Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ
Team Udayavani, Dec 5, 2023, 6:53 PM IST
ಹೊಸದಿಲ್ಲಿ: ಮೊದಲ ಬಾರಿಗೆ ತೆಲಂಗಾಣ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷವು ಇದೀಗ ನೂತನ ಮುಖ್ಯಮಂತ್ರಿಯ ನೇಮಕ ಮಾಡಿದೆ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಹೊಸದಿಲ್ಲಿಯಲ್ಲಿ ನಡೆದ ಹೈಕಮಾಂಡ್ ಸಭೆಯ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ತೆಲಂಗಾಣ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ರೇವಂತ್ ರೆಡ್ಡಿ ಅಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.
ಡಿಸೆಂಬರ್ 7 ರಂದು ತೆಲಂಗಾಣ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾರ್ಕ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಹುದು ಅಥವಾ ಉತ್ತಮ ಖಾತೆಗೆ ಅವಕಾಶ ಕಲ್ಪಿಸಬಹುದು. ರಾಜ್ಯದಲ್ಲಿ ರೊಟೇಶನ್ ಸಿಎಂ ಸೂತ್ರ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
#WATCH | Congress General Secretary KC Venugopal says, “Congress President has decided to go with Revanth Reddy as the new CLP of Telangana Legislative Party.”
Swearing-in ceremony of new Telangana CM to be held on December 7. pic.twitter.com/4bkAGMjTmg
— ANI (@ANI) December 5, 2023
ಅನುಭವಿ ರಾಜಕಾರಣಿ ಮತ್ತು ಮಲ್ಕಾಜ್ಗಿರಿಯ ಲೋಕಸಭಾ ಸಂಸದ, ರೇವಂತ್ ರೆಡ್ಡಿ ತೆಲಂಗಾಣ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. 2017 ರಲ್ಲಿ ತೆಲುಗು ದೇಶಂ ಪಕ್ಷದಿಂದ (ಟಿಡಿಪಿ) ಕಾಂಗ್ರೆಸ್ಗೆ ಬಂದ ರೇವಂತ್ ರೆಡ್ಡಿ ಬಳಿಕ ರಾಜ್ಯದ ಪ್ರಮುಖ ರಾಜಕಾರಣಿಯಾಗಿ ಬೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ