ನಾಯಕರಿಗೆ ಜಿಲ್ಲೆಗಳ ಹೊಣೆ; ಗುಜರಾತ್‌ನಲ್ಲಿ ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಕಾರ್ಯತಂತ್ರ


Team Udayavani, Oct 17, 2022, 7:05 AM IST

ನಾಯಕರಿಗೆ ಜಿಲ್ಲೆಗಳ ಹೊಣೆ; ಗುಜರಾತ್‌ನಲ್ಲಿ ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಕಾರ್ಯತಂತ್ರ

ಹೊಸದಿಲ್ಲಿ: ಸದ್ಯದಲ್ಲೇ ವಿಧಾನಸಭೆ ಚುನಾವಣೆ­ಗಳನ್ನು ಎದುರಿಸಲಿರುವ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ದಿನೇ ದಿನೆ ರಾಜಕೀಯ ಕಾವೇರುತ್ತಿದೆ. ಎಲ್ಲ ರಾಜಕೀಯ ಪಕ್ಷಗಳೂ ತಮ್ಮದೇ ಆದ ರೀತಿಯಲ್ಲಿ ವಿವಿಧ ಕಾರ್ಯ­ತಂತ್ರಗಳನ್ನು ರೂಪಿಸುತ್ತಾ ಮತದಾರರನ್ನು ಆಕರ್ಷಿ ಸಲು ಯತ್ನಿಸುತ್ತಿವೆ.

ಗುಜರಾತ್‌ನಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಪಣತೊಟ್ಟಿರುವ ಬಿಜೆಪಿ, “ಮೈಕ್ರೋ -ಮ್ಯಾನೇಜ್‌ಮೆಂಟ್‌’ನ ಮೊರೆ ಹೋಗಿದೆ. ಅಂದರೆ, ಇತರ ಬೇರೆ ಬೇರೆ ರಾಜ್ಯಗಳ ನಾಯಕರು, ರಾಷ್ಟ್ರೀಯ ಪದಾಧಿಕಾರಿಗಳು, ಅನುಭವಿಗಳನ್ನು ಗುಜ­ರಾತ್‌ಗೆ ಕರೆಸಿಕೊಂಡು, ಒಬ್ಬೊಬ್ಬರಿಗೆ ಒಂದೊಂದು ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗುತ್ತಿದೆ.

ಕಾಂಗ್ರೆಸ್‌ ಗಂಭೀರವಾಗಬೇಕು: ಇದೇ ವೇಳೆ, ಗುಜ­ರಾತ್‌ನಲ್ಲಿ ಬಿಜೆಪಿ ವಿರೋಧಿ ವಾತಾವರಣವಿದ್ದು, ಅದನ್ನು ಕಾಂಗ್ರೆಸ್‌ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಾಜಿ ಸಿಎಂ, ಕಾಂಗ್ರೆಸ್‌ ನಾಯಕ ಶಂಕರ್‌ಸಿನ್ಹ ವಘೇಲಾ ರವಿವಾರ ಹೇಳಿದ್ದಾರೆ.

ಇಂಥ ಸ್ಥಿತಿಯಲ್ಲಿ ಕಾಂಗ್ರೆಸ್‌ ನಾಯಕತ್ವವು ಆಸಕ್ತಿ ತೋರ­ಬೇಕು. ಒಬ್ಬ ಕಿರಿಯ ನಾಯಕನನ್ನು(ರಘು ಶರ್ಮಾ) ಗುಜರಾತ್‌ ಉಸ್ತುವಾರಿಯನ್ನಾಗಿ ನೇಮಕ ಮಾಡಲಾ­ಗಿದೆ. ಪಕ್ಷದಲ್ಲಿ ಹಿರಿಯ ನಾಯಕರಿಲ್ಲವೇ? ಪ್ರಧಾನಿ ಮೋದಿ ಅವರು ರಾಜ್ಯಕ್ಕೆ 10 ಬಾರಿ ಭೇಟಿ ನೀಡಿದರೆ, ರಾಹುಲ್‌ ಗಾಂಧಿ ಕನಿಷ್ಠ 2 ಬಾರಿಯಾದರೂ ಭೇಟಿ ನೀಡಬೇಕಲ್ಲವೇ ಎಂದೂ ಅವರು ಪ್ರಶ್ನಿಸಿದ್ದಾರೆ.

ಆಪ್‌ನಿಂದ 5ನೇ ಪಟ್ಟಿ ಬಿಡುಗಡೆ: ಗುಜರಾತ್‌ ಅಸೆಂಬ್ಲಿ ಚುನಾವಣೆಗೆ 12 ಅಭ್ಯರ್ಥಿಗಳ 5ನೇ ಪಟ್ಟಿ ಯನ್ನು ಆಮ್‌ ಆದ್ಮಿ ಪಕ್ಷ ರವಿವಾರ ಬಿಡುಗಡೆ ಮಾಡಿದೆ. ಈ ಮೂಲಕ 182 ಅಸೆಂಬ್ಲಿ ಕ್ಷೇತ್ರಗಳ ಪೈಕಿ ಈವರೆಗೆ 53 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಆಪ್‌ ಬಹಿರಂಗಪಡಿಸಿದಂತಾಗಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ವಿಪಕ್ಷ ಕಾಂಗ್ರೆಸ್‌ ಈವರೆಗೆ ಯಾವುದೇ ಪಟ್ಟಿ ಬಿಡುಗಡೆ ಮಾಡಿಲ್ಲ.

ಬಿಜೆಪಿ ಎಲ್ಲ ದಾಖಲೆ ಮುರಿಯಲಿದೆ!: ಗುಜರಾತ್‌ನಲ್ಲಿ ಈಗ ಬಿಜೆಪಿ ಪರ ದೊಡ್ಡಮಟ್ಟದ ಅಲೆ ಎದ್ದಿದೆ. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಬಿಜೆಪಿಯು ಹಿಂದಿನ ಎಲ್ಲ ದಾಖಲೆಗಳನ್ನೂ ಮುರಿದು, ಹೊಸ ಇತಿಹಾಸ ಸೃಷ್ಟಿಸಲಿದೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜತೆಗೆ, 2024ರ ಲೋಕಸಭೆ ಚುನಾವಣೆಯಲ್ಲೂ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದೂ ಅವರು ಹೇಳಿದ್ದಾರೆ. ಗುಜರಾತ್‌ನ ವಲ್ಸಾದ್‌ ಜಿಲ್ಲೆಯಲ್ಲಿ ಗೌರವ್‌ ಯಾತ್ರೆಯಲ್ಲಿ ಭಾಷಣ ಮಾಡಿ ಕಾಂಗ್ರೆಸ್‌ ಹಾಗೂ ಆಪ್‌ ವಿರುದ್ಧ ವಾಗ್ಧಾಳಿ ನಡೆಸಿದ ಠಾಕೂರ್‌, “ಹಿಂದೆಲ್ಲ ಇಟಲಿಯ ಮಹಿಳೆಯು ಪ್ರಧಾನಿ ಮೋದಿಯವರನ್ನು ಅವಮಾನಿ ಸುತ್ತಿದ್ದರು. ಈಗ ಒಬ್ಬ ಇಟಾಲಿಯಾ(ಆಪ್‌ ನಾಯಕ) ಮೋದಿಯವರ ತಾಯಿಗೆ ಅವಮಾನ ಮಾಡು ತ್ತಿದ್ದಾರೆ’ ಎಂದೂ ಕಿಡಿಕಾರಿದ್ದಾರೆ.

ಸಿ.ಟಿ.ರವಿ ಅವರಿಗೂ ಜವಾಬ್ದಾರಿ
ನೆರೆಯ ರಾಜಸ್ಥಾನ, ಮಧ್ಯಪ್ರದೇಶ ಮಾತ್ರವಲ್ಲದೇ, ಉತ್ತರಪ್ರದೇಶದಂಥ ರಾಜ್ಯಗಳ ನಾಯಕರಿಗೂ ಪ್ರಚಾರದ ಹೊಣೆಯನ್ನು ಬಿಜೆಪಿ ವಹಿಸಿದೆ. ಈ ನಾಯಕರು ತಮಗೆ ನೀಡಿದ ಜಿಲ್ಲೆ ಗಳಲ್ಲಿ ಮತದಾರರ ಮನಸ್ಥಿತಿ, ಸ್ಥಳೀಯ ಅಭಿಪ್ರಾಯಗಳನ್ನು ಸಂಗ್ರಹಿಸಿ ಕೇಂದ್ರ ನಾಯಕತ್ವಕ್ಕೆ ವರದಿ ನೀಡುತ್ತಾರೆ. ಬಿಜೆಪಿ ರಾ. ಪ್ರಧಾನ ಕಾರ್ಯದರ್ಶಿ ವಿನೋದ್‌ ತಾಬ್ಡೆ ಅವರಿಗೆ ವಡೋದರಾ ಮತ್ತು ಛೋಟಾ ಉದಯಪುರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಅದೇ ರೀತಿ, ಮತ್ತೊಬ್ಬ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ನಾಯಕ ಸಿ.ಟಿ. ರವಿ ಅವರಿಗೆ ಆನಂದ್‌ ಜಿಲ್ಲೆಯ ಉಸ್ತುವಾರಿ ಕೊಡಲಾಗಿದೆ. ಈ ಹಿಂದೆ ಗುಜರಾತ್‌ನಲ್ಲಿ ಮಾಧವ ಸಿನ್ಹಾ ಸೋಲಂಕಿ ನೇತೃತ್ವದಲ್ಲಿ 149 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ದಾಖಲೆಯನ್ನು ಮುರಿದು, ಹೊಸ ದಾಖಲೆ ನಿರ್ಮಿಸಲು ಬಿಜೆಪಿ ಪಣತೊಟ್ಟಿದೆ.

 

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.