ದಲಿತ ನಾಯಕನ ಹತ್ಯೆ ಖಂಡಿಸಿ ಗಲಭೆ: ಕಾಲ್ತುಳಿತಕ್ಕೆ ಬಾಲಕ ಬಲಿ
ಹಲವು ವಾಹನಗಳಿಗೆ ಬೆಂಕಿ, ಕಲ್ಲುತೂರಾಟ
Team Udayavani, Aug 16, 2020, 12:24 AM IST
ಲಕ್ನೋ: ಉತ್ತರಪ್ರದೇಶದ ಅಜಂಗಢದ ತರ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ದಲಿತ ನಾಯಕರೊಬ್ಬರ ಹತ್ಯೆ ನಡೆದಿದ್ದು, ತದನಂತರ ಭಾರೀ ಹಿಂಸಾಚಾರ ಭುಗಿಲೆದ್ದಿದೆ. ಶನಿವಾರ ಬೆಳಗ್ಗೆ ನಡೆದ ಗಲಭೆ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾಲು¤ಳಿತಕ್ಕೆ ಬಲಿಯಾಗಿದ್ದಾನೆ. ಇದರಿಂದ ಬನ್ಸ್ಗ್ರಾಮ್ ಪ್ರದೇಶ ಉದ್ವಿಗ್ನಗೊಂಡಿದೆ.
ಶುಕ್ರವಾರ ರಾತ್ರಿ ದಲಿತ ನಾಯಕ ಸತ್ಯಮೇವ ಜಯತೇ ಪಪ್ಪು ಎಂಬವರನ್ನು ಕೊಲೆ ಮಾಡಲಾಗಿತ್ತು. ಇದರಿಂದ ಕೆರಳಿದ ಅವರ ಅಪಾರ ಅಭಿಮಾನಿಗಳು ಹಿಂಸಾತ್ಮಕ ಪ್ರತಿಭಟನೆ ಆರಂಭಿಸಿದ್ದರು. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾಲು¤ಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಈ ಘಟನೆಯಿಂದಾಗಿ ಇನ್ನಷ್ಟು ಕೆರಳಿದ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ಘಟನೆಯ ಬಗ್ಗೆ ಬಿಎಸ್ಪಿ ನಾಯಕಿ ಮಾಯಾವತಿ ಆಕ್ರೋಶ ವ್ಯಕ್ತ ಪಡಿಸಿದ್ದು, ಉತ್ತರ ಪ್ರದೇಶದ ಬಿಜೆಪಿ ಸರಕಾರ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿ ಸಿದ್ದಾರೆ. ಇದೇ ವೇಳೆ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಹಿಂಸಾಚಾರ ನಡೆಸಿದವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕೇಸು ದಾಖಲಿಸಿ, ಆಸ್ತಿಪಾಸ್ತಿಯನ್ನು ವಶಪಡಿಸಿಕೊಳ್ಳಿ ಎಂದು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ