ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ತಮಿಳು ಸಾಹಿತಿ ಕೆ.ರಾಜಾನಾರಾಯಣನ್ ವಿಧಿವಶ
ದಕ್ಷಿಣ ತಮಿಳುನಾಡಿನ ಬಿಸಿ ಮತ್ತು ಒಣ ಭೂಮಿಯಾದ "ಕರಿಸಲ್ ಭೂಮಿ"ಯ ಜನರ ಜೀವನ ಮತ್ತು ಸಂಸ್ಕೃತಿಗೆ ಹೆಸರಾಗಿದ್ದರು.
Team Udayavani, May 18, 2021, 1:23 PM IST
ಪುದುಚೇರಿ:ಖ್ಯಾತ ತಮಿಳು ಲೇಖಕ, ಕಾದಂಬರಿಕಾರ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೀರಾ ಎಂದೇ ಜನಪ್ರಿಯರಾಗಿದ್ದ ಕೆ.ರಾಜಾನಾರಾಯಣನ್ (98ವರ್ಷ) ಸೋಮವಾರ (ಮೇ 17) ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:22ರ ನಂತರ ಸ್ಥಿತಿ ನೋಡಿ ಲಾಕ್ಡೌನ್ : ಸಚಿವ ಪ್ರಹ್ಲಾದ ಜೋಶಿ
ಇಬ್ಬರು ಪುತ್ರರು, ಅಪಾರ ಹಿತೈಷಿಗಳನ್ನು ಅಗಲಿರುವ ಕೆ.ರಾಜಾನಾರಾಯಣ್ ಅವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದರು. ತಮಿಳುನಾಡು ಗವರ್ನರ್ ತಮಿಳ್ ಸಾಯಿ ಸೌಂದರ್ ರಾಜನ್ ಮಂಗಳವಾರ ಲೇಖಕರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ಗೌರವ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಕೀರಾ ಅವರು ವಾಸವಾಗಿದ್ದ ಮನೆಯನ್ನು ಸ್ಮಾರಕ ಗ್ರಂಥಾಲಯವನ್ನಾಗಿ ಪರಿವರ್ತಿಸಬೇಕು ಎಂದು ತಮಿಳು ಲೇಖಕರು ಮನವಿ ಸಲ್ಲಿಸಿರುವುದಾಗಿ ಗವರ್ನರ್ ತಮಿಳ್ ಸಾಯಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದು, ಲೇಖಕರ ಮನವಿಯನ್ನು ಪರಿಗಣಿಸುವುದಾಗಿ ಹೇಳಿದರು.
1980ರಲ್ಲಿ ರಾಜಾನಾರಾಯಣನ್ ಅವರು ಪುದುಚೇರಿ ಯೂನಿರ್ವಸಿಟಿಯಲ್ಲಿ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಇವರು ಸಣ್ಣ ಕಥೆಗಳು, ಕಾದಂಬರಿ, ಜಾನಪದ ಕಥೆಗಳು ಮತ್ತು ಪ್ರಬಂಧಗಳ ಖ್ಯಾತ ಲೇಖಕರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಗೋಪಲ್ಲಾಪುರತು ಮಕ್ಕಳ್ ಕಾದಂಬರಿಗಾಗಿ ಕೀರಾ ಅವರು 1991ರಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು. ದಕ್ಷಿಣ ತಮಿಳುನಾಡಿನ ಬಿಸಿ ಮತ್ತು ಒಣ ಭೂಮಿಯಾದ “ಕರಿಸಲ್ ಭೂಮಿ”ಯ ಜನರ ಜೀವನ ಮತ್ತು ಸಂಸ್ಕೃತಿಗೆ ಹೆಸರಾಗಿದ್ದರು.
ಹಿರಿಯ ಸಾಹಿತಿ ಕೀರಾ ಅವರ ನಿಧನಕ್ಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಕೀರಾ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಿನಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ