ಮತ ಹಾಕದಿದ್ದರೆ ಸರಕಾರ ದೂಷಿಸುವ ಹಕ್ಕಿಲ್ಲ
Team Udayavani, Feb 6, 2017, 3:45 AM IST
ಹೊಸದಿಲ್ಲಿ: “ನೀವು ಮತದಾನ ಮಾಡಿಲ್ಲವೇ? ಹಾಗಿದ್ದರೆ ಸರಕಾರಗಳನ್ನು ದೂಷಿಸುವ ಅಥವಾ ಪ್ರಶ್ನಿಸುವ ಅಧಿಕಾರವೇ ಇಲ್ಲ’ ಹೀಗೆಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ದೇಶಾದ್ಯಂತ ಇರುವ ಒತ್ತುವರಿಯನ್ನು ತೆರವುಗೊಳಿಸಲು ಆದೇಶ ನೀಡಬೇಕೆಂದು ದಿಲ್ಲಿ ಮೂಲದ ಎನ್ಜಿಒ ಅರ್ಜಿ ಸಲ್ಲಿಸಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಎನ್ಜಿಒದ ಧನೇಶ್ ಈಶಧನ್ ಅವರಿಗೆ ಸೂಚ್ಯವಾಗಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರನ್ನೊಳಗೊಂಡ ಪೀಠ ತಿಳಿಯಪಡಿಸಿತು. ದೇಶಾದ್ಯಂತ ಇರುವ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುವ ಬಗ್ಗೆ ರಾಜ್ಯ ಸರಕಾರಗಳಿಗೆ ಆದೇಶ ನೀಡಬೇಕು ಎನ್ನುವುದು ಧನೇಶ್ ಈಶಧನ್ರ ಅರ್ಜಿಯ ಅರಿಕೆಯಾಗಿತ್ತು. ಎಲ್ಲ ರಾಜ್ಯ ಸರಕಾರಗಳಿಗೆ ಅನುಗುಣವಾಗಿ ಆದೇಶಿಸಲು ಸಾಧ್ಯವಿಲ್ಲ. ಕೆಲವೊಂದು ವಿಚಾರಗಳು ರಾಜ್ಯ ಸರಕಾರಗಳ ವ್ಯಾಪ್ತಿಗೆ ಒಳಪಟ್ಟಿರುತ್ತವೆ.
ಹೀಗಾಗಿ ವಿವಿಧ ಹೈಕೋರ್ಟ್ಧಿಗಳಿಗೇ ಮನವಿ ಮಾಡಿಕೊಳ್ಳಿ ಎಂದು ನ್ಯಾಯಪೀಠ ಹೇಳಿತು. ಎಲ್ಲದಕ್ಕೂ ಸರಕಾರಗಳನ್ನೇ ಹೊಣೆ ಮಾಡಲು ಸಾಧ್ಯವಿಲ್ಲ ಎಂದ ನ್ಯಾಯಪೀಠ ಈಶಧನ್ ಅವರು ಮತ ಚಲಾಯಿಸಿದ್ದಾರೆಯೇ ಎಂದು ಪ್ರಶ್ನಿಸಿತು. ಈ ಸಂದರ್ಭದಲ್ಲಿ ಅವರು ಒಂದೇ ಒಂದು ಬಾರಿ ತಾವು ಮತಹಾಕಲಿಲ್ಲ ಎಂದು ಒಪ್ಪಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ