ಡಾ.ಕಲಾಂ ಪ್ರಶಸ್ತಿ ಹೆಸರು ಬದಲು, YSR ಹೆಸರಿಗೆ ಆಕ್ರೋಶ; ಕೊನೆಗೂ ಮಣಿದ ಜಗನ್
Team Udayavani, Nov 5, 2019, 5:16 PM IST
ಅಮರಾವತಿ: ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರಶಸ್ತಿಯ ಹೆಸರನ್ನು “ವೈಎಸ್ ಆರ್ ವಿದ್ಯಾ ಪುರಸ್ಕಾರ್” ಎಂದು ಬದಲಾಯಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಜಗನ್ ಸರ್ಕಾರ ಮತ್ತೆ ಕಲಾಂ ಹೆಸರನ್ನು ಮುಂದುವರಿಸುವುದಾಗಿ ತಿಳಿಸಿದೆ.
ಎಪಿಜೆ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರ್ ಹೆಸರನ್ನು ವೈಎಸ್ ಆರ್ ವಿದ್ಯಾ ಪುರಸ್ಕಾರ್ ಎಂದು ಬದಲಾಯಿಸಲಾಗಿದೆ ಎಂದು ಜಗನ್ ಸರ್ಕಾರ ಸೋಮವಾರ ಘೋಷಿಸಿತ್ತು. ನವೆಂಬರ್ 11ರ ರಾಷ್ಟ್ರೀಯ ಶೈಕ್ಷಣಿಕ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿಯನ್ನು ವಿತರಿಸಲಾಗುತ್ತಿದೆ. ನವೆಂಬರ್ 11 ಸ್ವಾತಂತ್ರ್ಯ ಹೋರಾಟಗಾರ ಮೌಲಾನ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ಜಯಂತಿಯಾಗಿದೆ.
ಸಿಎಂ ಜಗನ್ ನಿರ್ಧಾರಕ್ಕೆ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ದಾಳಿ ನಡೆಸಿದ್ದರು. ಸಾರ್ವಜನಿಕರ ಟೀಕೆಗೆ ಮಣಿದ ಮುಖ್ಯಮಂತ್ರಿ ಜಗನ್ ರೆಡ್ಡಿ, ವೈಎಸ್ ಆರ್ ವಿದ್ಯಾ ಪುರಸ್ಕಾರ್ ಆದೇಶವನ್ನು ರದ್ದುಗೊಳಿಸಿದ್ದು, ಡಾ.ಕಲಾಂ, ಮಹಾತ್ಮ ಗಾಂಧಿ ಹಾಗೂ ಬಿಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಶಸ್ತಿ ನೀಡುವುದಾಗಿ ಎಚ್ಚರಿಕೆ ನೀಡಿರುವುದಾಗಿ ಮಂಗಳವಾರ ಬೆಳಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.
ವೈಎಸ್ ಆರ್(ವೈಎಸ್ ರಾಜಶೇಖರ್ ರೆಡ್ಡಿ ಜಗನ್ ಮೋಹನ್ ರೆಡ್ಡಿಯ ತಂದೆ. ಎರಡು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ನ ಪ್ರಭಾವಿ ಮುಖಂಡರಲ್ಲಿ ವೈಎಸ್ ಆರ್ ಒಬ್ಬರಾಗಿದ್ದರು. 2009ರಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ವೈಎಸ್ ಆರ್ ವಿಧಿವಶರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್