ಸೂರ್ಯಗ್ರಹಣ ಮೋಕ್ಷ: ಬಾನಂಗಳದಲ್ಲಿ ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನಾಟ
ಭಾರತದಲ್ಲಿ ಅತ್ಯಪರೂಪದ ಕಂಕಣ ಸೂರ್ಯಗ್ರಹಣ ಮೊದಲು ಗೋಚರವಾಗಿದ್ದು ಕೇರಳದ ಚೆರ್ವತ್ತೂರಿನಲ್ಲಿ
Team Udayavani, Dec 26, 2019, 12:42 PM IST
ನವದೆಹಲಿ:ಅಪರೂಪದ ಕಂಕಣ ಸೂರ್ಯಗ್ರಹಣ ಗುರುವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಿದ್ದು, 11.15ಕ್ಕೆ ಸೂರ್ಯಗ್ರಹಣ ಮುಕ್ತಾಯವಾಯಿತು. ಈ ಬಾರಿ ಅತಿ ಹೆಚ್ಚು ಸ್ಪಷ್ಟವಾಗಿ ಗ್ರಹಣ ಕರ್ನಾಟಕದ ಮಂಗಳೂರು, ಮೈಸೂರು ಹಾಗೂ ಮಡಿಕೇರಿ ಭಾಗದಲ್ಲಿ ಗೋಚರಿಸಿದ್ದು ವಿಶೇಷವಾಗಿತ್ತು.
ಸೌದಿ ಅರೇಬಿಯಾದ ರಿಯಾದ್ ನಲ್ಲಿ ಆರಂಭಿಕವಾಗಿ ಭಾಗಶಃ ಸೂರ್ಯಗ್ರಹಣ ಗೋಚರಿಸಿತ್ತು. ಭಾರತದಲ್ಲಿ ಅತ್ಯಪರೂಪದ ಕಂಕಣ ಸೂರ್ಯಗ್ರಹಣ ಮೊದಲು ಗೋಚರವಾಗಿದ್ದು ಕೇರಳದ ಚೆರ್ವತ್ತೂರಿನಲ್ಲಿ. ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಜನರು ಬಾನಂಗಳದಲ್ಲಿ ನಡೆದ ಕಂಕಣ ಸೂರ್ಯಗ್ರಹಣದ ಕೌತುಕವನ್ನು ಸೌರ ಕನ್ನಡಕಗಳನ್ನು ಧರಿಸಿ ಕಣ್ತುಂಬಿಕೊಂಡರು.
ವರ್ಷದ ಕಂಕಣ ಸೂರ್ಯಗ್ರಹಣ ಬೆಳಗ್ಗೆ 9.04 ನಿಮಿಷಕ್ಕೆ ಗೋಚರವಾಗಿದ್ದು, ಗರಿಷ್ಠ ಪ್ರಮಾಣದಲ್ಲಿ 10.47ರ ಸುಮಾರಿಗೆ ಗೋಚರವಾಗತೊಡಗಿತ್ತು. ಪೂರ್ಣ ಪ್ರಮಾಣದಲ್ಲಿ ಫೆಸಿಪಿಕ್ ಓಸಿಯನ್ಸ್ ನ ಗುವಾಂನಲ್ಲಿ 12.30ಕ್ಕೆ ಕೊನೆಯದಾಗಿ ಸೂರ್ಯಗ್ರಹಣ ಗೋಚರವಾಗಿ ಮುಕ್ತಾಯವಾಗಿತ್ತು.
ಕಂಕಣ ಸೂರ್ಯಗ್ರಹಣ ಪೂರ್ಣ, ಭಾಗಶಃ ಹಾಗೂ ಉಂಗುರಾಕೃತಿ ಸೇರಿದಂತೆ ಮೂರು ವಿಧದಲ್ಲಿ ಗೋಚರವಾಗಿತ್ತು. ಸೂರ್ಯಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಹೋಮ, ಹವನ ನಡೆಯಿತು. ಬಹುತೇಕ ದೇವಾಲಯಗಳು ಸೂರ್ಯಗ್ರಹಣ ಸಮಯದಲ್ಲಿ ಮುಚ್ಚಲಾಗಿದ್ದು, ಸೂರ್ಯಗ್ರಹಣ ಮೋಕ್ಷದ ಬಳಿಕ ಶುದ್ದಿಕಾರ್ಯ ನಡೆಸಿ ಪೂಜೆ, ಪುನಸ್ಕಾರ ಆರಂಭಿಸಿದ್ದವು.
ದಕ್ಷಿಣ ಕನ್ನಡ ಬಹುತೇಕ ಮಸೀದಿಗಳಲ್ಲಿ ನಮಾಜ್ ಮಾಡಲಾಯಿತು. ಮಂಗಳೂರು ಬಂದರಿನ ಜುಮ್ಮಾ ಮಸೀದಿಯಲ್ಲಿ ಖತೀಬ್ ಸ್ವದಕತುಲ್ಲಾಹ್ ಫೈಝಿ ನೇತೃತ್ವದಲ್ಲಿ ನಮಾಜ್ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ