ಗೋವಾದಲ್ಲಿ ಗಣಿ ಉತ್ಖನನಕ್ಕೆ ನಿರ್ಬಂಧ;ಕಂಪನಿಗಳಿಗೆ ಭಾರಿ ಹೊಡೆತ
Team Udayavani, May 5, 2022, 7:24 PM IST
ಪಣಜಿ: ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶದ ಅನುಸಾರ ಗೋವಾ ರಾಜ್ಯದಲ್ಲಿ ಗಣಿ ಉತ್ಖನನಕ್ಕೆ ನಿರ್ಬಂಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಇದೀಗ ಗೋವಾ ಸರ್ಕಾರ ನಿರ್ಧಾರ ಕೈಗೊಂಡಿದ್ದು ಜೂನ್ 7 ರ ಒಳಗೆ ಗಣಿಗಳ ಮಾಲೀಕತ್ವ ಬಿಟ್ಟುಕೊಡುವಂತೆ ಆದೇಶಿಸಲಾಗಿದೆ.
ಗೋವಾ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಗಣಿಗಳಿಂದ ಅದಿರು ಉತ್ಖನನ ಸಂಪೂರ್ಣ ಬಂದ್ ಆಗಿದೆ. ಈ ವಿಷಯದಲ್ಲಿ ಸದ್ಯ ರಾಜ್ಯದಲ್ಲಿ ರಾಜಕೀಯವಲಯದಲ್ಲಿ ಆರೋಪ ಪ್ರತ್ಯಾರೋಪ ಕೇಳಿಬರುತ್ತಿದೆ. ಈ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸಿದ್ದು ಗೋವಾದಲ್ಲಿನ ಗಣಿ ಮಾಲೀಕರಿಗೆ ಗಣಿಗಳ ಮಾಲೀಕತ್ವವನ್ನು ಬಿಟ್ಟುಕೊಡುವಂತೆ ಆದೇಶ ನೀಡಿದೆ.
ಮಯೆಮ್ ನಿಂದ ಅದಿರು ಸಾಗಾಟಕ್ಕೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠ ನಿರ್ಬಂಧ ಹೇರಿದೆ. ಮುಂಬಯಿ ಹೈಕೋರ್ಟ್ ನ ಗೋವಾ ಪೀಠವು ಮಯೆಮ್ ಗ್ರಾಮದಿಂದ ಅಕ್ರಮ ಅದಿರು ಸಾಗಿಸುವುದನ್ನು ತಡೆಯಲು ಮಧ್ಯಂತರ ಆದೇಶವನ್ನು ಹೊರಡಿಸಿದೆ. ಮಯೆಮ್ ಗ್ರಾಮದಿಂದ ಅದಿರು ಸಾಗಾಟ ಸ್ಥಗಿತಗೊಂಡಿರುವುದರಿಂದ ಗಣಿ ಕಂಪನಿಗಳಿಗೆ ಇದೀಗ ಭಾರಿ ಹೊಡೆತ ಬಿದ್ದಂತಾಗಿದೆ. ಈ ಖನಿಜ ಟ್ರಕ್ಗಳ ಮೇಲ್ವಿಚಾರಣೆ ಮಾಡಲು ಗ್ರಾಮದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕಾರ್ಯವಿಧಾನವನ್ನು ಸ್ಥಾಪಿಸುವ ವರೆಗೆ ಆದೇಶ ಜಾರಿಯಲ್ಲಿರುತ್ತದೆ ಎಂದು ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ