ವಿಶೇಷ ಭದ್ರತೆ ನಡುವೆ ಗಣರಾಜ್ಯ ಸಂಭ್ರಮ
Team Udayavani, Jan 26, 2020, 6:40 AM IST
ಹೊಸದಿಲ್ಲಿ: ದೇಶದ ರಕ್ಷಣಾ ಪಡೆಗಳ ಶಕ್ತಿ, ಸಾಮರ್ಥ್ಯಗಳ ಪ್ರದರ್ಶನ, ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯ ಅನಾವರಣಕ್ಕೆ 71ನೇ ಗಣರಾಜ್ಯೋತ್ಸವ ಸಾಕ್ಷಿಯಾಗಲಿದೆ.
ರಾಜಧಾನಿ ಹೊಸದಿಲ್ಲಿಯ ರಾಜ್ಪಥ್ನಲ್ಲಿ ಭಾರೀ ಭದ್ರತೆಯೊಂದಿಗೆ ನಡೆಯಲಿರುವ 90 ನಿಮಿಷಗಳ ಸಂಭ್ರಮದ ಕಾರ್ಯಕ್ರಮ ಕಣ್ತುಂಬಿ ಕೊಳ್ಳಲು ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪೊಲೀಸರು ಮತ್ತು ಅರೆಸೇನಾ ಪಡೆ ಯೋಧರು ಸೇರಿ 10 ಸಾವಿರ ಸಿಬ್ಬಂದಿಯ ಹದ್ದಿನ ಕಣ್ಣಿನ ಭದ್ರತೆ ಕಾರ್ಯಕ್ರಮಕ್ಕೆ ಇರಲಿದ್ದು, ಈ ಬಾರಿ ಬಾನಂಗಳಕ್ಕೂ ಭದ್ರತೆಯನ್ನು ವಿಸ್ತರಿಸಿರುವುದು ವಿಶೇಷ. ಕೆಂಪುಕೋಟೆ, ಚಾಂದಿನಿ ಚೌಕ್, ಯಮುನಾ ಖದರ್ ಭಾಗಗಳಲ್ಲಿ 150ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಉಪಗ್ರಹ ನಿಗ್ರಹ ಶಸ್ತ್ರ “ಶಕ್ತಿ’, ಭಾರತೀಯ ಸೇನೆಯ ಸಮರ ಟ್ಯಾಂಕ್ “ಭೀಷ್ಮ’, ಯುದ್ಧ ವಾಹನಗಳು ಮತ್ತು ವಾಯು ಪಡೆಗೆ ಹೊಸದಾಗಿ ಸೇರ್ಪಡೆಗೊಂಡಿರುವ “ಚಿನೂಕ್’ ಮತ್ತು “ಅಪಾಚೆ’ ಹೆಲಿಕಾಪ್ಟರ್ಗಳು ಈ ಬಾರಿಯ ಮಿಲಿಟರಿ ಪರೇಡ್ನ ಪ್ರಮುಖ ಆಕರ್ಷಣೆಗಳಾಗಿವೆ.
16 ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಆರು ಸಚಿವಾಲಯ ಗಳು ಮತ್ತು ಇಲಾಖೆಗಳು ರೂಪಿಸಿರುವ ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಅನಾವರಣಗೊಳ್ಳ ಲಿದೆ. ಇದೇ ವೇಳೆ ಕರ್ನಾಟಕದ 7 ವಿದ್ಯಾರ್ಥಿಗಳು ಸೇರಿದಂತೆ ಸಿಬಿಎಸ್ಇ ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ಅಗ್ರ ಶ್ರೇಯಾಂಕ ಪಡೆದ ದೇಶದ ವಿವಿಧ ರಾಜ್ಯಗಳ 105 ಮಂದಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಕುಳಿತು ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…