ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್ ಸಲಹೆ
Team Udayavani, May 9, 2024, 12:08 AM IST
ಹೊಸದಿಲ್ಲಿ: ಪರಸ್ಪರ ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಸುಪ್ರೀಂಕೋರ್ಟ್ಸೂಚಿಸಿದೆ.
ನಿಮ್ಮಬ್ಬಿರ ನಡುವಿನ ಜಗಳ ಹೀಗೆಯೇ ಮುಂದುವರಿದರೆ ನಿಮ್ಮ ವೃತ್ತಿ ಮೇಲೆ ದುಷ್ಪರಿಣಾಮ ಬೀರಲಿದೆ. ಸಾರ್ವಜನಿಕ ಜೀವನದಲ್ಲಿರುವ ನೀವು ಇಂಥ ನಡವಳಿಕೆ ಮುಂದುವರಿಸಬಾರದು ಎಂದು ನ್ಯಾ| ಅಭಯ್ ಎಸ್. ಓಕಾ ಹಾಗೂ ಪಂಕಜ್ ಮಿತ್ತಲ್ ಅವರಿದ್ದ ಪೀಠವು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿಪಡಿಸಿತು.
ಒಂದು ವೇಳೆ ಇಬ್ಬರೂ ತಮ್ಮ ಆರೋಪ ಪ್ರತ್ಯಾರೋಪಗಳನ್ನು ಕೈಬಿಡಲು ಮುಂದಾದರೆ, ಇಲಾಖಾ ಕ್ರಮ ಕೈಗೊಳ್ಳದಂತೆ ರಾಜ್ಯಕ್ಕೆ ಸೂಚಿಸುವುದಾಗಿ ಸುಪ್ರೀಂಕೋರ್ಟ್ ವಿಚಾರಣೆ ವೇಳೆ ತಿಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ