿತ ಮಂಡಳಿ ನಡುವೆ ಇರುವ ಸಮಸ್ಯೆ ಪಟ್ಟಿಯನ್ನು ನೀಡಿದ್ದಾರೆ. ಈ ಎಲ್ಲಾ ಸಮಸ್ಯೆಯನ್ನು ಬಗೆಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದರು.
ಈ ಹಿನ್ನೆಲೆಯಲ್ಲಿ ಶುಕ್ರವಾರ ಜವಾಹರಲಾಲ್ ನೆಹರು ಯೂನಿರ್ವಸಿಟಿಯ ಉಪಕುಲಪತಿ ಮತ್ತು ಉಪನ್ಯಾಸಕ ವರ್ಗದ ಸಭೆಯನ್ನು ಕರೆದಿರುವುದಾಗಿ ತಿಳಿಸಿದ್ದರು. ಅಷ್ಟೇ ಅಲ್ಲ ವಿದ್ಯಾರ್ಥಿಗಳ ಬೇಡಿಕೆಯನ್ನು ಆಲಿಸಲು ಅವರ ಜತೆಯೂ ಸಭೆ ನಡೆಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ