ರಾಧಾ ಕೃಷ್ಣಾ ಮಾಥುರ್ ಲಡಾಖ್ ನ ಪ್ರಥಮ ಲೆಫ್ಟಿನೆಂಟ್ ಗವರ್ನರ್, ಯಾರಿವರು?
Team Udayavani, Oct 31, 2019, 3:04 PM IST
ನವದೆಹಲಿ:ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಅಂತ್ಯಗೊಂಡಿದ್ದು ಇದೀಗ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ ಅಸ್ತಿತ್ವಕ್ಕೆ ಬಂದಿದೆ. ಮಾಜಿ ಐಎಎಸ್ ಅಧಿಕಾರಿ ರಾಧಾ ಕೃಷ್ಣಾ ಮಾಥುರ್ ಲಡಾಖ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಧಾ ಕೃಷ್ಣಾ ಮಾಥುರ್ ಅವರು ಚೀಫ್ ಇನ್ ಫಾರ್ಮೆಶನ್ ಕಮಿಷನರ್ ಆಗಿದ್ದು 2018ರಲ್ಲಿ ನಿವೃತ್ತಿಯಾಗಿದ್ದರು. 1977ರ ತ್ರಿಪುರಾ ಕೆಡರ್ ನ ಐಎಎಸ್ ಅಧಿಕಾರಿಯಾಗಿದ್ದರು. ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕವಾಗುವ ಮೊದಲು ನಿವೃತ್ತ ಐಎಎಸ್ ಅಧಿಕಾರಿ ಮಾಥುರ್(65ವರ್ಷ) ಅವರು ಕೇಂದ್ರದ ರಕ್ಷಣಾ ಕಾರ್ಯದರ್ಶಿಯಾಗಿದ್ದರು.
ರಾಧಾಕೃಷ್ಣ ಐಐಟಿ ಕಾನ್ಪುರ್ ಹಳೆ ವಿದ್ಯಾರ್ಥಿಯಾಗಿದ್ದು, ಸ್ಲೋವೇನಿಯಾದ ಐಸಿಪಿಇ(ಇಂಟರ್ ನ್ಯಾಶನಲ್ ಸೆಂಟರ್ ಫಾರ್ ಪ್ರೊಮೋಷನ್ ಆಫ್ ಎಂಟರ್ ಪ್ರೈಸಸ್)ನಲ್ಲಿ ಎಂಬಿಎ ಪದವಿ ಪಡೆದಿದ್ದರು.
ಈ ಮೊದಲು ತ್ರಿಪುರಾದ ಮುಖ್ಯ ಕಾರ್ಯದರ್ಶಿಯಾಗ ಕೆಲಸ ನಿರ್ವಹಿಸಿದ್ದರು. 2011ರಲ್ಲಿ ಯೂನಿಯನ್ ಮೈಕ್ರೋ, ಸಣ್ಣ ಮತ್ತು ಮಧ್ಯಮ ಎಂಟರ್ ಪ್ರೈಸಸ್ ನ ಕಾರ್ಯದರ್ಶಿಯಾಗಿದ್ದರು. ಬಳಿಕ ಡಿಫೆನ್ಸ್ ಪ್ರೊಡಕ್ಷನ್ ಸೆಕ್ರೆಟರಿಯಾಗಿ ನೇಮಕವಾಗಿದ್ದರು. 2015ರಲ್ಲಿ ಚೀಫ್ ಇನ್ ಫಾರ್ಮೆಶನ್ ಕಮಿಷನರ್ ಆಗಿ ಸೇವೆ ಸಲ್ಲಿಸಿ ಮೂರು ವರ್ಷದ ನಂತರ ನಿವೃತ್ತಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ