ರೈತರ ಪ್ರತಿಭಟನೆ: ಗ್ರೆಟಾಗೆ ಟೂಲ್ ಕಿಟ್ ರಚಿಸಿ ಸಂಚು ರೂಪಿಸಿದ್ದು ಯಾರು?ಹೆಸರು ಬಹಿರಂಗ

ದೊಡ್ಡ ಮಟ್ಟದ ಸಂಚು ಇದಾಗಿತ್ತು ಎಂಬುದಕ್ಕೆ ಟೂಲ್ ಕಿಟ್ ಪುರಾವೆ ಒದಗಿಸಿದಂತಾಗಿದೆ

Team Udayavani, Feb 5, 2021, 3:05 PM IST

ರೈತರ ಪ್ರತಿಭಟನೆ: ಗ್ರೆಟಾಗೆ ಟೂಟ್ ಕಿಟ್ ರಚಿಸಿ ಸಂಚು ರೂಪಿಸಿದ್ದು ಯಾರು?ಹೆಸರು ಬಹಿರಂಗ

ನವದೆಹಲಿ: ಭಾರತದ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದ ಸ್ವೀಡನ್ ಹೋರಾಟಗಾರ್ತಿ ಗ್ರೆಟಾ ಥನ್ ಬರ್ಗ್ ವಿವಾದಿತ ಟ್ವೀಟ್ ಮತ್ತು ಟೂಲ್ ಕಿಟ್ ಬಗ್ಗೆ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ ಬೆನ್ನಲ್ಲೇ ಗ್ರೆಟಾಗೆ ಟೂಲ್ ಕಿಟ್ ಅನ್ನು ರಚಿಸಿಕೊಟ್ಟ ವ್ಯಕ್ತಿ ಯಾರು ಎಂಬುದನ್ನು ಗುರುತಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಉಪ್ಪಿನಂಗಡಿ: ಸಿಮೆಂಟ್ ಮಿಕ್ಸರ್ ವಾಹನ- ಬೈಕ್ ನಡುವೆ ಅಪಘಾತ, ಮಹಿಳೆ ಸಾವು

ಯಾರೀತ ಎಂ ಒ ಧಾಲಿವಾಲ್?

ಮೂಲಗಳ ಪ್ರಕಾರ, ಪೀಸ್ ಫಾರ್ ಜಸ್ಟೀಸ್ ಸಂಘಟನೆಯನ್ನು ಸ್ಥಾಪಿಸಿದ್ದ ಎಂ ಒ ಧಾಲಿವಾಲ್ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಗ್ರೆಟಾ ಥನ್ ಬರ್ಗ್ ಗೆ ಟೂಲ್ ಕಿಟ್ ಅನ್ನು ರಚಿಸಿರುವ ಮಹತ್ವದ ಮಾಹಿತಿ ಲಭ್ಯವಾಗಿದೆ. ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬೆಂಬಲ ಪಡೆಯುವ ನಿಟ್ಟಿನಲ್ಲಿ ಈ ಟೂಲ್ ಕಿಟ್ ಅನ್ನು ರಚಿಸಿದ್ದಲ್ಲದೇ ಇದನ್ನು ದೊಡ್ಡ ಪ್ರಮಾಣದ ಬಿರುಕನ್ನು ಉಂಟು ಮಾಡುವ ಸಂಚಿನ ಭಾಗವಾಗಿ ಗ್ರೆಟಾ ಥನ್ ಬರ್ಗ್ ಗೆ ನೀಡಲಾಗಿತ್ತು ಎಂದು ವಿವರಿಸಿದೆ.

ಧಾಲಿವಾಲ್  ಭಾರತದ ಭದ್ರತಾ ಏಜೆನ್ಸಿಯ ಕಣ್ಗಾವಲಿನಲ್ಲಿದ್ದು, ಈತ ಖಲಿಸ್ತಾನಿ ಪರ ಸಹಾನುಭೂತಿ ಹೊಂದಿದ್ದು, ವಿದೇಶದಲ್ಲಿ ನಡೆದ ಹಲವು ಭಾರತದ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವುದಾಗಿ ವರದಿ ತಿಳಿಸಿದೆ.

ಕೆನಡಾ ಮೂಲದ ಧಾಲಿವಾಲ್  ಸ್ವಯಂಘೋಷಿತ ಸಿಖ್ ಪ್ರತ್ಯೇಕತವಾದಿಯಾಗಿದ್ದು, ಖಲಿಸ್ತಾನಿ ಉನ್ನತ ಮುಖಂಡರ ನಿಕಟವರ್ತಿಯಾಗಿದ್ದಾನೆ. ಪಿಆರ್ ಏಜೆನ್ಸಿ ಸೇರಿದಂತೆ ಹಲವಾರು ಗುಪ್ತಚರ ಸಂಸ್ಥೆಗಳು ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ವಿವಾದಿತ ಟೂಲ್ ಕಿಟ್ ನ ಬಗ್ಗೆ ಪರಿಶೀಲನೆ ನಡೆಸುತ್ತಿದೆ.

ರೈತರ ಹೋರಾಟದ ಮೂಲಕ ಬೆಂಬಲ ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಕಳಂಕ ತರುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಸಂಚು ಇದಾಗಿತ್ತು ಎಂಬುದಕ್ಕೆ ಟೂಲ್ ಕಿಟ್ ಪುರಾವೆ ಒದಗಿಸಿದಂತಾಗಿದೆ ಎಂದು ವರದಿ ಹೇಳಿದೆ.

ಜನವರಿ 26ರಂದು ಭಾರತದ ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ ನಡೆಸಿದ ದಿನವೇ ಕೆನಡಾದಲ್ಲಿರುವ ಭಾರತದ ರಾಯಭಾರ ಕಚೇರಿ ಹೊರಭಾಗದಲ್ಲಿ ಧಾಲಿವಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಈ ಸಂದರ್ಭದಲ್ಲಿ ನಮ್ಮ ಮುಖ್ಯ ಗುರಿ ಭಾರತವನ್ನು ಹಲವು ಭಾಗಗಳಾಗಿ ವಿಭಜಿಸುವುದಾಗಿದೆ ಎಂದು ಭಾಷಣ ಮಾಡಿರುವುದು ವಿಡಿಯೋ ಕ್ಲಿಪ್ ನಲ್ಲಿ ದಾಖಲಾಗಿದೆ. ಧಾಲಿವಾಲ್ ಚಿಕ್ಕಪ್ಪ, ಖಲಿಸ್ತಾನಿ ಉಗ್ರ 1984ರಲ್ಲಿ ಭಾರತದ ಭದ್ರತಾ ಪಡೆ ನಡೆಸಿದ ಬ್ಲೂ ಸ್ಟಾರ್ ಆಪರೇಶನ್ ನಲ್ಲಿ ಹತ್ಯೆಗೈದಿತ್ತು.

ಗ್ರೆಟಾ ಥನ್ ಬರ್ಗ್ ಟೂಲ್ ಕಿಟ್ ಅನ್ನು ಯಾರು ರಚಿಸಿದ್ದು ಎಂಬ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ಪೊಲೀಸರು ಶುಕ್ರವಾರ ಗೂಗಲ್ ಗೆ ಇ ಮೇಲ್ ಮಾಡಿದ್ದರು. ಇಂಟರ್ನೆಟ್ ಪ್ರೋಟೊಕಾಲ್ ಪ್ರಕಾರ ಟೂಲ್ ಕಿಟ್ ಗೆ ಯಾವ ಪ್ರದೇಶದಿಂದ ರಚಿಸಿ, ದಾಖಲೆ ಅಪ್ ಲೋಡ್ ಮಾಡಲಾಗಿದೆ ಎಂಬ ಬಗ್ಗೆ ಐಪಿ ವಿಳಾಸ ನೀಡುವಂತೆ ದೆಹಲಿ ಪೊಲೀಸರು ಕೇಳಿಕೊಂಡಿದ್ದು, ಆ ಹಿನ್ನೆಲೆಯಲ್ಲಿ ಧಾಲಿವಾಲ್ ಸಂಚು ಬಯಲಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.