Kerala ರಾಜ್ಯದ ಹೆಸರು ಬದಲಾಯಿಸಿ; ವಿಧಾನಸಭೆಯಲ್ಲಿ ಕೇಂದ್ರಕ್ಕೆ ಒತ್ತಾಯ
ನಿರ್ಣಯ ಸರ್ವಾನುಮತದಿಂದ ಅಂಗೀಕಾರ
Team Udayavani, Aug 9, 2023, 4:33 PM IST
ತಿರುವನಂತಪುರಂ: ಭಾರತೀಯ ಸಂವಿಧಾನದ ಎಂಟನೇ ಶೆಡ್ಯೂಲ್ ಮತ್ತು ಎಲ್ಲಾ ಅಧಿಕೃತ ದಾಖಲೆಗಳಲ್ಲಿ ರಾಜ್ಯವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡಲು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರತಿಪಕ್ಷಗಳು ಇದಕ್ಕೆ ಯಾವುದೇ ತಿದ್ದುಪಡಿ ಅಥವಾ ಮಾರ್ಪಾಡುಗಳನ್ನು ಸೂಚಿಸದ ಕಾರಣ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು.
ಮಲಯಾಳಂ ಭಾಷೆಯಲ್ಲಿ ರಾಜ್ಯದ ಹೆಸರು “ಕೇರಳಂ” ಎಂದು ಮುಖ್ಯಮಂತ್ರಿ ಹೇಳಿದರು. “1956ರ ನವೆಂಬರ್ 1 ರಂದು ಭಾಷೆಯ ಆಧಾರದ ಮೇಲೆ ರಾಜ್ಯಗಳನ್ನು ರಚಿಸಲಾಯಿತು. ಮಲಯಾಳಂ ಮಾತನಾಡುವ ಸಮುದಾಯಗಳಿಗೆ ಅಖಂಡ ಕೇರಳವನ್ನು ರಚಿಸುವ ಅಗತ್ಯವು ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದ ಕಾಲದಿಂದಲೂ ಬಲವಾಗಿ ಹೊರಹೊಮ್ಮುತ್ತಿದೆ. ಆದರೆ ನಮ್ಮ ರಾಜ್ಯದ ಹೆಸರನ್ನು ಸಂವಿಧಾನದ ಮೊದಲ ಶೆಡ್ಯೂಲ್ ನಲ್ಲೂ ಕೇರಳ ಎಂದು ಬರೆಯಲಾಗಿದೆ” ಎಂದರು.
ಸ್ಪೀಕರ್ ಎಎನ್ ಶಂಸೀರ್ ಅವರು ಶಾಸಕರು ಕೈ ಎತ್ತಿದ ಆಧಾರದ ಮೇಲೆ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ