ಆರ್ಎಲ್ಎಸ್ಪಿ ನಾಯಕನ ಕಗ್ಗೊಲೆ; ಹಿಂಸಾತ್ಮಕ ಪ್ರತಿಭಟನೆ, ಫೈರಿಂಗ್
Team Udayavani, Aug 14, 2018, 11:03 AM IST
ಹಾಜೀಪುರ, ಬಿಹಾರ :ರಾಷ್ಟ್ರೀಯ ಲೋಕ ಸಮತಾ ಪಕ್ಷದ (ಆರ್ಎಲ್ಎಸ್ಪಿ) ನಾಯಕ ಮನೀಶ್ ಸಹಾನಿ ಅವರನ್ನು ಬಿಹಾರದ ವೈಶಾಲಿ ಜಿಲ್ಲೆಯ ಜಂದಹಾನ್ ಪ್ರದೇಶದಲ್ಲಿರುವ ಅವರ ಆಫೀಸಿನಲ್ಲೇ ನಿನ್ನೆ ಸೋಮವಾರ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಹಾನಿ ಅವರು ಜಂದಹಾನ್ ಬ್ಲಾಕ್ ಆಫೀಸಿನಲ್ಲಿರುವ ತಮ್ಮ ಚೇಂಬರ್ನಿಂದ ಹೊರ ಬರುತ್ತಿದ್ದಂತೆಯೇ ಬೈಕ್ನಲ್ಲಿ ಬಂದ ಅಪರಿಚಿತ ಹಂತಕರು ಸಹಾನಿ ಅವರ ಮೇಲೆ ಯದ್ವಾತದ್ವಾ ಗುಂಡು ಹಾರಿಸಿದರು. ಕೊಲೆ ಕೃತ್ಯ ಮುಗಿಸಿದ ಕೂಡಲೇ ಹಂತಕರು ಅಲ್ಲಿಂದ ಪರಾರಿಯಾದರು.
ತೀವ್ರವಾಗಿ ಗಾಯಗೊಂಡ ಸಹಾನಿ ಅವರನ್ನು ಒಡನೆಯೇ ಜಂದಹಾನ್ನಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಯ್ಯಲಾಯಿತು. ಅಲ್ಲಿನ ವೈದ್ಯರು ಹಾಜೀಪುರಕ್ಕೆ ಒಯ್ಯಲು ಸೂಚಿಸಿದರು. ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಸಹಾನಿ ಕೊನೆಯುಸಿರೆಳೆದರು.
ಘಟನೆಯನ್ನು ಅನುಸರಿಸಿ ಸಹಾನಿ ಅವರ ಬೆಂಬಲಿಗರು ಜಂದಹಾನ್ ಪೊಲೀಸ್ ಠಾಣೆ ಎದುರು ಹಿಂಸಾತ್ಮಕ ಪ್ರತಿಭಟನೆ ನಡೆಸಿದರು.
ಆದರೆ ಅವರು ಪೊಲೀಸ್ ಠಾಣೆಯ ಮೇಲೆ ಕಲ್ಲೆಸೆಯಲು ಆರಂಭಿಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಪ್ರತಿಭಟನಕಾರರನ್ನು ಚದುರಿಸಿದರು.
ಪೊಲೀಸ್ ಫೈರಿಂಗ್ನಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ.
ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರೂ ಆರ್ಎಲ್ಎಸ್ಪಿ ನಾಯಕರೂ ಆಗಿರುವ ಉಪೇಂದ್ರ ಕುಶವಾಹಾ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿ, ಪೊಲೀಸ್ ಠಾಣೆ ಸಮೀಪದಲ್ಲೇ ಇದ್ದರೂ ಹಂತಕರು ಸ್ಥಳದಿಂದ ಪರಾರಿಯಾದದ್ದು ಹೇಗೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ