18 ಹಳ್ಳಿಗಳ ಜನರ ಸ್ಥಳಾಂತರ: ತಿರುಪತಿಗೆ ರಸ್ತೆ, ರೈಲು ಸಂಪರ್ಕ ಕಡಿತ
ಬೆಂಗಳೂರು, ಚೆನ್ನೈ ಹೈದರಾಬಾದ್ ಮೂಲಕ ಸಂಪರ್ಕಿಸುವ ಎಲ್ಲ ರಸ್ತೆಗಳಿಗೂ ಹಾನಿ
Team Udayavani, Nov 23, 2021, 10:10 AM IST
ತಿರುಪತಿ: ಇತ್ತೀಚೆಗೆ ಸುರಿದ ಮಳೆಯಿಂದಾಗಿ ವಿವಿಧ ಮಾರ್ಗಗಳಿಂದ ತಿರುಪತಿಯನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳು ಮತ್ತು ರಸ್ತೆಗಳು ಹಾಳಾಗಿರುವುದರಿಂದ ಶ್ರೀಕ್ಷೇತ್ರಕ್ಕೆ ಆಗಮಿಸುವವರಿಗೆ ತೀವ್ರ ತೊಂದರೆಯಾಗಿದೆ.
ಬೆಂಗಳೂರು, ಚೆನ್ನೈ ಹಾಗೂ ಹೈದರಾಬಾದ್ನಿಂದ ತಿರುಪತಿಗೆ ಹೋಗುವ ಎಲ್ಲ ಮಾರ್ಗಗಳೂ ಬಂದ್ ಆಗಿವೆ. ಮತ್ತೊಂದೆಡೆ, ತಿರುಪತಿಯನ್ನು ಸಂಪರ್ಕಿಸುವ ರೈಲು ಸಂಚಾರವನ್ನೂ ಸ್ಥಗಿತಗೊಳಿಸಲಾಗಿದ್ದು ತಿರುಪತಿಗೆ ಸಂಪರ್ಕವೇ ತಪ್ಪಿಹೋಗಿದೆ.
ಮಳೆಯಿಂದಾಗಿ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಸುತ್ತಲೂ ತುಂಬಿಕೊಂಡಿದ್ದ ಮಳೆ ನೀರನ್ನು ಬೇರೆಡೆಗೆ ಪಂಪ್ಔಟ್ ಮಾಡಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಇದರ ನಡುವೆಯೇ ತಿರುಪತಿ ಬಳಿಯ ರಾಯುಲು ಚೆರುವು ಜಲಾಶಯವು ನೀರಿನ ಅಗಾಧ ಒತ್ತಡದಿಂದಾಗಿ ಒಡೆಯುವ ಹಂತಕ್ಕೆ ಬಂದಿದೆ. ಅಣೆಕಟ್ಟಿನಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು ಸುತ್ತಲಿನ ಜನರಿಗೆ ಭೀತಿಗೊಳಗಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಚಿತ್ತೂರು ಜಿಲ್ಲಾಡಳಿತ 18 ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.
ಇದನ್ನೂ ಓದಿ:ಜಿಮ್ ನಲ್ಲಿ ವರ್ಕೌಟ್ : ವಧುವಿನ ವೆರೈಟಿ ಪ್ರೀವೆಡ್ಡಿಂಗ್ ಫೋಟೋ ಶೂಟ್ !
ದರ್ಶನಕ್ಕೆ ಮತ್ತೆ ಅವಕಾಶ: ಟಿಟಿಡಿ:
ನ. 18ರಿಂದ ನ. 30ವರೆಗಿನ ಅವಧಿಯಲ್ಲಿ ತಿರುಮಲದ ಶ್ರೀ ವೆಂಕ ಟೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಲು ಟಿಕೆಟ್ ಪಡೆದಿದ್ದ ಎಲ್ಲ ಭಕ್ತರಿಗೆ ಬೇರೆ ನಿರ್ದಿಷ್ಟ ದಿನಗಳಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಶ್ರೀ ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ (ಟಿಟಿಡಿ) ತಿಳಿಸಿದೆ. ದರ್ಶನ ಪಡೆಯದ ಭಕ್ತರಿಗಾಗಿ ಪ್ರತ್ಯೇಕ ಸಾಫ್ಟ್ ವೇರ್ ರೂಪಿಸಲಾಗುತ್ತದೆ. ಅದನ್ನು ಬಳಸಿ, ಭಕ್ತರು ಬೇರೊಂದು ದಿನ ದರ್ಶನಕ್ಕೆ ಅವಕಾಶ ಪಡೆಯ ಬಹುದು ಎಂದು ಟಿಟಿಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್