ಕ್ವಾರಂಟೈನ್ ವಿವಾದ ಬಗೆಹರಿಸದಿದ್ದರೆ ಕಠಿನ ಕ್ರಮ
Team Udayavani, Sep 22, 2021, 7:30 AM IST
ಲಂಡನ್/ಹೊಸದಿಲ್ಲಿ: ಕೊರೊನಾ ಲಸಿಕೆ ಕೊವಿಶೀಲ್ಡ್ಗೆ ಮಾನ್ಯತೆ ನೀಡದೆ ಇರುವ ಬ್ರಿಟಿಶ್ ಸರಕಾರದ ಕ್ರಮಕ್ಕೆ ಭಾರತ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದೆ.
ಇದೊಂದು ತಾರತಮ್ಯ ಧೋರಣೆ ಮತ್ತು ಶೀಘ್ರದಲ್ಲಿಯೇ ಇದಕ್ಕೆ ಪರಿಹಾರ ಕ್ರಮ ಸೂಚಿಸದೆ ಇದ್ದರೆ ಸೂಕ್ತ ಪ್ರತ್ಯುತ್ತರದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ಹೊಸದಿಲ್ಲಿಯಲ್ಲಿ ಮಂಗಳವಾರ ಮಾತ ನಾಡಿದ ಶೃಂಗ್ಲಾ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಬ್ರಿಟನಿನ ವಿದೇಶಾಂಗ ಸಚಿವೆ ಲಿಜ್ ಟ್ರಸ್ ಜತೆಗೆ ಈ ಅಂಶ ಚರ್ಚೆ ನಡೆಸಿ ದ್ದಾರೆ. ಟ್ರಸ್ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದಿದ್ದಾರೆ.
ಅ. 4ರ ಬಳಿಕ ಭಾರತ ಸಹಿತ ಏಳು ರಾಷ್ಟ್ರಗಳಲ್ಲಿ ನಿಗದಿತ ಡೋಸ್ ಲಸಿಕೆ ಪಡೆದರೂ ಬ್ರಿಟನ್ಗೆ ಆಗಮಿಸಿದರೆ ಹತ್ತು ದಿನ ಕ್ವಾರಂಟೈನ್ನಲ್ಲಿ ಇರಬೇಕು, ಕೊರೊನಾ ಪರೀಕ್ಷೆಗೆ ಒಳಗಾಗಬೇಕು ಎಂದು ಬ್ರಿಟನ್ ಸರಕಾರ ಆದೇಶ ನೀಡಿತ್ತು.
ಅಮೆರಿಕ ಅನುಮತಿ
ನಿಗದಿತ ಡೋಸ್ ಕೊರೊನಾ ಲಸಿಕೆ ಪಡೆ ದವರು ಮತ್ತು ನೆಗೆಟಿವ್ ಸರ್ಟಿಫಿಕೆಟ್ ಇದ್ದವರು ಅಮೆರಿಕ ಪ್ರವಾಸ ಕೈಗೊಳ್ಳ ಬಹುದು. ನವೆಂಬರ್ ಬಳಿಕ ಈ ನಿಯಮ ಅನ್ವಯ ವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ