ಬಿಜೆಪಿ ಅಧಿಕಾರಕ್ಕೆ ಬಂದರೆ ಕೇರಳದ ಮುಖ್ಯಮಂತ್ರಿಯಾಗಲು ಸಿದ್ಧ : ‘ಮೆಟ್ರೋ ಮ್ಯಾನ್’ ಶ್ರೀಧರನ್
ಕೇರಳದ ಜನರು ಸರ್ಕಾರದ ಭ್ರಷ್ಟಾಚಾರ, ಹಗರಣ, ಸ್ವಜನಪಕ್ಷಪಾತದ ಧೊರಣೆಯಿಂದ ಬೇಸತ್ತು ಹೋಗಿದ್ದಾರೆ : ಶ್ರೀಧರನ್
Team Udayavani, Mar 1, 2021, 1:39 PM IST
ನವ ದೆಹಲಿ : ಮೆಟ್ರೋ ಮ್ಯಾನ್ ಎಂದು ಗುರುತಿಸಲ್ಪಡುವ ಎಲಟ್ಟುವಲಪಿಲ್ ಶ್ರೀಧರನ್ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡಿರುವ ಬಗ್ಗೆ ನಿಜವಾದ ಕಾರಣವನ್ನು ಹೇಳಿಕೊಂಡಿದ್ದಾರೆ.
ಕಳೆದ ಗುರುವಾರ(ಫೆ.25)ದಂದು ಅವರು ಅಧಿಕೃತವಾಗಿ ಮಲಪುರಂ ನಲ್ಲಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಅದಿತಿ ತ್ಯಾಗಿ ಅವರೊಂದಿಗೆ ನಡೆಸಿದ ಸಂಭಾಷಣೆಯಲ್ಲಿ ಮೆಟ್ರೋ ಮ್ಯಾನ್ ತಾವು ಬಿಜೆಪಿಗೆ ಸೇರುವುದರ ಹಿನ್ನಲೆಯ ಬಗ್ಗೆ ವಿವರಿಸಿದ್ದಾರೆ. ಕೇರಳದ ಜನರು ಸರ್ಕಾರದ ಭ್ರಷ್ಟಾಚಾರ, ಹಗರಣ, ಸ್ವಜನಪಕ್ಷಪಾತದ ಧೊರಣೆಯಿಂದ ಬೇಸತ್ತು ಹೋಗಿದ್ದಾರೆ. ಇವೆಲ್ಲವುಗಳಿಂದ ರಾಜ್ಯವನ್ನು ಬಿಜೆಪಿ ತೊಡೆದು ಹಾಕಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಓದಿ : ‘ಹೀರೋ’ ಶೂಟಿಂಗ್ ವೇಳೆ ಅವಘಡ…ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಭ್ ಶೆಟ್ಟಿಗೆ ಗಾಯ
ಕಳೆದ ಎರಡು ದಶಕಗಳಿಂದ ಕೇರಳ ಎರಡು ಪಕ್ಷಗಳ ಆಡಳಿತವನ್ನು ಕಂಡಿದೆ. ಒಂದು ಲೆಫ್ಟ್ ಡೆಮೊಕ್ರೆಟಿಕ್ ಫ್ರಂಟ್ (ಎಲ್ ಡಿ ಎಫ್) ಹಾಗೂ ಇನ್ನೊಂದು ಯೂನೈಟೆಡ್ ಡೆಮಾಕ್ರೆಟಿಕ್ ಫ್ರಂಟ್ . ಒಂದ ಸಿಪಿಐ ಅಡಿಯಲ್ಲಿ ಇನ್ನೊಂದು ಕಾಂಗ್ರೆಸ್ ನ ಅಡಿಯಲ್ಲಿದೆ. ಈ ಎರಡು ಪಕ್ಷಗಳ ಆಡಳಿತದಲ್ಲಿ ಕೇರಳ ಮುಖ್ಯವಾಗಿ ಕಾಣಲೇಬೇಕಾದ ಅಭಿವೃದ್ಧಿಯನ್ನು ಹೊಂದಿದೆ ಎಂದು ಭಾವಿಸುವುದಿಲ್ಲ. ಕೈಗಾರಿಕೋದ್ಯಮಗಳ ಕ್ಷೇತ್ರದಲ್ಲಿ ಅಭಿವೃದ್ದಿ ಬಹಳ ಕಡಿಮೆಯಾಗಿದೆ. ಕೇರಳದ ಜನರು ಭ್ರಷ್ಟಾಚಾರ, ಹಗರಣ, ಸ್ವಜನಪಕ್ಷಪಾತಗಳಿಂದ ಬೇಸತ್ತು ಹೋಗಿದ್ದಾರೆ. ಬಿಜೆಪಿ ಇವುಗಳಿಂದ ಕೇರಳವನ್ನು ಮುಕ್ತಗೊಳಿಸಲಿದೆ ಎಂದು ಶ್ರೀಧರನ್ ಅಭಿಪ್ರಾಯ ಪಟ್ಟಿದ್ದಾರೆ.
ಶ್ರೀದರನ್ ತಮ್ಮ ಕೆಲಸಕ್ಕಾಗಿ ಇಡೀ ಭಾರತದಲ್ಲಿಯೇ ಖ್ಯಾತಿ ಗಳಿಸಿದವರು. ರಾಜಕೀಯ ಪ್ರಮುಖ ನಾಯಕರಿಂದಲೂ ಕೂಡ ಗೌರವವನ್ನು ಅವರು ಪಡೆದಿದ್ದಾರೆ.
ಓದಿ : ರೈತ ವಿರೋಧಿ ಕಾಯ್ದೆ ಖಂಡಿಸಿ ಮಾ. 5ರಿಂದ ಬಸವ ಕಲ್ಯಾಣದಿಂದ ಬಳ್ಳಾರಿ ಪಾದಯಾತ್ರೆ
ದೆಹಲಿ ಮೆಟ್ರೋ ರೈಲ್ ಕಾರ್ಪೋರೇಷನ್ ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದಾಗ ಸಾರಿಗೆ ವ್ಯವಸ್ಥೆಯಲ್ಲಿ ಅವರ ನಾಯಕತ್ವದಲ್ಲಿ ತಂದ ಅಪಾರವಾದ ಬದಲಾವಣೆಗೆ ಅವರು ಭಾರತದಲ್ಲಿ ಖ್ಯಾತಿಗಳಿಸಿದ್ದಾರೆ. ಕೊಂಕಣ ರೈಲ್ವೆ ಹಾಗೂ ಮೆಟ್ರೋ ರೈಲುಗಳನ್ನು ಅನುಷ್ಠಾನಕ್ಕೆ ತರುವುದರ ಮೂಲಕ ಭಾರತೀಯ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮುಖವನ್ನೇ ಬದಲಾಯಿಸಿದ ಕೀರ್ತಿ ಶ್ರೀಧರನ್ ಅವರಿಗೆ ಸಲ್ಲುತ್ತದೆ. ತದನಂತರದ ದಿನಗಳಲ್ಲಿ ಅನೇಕ ಮೆಟ್ರೋ ನಗರಗಳಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಅನುಷ್ಟಾನಗೊಳಿಸಿದರು.
ಕೇರಳ ವಿಧಾನ ಸಭಾ ಚುನಾವಣೆಗೆ ಕೆಲವು ವಾರಗಳು ಇರುವ ಮುನ್ನ ಮಾಜಿ ದೆಹಲಿ ಮೆಟ್ರೋ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀಧರನ್ ಫೆ. 18 ರಂದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು. ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಚುನಾವಣಾ ಪ್ರಚಾರ ಸಭೆ “ವಿಜಯ ಯಾತ್ರಾ”ದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
“ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ. ಪಕ್ಷ ಇದುವರೆಗೆ ನನ್ನನ್ನು ಆ ಬಗ್ಗೆ ಕೇಳಿಲ್ಲ. ಕೇಳುವುದಕ್ಕೆ ಇದು ಸೂಕ್ತವಾದ ಕಾಲವೂ ಅಲ್ಲ. ಆದರೇ, ಪಕ್ಷ ನನ್ನನ್ನು ಕೇಳಿದರೆ, ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ. ಒಂದು ರಾಜ್ಯದ ಅಧಿಕಾರ ಹೇಗೆ ನಡೆಸಬೇಕು ಎನ್ನುವುದನ್ನು ತೋರಿಸಿಕೊಡುತ್ತೇನೆ” ಎಂದು ಶ್ರೀಧರನ್ ಎಎನ್ಐ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.
ಕೇರಳದ ವಿಧಾನ ಸಭಾ ಚುನಾವಣೆ ಬರುವ ಎಪ್ರಿಲ್ 6 ರಂದು ನಡೆಯಲಿದೆ. ಮತ ಎಣಿಕೆಯು ಮೇ 2 ರಂದು ನಡೆಯಲಿಕ್ಕಿದೆ.
ಭಾರತೀಯ ಚುನಾವಣಾ ಆಯೋಗ ಇತ್ತೀಚೆಗಷ್ಟೇ ವಿಧಾನ ಸಭಾ ಚುನಾವಣೆಯನ್ನು ಎದುರಿಸುತ್ತಿರುವ ನಾಲ್ಕು ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಪುದುಚೆರಿಗೆ ಚುನಾವಣಾ ದಿನಾಂಕವನ್ನು ನಿಗದಿ ಮಾಡಿದೆ.
ಓದಿ : ಕೋವಿಡ್ 19-ಲಸಿಕೆ ಪಡೆದ ನಂತರ ಪ್ರಧಾನಿ ಮೋದಿ… ಸಿಸ್ಟರ್ ನಿವೇದಾಗೆ ಹೇಳಿದ್ದೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ