New Parliament ಧಾರ್ಮಿಕ ವಿಧಿ ವಿಧಾನಗಳನ್ನು ಮಾಡಿದ್ದು ಸರಿಯಲ್ಲ: ಪವಾರ್
ನೆಹರು ಅವರ ವೈಜ್ಞಾನಿಕ ಮನೋಧರ್ಮಕ್ಕೆ ವಿರುದ್ಧವಾದದ್ದು ನಡೆದಿದೆ
Team Udayavani, May 28, 2023, 5:42 PM IST
ಹೊಸದಿಲ್ಲಿ: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವಿವಿಧ ಆಚರಣೆಗಳು ದೇಶವನ್ನು ದಶಕಗಳಷ್ಟು ಹಿಂದಕ್ಕೆ ಕೊಂಡೊಯ್ಯುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.
ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, “ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಆಧುನಿಕ ಭಾರತದ ಪರಿಕಲ್ಪನೆಯ ಬಗ್ಗೆ ಮಾತನಾಡುವುದಕ್ಕೂ ಮತ್ತು ಇಂದು ನವದೆಹಲಿಯ ಹೊಸ ಸಂಸತ್ ಭವನದಲ್ಲಿ ನಡೆಸಿದ ಆಚರಣೆಗಳ ಸರಣಿಗೂ ಅಜಗಜ ವ್ಯತ್ಯಾಸವಿದೆ. ನಾವು ನಮ್ಮ ದೇಶವನ್ನು ದಶಕಗಳಿಂದ ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆ ಎಂದು ನಾನು ಹೆದರುತ್ತೇನೆ” ಎಂದರು.
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ವೈಜ್ಞಾನಿಕ ಮನೋಧರ್ಮವನ್ನು ಹೊಂದಿರುವ ಸಮಾಜವನ್ನು ಕಲ್ಪಿಸಿದ್ದರು, ಆದರೆ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ನಡೆದದ್ದು ಅದಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಲೋಕಸಭೆಯ ಸಭಾಂಗಣದಲ್ಲಿ ವಿಶೇಷ ಆವರಣದಲ್ಲಿ ಹವನ, ಬಹು ಧರ್ಮದ ಪ್ರಾರ್ಥನಾ ಸಮಾರಂಭ ಮತ್ತು ಸೆಂಗೋಲ್ ಅಳವಡಿಕೆಯನ್ನು ಒಳಗೊಂಡಿರುವ ಭವ್ಯ ಸಮಾರಂಭದಲ್ಲಿ ಪ್ರಧಾನಿ ಮೋದಿ ಹೊಸ ಕಟ್ಟಡವನ್ನು ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ