33ನೇ ವರ್ಷಕ್ಕೆ ಗನ್ ಹಿಡಿದು ಹಿಜ್ಬುಲ್ ಕಮಾಂಡರ್ ಆಗುವ ಮೊದಲು ರಿಯಾಝ್ ಗಣಿತ ಶಿಕ್ಷಕನಾಗಿದ್ದ!

ರಿಯಾಜ್ ನೈಕೂ 1985ರಲ್ಲಿ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದ ಬೈಗ್ ಪೋರಾ ಗ್ರಾಮದಲ್ಲಿ ಜನಿಸಿದ್ದ

Team Udayavani, May 6, 2020, 5:40 PM IST

33ನೇ ವರ್ಷಕ್ಕೆ ಗನ್ ಹಿಡಿದು ಹಿಜ್ಬುಲ್ ಕಮಾಂಡರ್ ಆಗುವ ಮೊದಲು ರಿಯಾಝ್ ಗಣಿತ ಶಿಕ್ಷಕನಾಗಿದ್ದ

ಜಮ್ಮು-ಕಾಶ್ಮೀರ: ಕೋವಿಡ್ 19 ಲಾಕ್ ಡೌನ್ ನಡುವೆ ವ್ಯಾಪಾರ, ವಹಿವಾಟು ಸ್ಥಗಿತಗೊಂಡಿದ್ದರೆ, ಮತ್ತೊಂದೆಡೆ ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿತ್ತು. ಇತ್ತೀಚೆಗಷ್ಟೇ ಭಾರತೀಯ ಸೇನೆಯ ಐವರು ಯೋಧರನ್ನು ಕಳೆದುಕೊಳ್ಳುವಂತಾಗಿತ್ತು. ಇದಕ್ಕೆ ಪ್ರತೀಕಾರ ಎಂಬಂತೆ ಗುರುವಾರ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಜಮ್ಮು ಕಾಶ್ಮೀರದ ಕಮಾಂಡರ್ ರಿಯಾಝ್ ನೈಕೂ ಜಂಟಿ ಕಾರ್ಯಾಚರಣೆಯ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.

ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ನೈಕೂ ಹತ್ಯೆಗೈದಿರುವುದು ಜಮ್ಮು ಕಾಶ್ಮೀರದ ಸ್ಥಳೀಯ ಉಗ್ರಗಾಮಿ ಸಂಘಟನೆಗಳಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಅದರಲ್ಲಿಯೂ ಮುಖ್ಯವಾಗಿ ಪಾಕ್ ಬೆಂಬಲಿತ ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಎಂದು ವರದಿ ತಿಳಿಸಿದೆ.

ರಿಯಾಜ್ ನೈಕೂ 1985ರಲ್ಲಿ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದ ಬೈಗ್ ಪೋರಾ ಗ್ರಾಮದಲ್ಲಿ ಜನಿಸಿದ್ದ, ತನ್ನ 33ನೇ ವಯಸ್ಸಿಗೆ ಗನ್ ಹಿಡಿಯಲು ಆರಂಭಿಸಿದ್ದ. ಪುಲ್ವಾಮಾ ಜಿಲ್ಲೆಯ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದ. ಉಗ್ರಗಾಮಿ ಸಂಘಟನೆಗೆ ಸೇರುವ ಮುನ್ನ ನೈಕೂ ಖಾಸಗಿ ಶಾಲೆಯಲ್ಲಿ ಎರಡು ವರ್ಷಗಳ ಕಾಲ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಎಂದು ವರದಿ ವಿವರಿಸಿದೆ! 2010-12ರಲ್ಲಿ ಶಿಕ್ಷಕನಾಗಿದ್ದ ಈತ 2012ರಲ್ಲಿ ನಾಪತ್ತೆಯಾಗಿದ್ದ.

ಹೀಗೆ ನಾಪತ್ತೆಯಾಗಿದ್ದ ರಿಯಾಜ್ ಉಗ್ರಗಾಮಿ ಸಂಘಟನೆ ಸೇರ್ಪಡೆಗೊಂಡಿದ್ದ. ನೈಕೂ ಅಲಿಯಾಸ್ ಮೊಹಮ್ಮದ್ ಬಿನ್ ಖ್ವಾಸಿಂ ಬರೋಬ್ಬರಿ 11 ಭಯೋತ್ಪಾದಕ ಸಂಬಂಧಿ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದ ೀ ಹಿನ್ನೆಲೆಯಲ್ಲಿ ಆತನ ತಲೆಗೆ ಜಮ್ಮು ಕಾಶ್ಮೀರ ಸರ್ಕಾರ 12 ಲಕ್ಷ ರೂಪಾಯಿ ಘೋಷಿಸಿತ್ತು.

2016ರಲ್ಲಿ ಹಿಜ್ಜುಲ್ ಮುಜಾಹಿದೀನ್ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ಹತ್ಯೆಯ ನಂತರ ರಿಯಾಝ್ ನೈಕೂ ನೂತನ ಕಮಾಂಡರ್ ಆಗಿ ಆಯ್ಕೆಯಾಗಿದ್ದ. 2017ರಲ್ಲಿ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯಿಂದ ಝಾಕೀರ್ ಮೂಸಾ ಹೊರಬಂದು ಸ್ವಂತ ಅನ್ಸಾರ್ ಘಾಜ್ ವಾತುಲ್ ಹಿಂದ್ ಎಂಬ ಉಗ್ರಗಾಮಿ ಸಂಘಟನೆ ಹುಟ್ಟುಹಾಕಿದ್ದ. ಅಲ್ಲದೇ ಇದು ಅಲ್ ಖೈದಾ ಜತೆ ಕೈಜೋಡಿಸಿರುವುದಾಗಿಯೂ ಘೋಷಿಸಿದ್ದ. 2019ರ ಮೇ 23ರಂದು ತ್ರಾಲ್ ನಲ್ಲಿ ಭದ್ರತಾಪಡೆಯ ಎನ್ ಕೌಂಟರ್ ಗೆ ಮೂಸಾ ಬಲಿಯಾಗಿದ್ದ.

ಮೋಸ್ಟ್ ವಾಂಟೆಡ್ ಉಗ್ರ ರಿಯಾಝ್ ನ್ನು ಪುಲ್ವಾಮಾ ಜಿಲ್ಲೆಯ ಹುಟ್ಟೂರು ಬೈಗ್ ಪೋರಾ ಗ್ರಾಮದಲ್ಲಿ ಮಂಗಳವಾರ ಸೇನಾಪಡೆ ಪತ್ತೆ ಹಚ್ಚಿ ಕಾರ್ಯಾಚರಣೆಗೆ ಇಳಿದಿದ್ದವು. ಸತತ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಕಮಾಂಡರ್ ರಿಯಾಝ್ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.